ಕಂಪ್ಯೂಟರ್, ಮೊಬೈಲ್ ಮತ್ತು ಇಂಟರ್ನೆಟ್ ಗಳ ವಿವಿಧ ಮೂಲಗಳನ್ನು ದುರ್ಬಳಕೆ ಮಾಡಿಕೊಂಡು ಕೆಲವು ದುಷ್ಕರ್ಮಿಗಳು ಸಾರ್ವಜನಿಕರನ್ನು ಮೋಸಗೊಳಿಸುವುದು, ವೈಯಕ್ತಿಕ ಬ್ಯಾಂಕ್ ಖಾತೆಗೆ ಕನ್ನ ಹಾಕುವಂಥದ್ದು, ಸುಳ್ಳು ಮಾಹಿತಿ ಮೂಲಕ ದಾರಿ ತಪ್ಪಿಸುವಂತದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಎನ್ . ಎಸ್. ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು. ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ […]
ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್.ಎಸ್ ಮಹತ್ವ ಪಾತ್ರ ವಹಿಸುತ್ತಿದೆ : ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅಭಿಪ್ರಾಯ
ಮೈಸೂರು ( ಮಾ.16) ದೇಶದ ಸಮಗ್ರ ಅಭಿವ್ರದ್ದಿ ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್ .ಎಸ್ ಮಹತ್ವದ ಪಾತ್ರ ವಹಿಸುತ್ತಿದೆ.ಗ್ರಾಮಗಳ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೈಸೂರು ವಿ.ವಿ ಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು. ಅವರು ಮಾರ್ಚ್ 16 ರಿಂದ 22 ರ ತನಕ ಮೈಸೂರಿನ ಸರಸ್ವತಿಪುರಂನ ಎನ್.ಎಸ್.ಎಸ್ ಭವನದಲ್ಲಿ ರಾಜ್ಯದ ವಿವಿಧ ಕಾಲೇಜಿನಿಂದ ಆಗಮಿಸಿದ ಎನ್ನೆಸ್ಸೆಸ್ ಯೋಜನಾಧಿಕಾರಿಗಳಿಗೆ ಆಯೋಜಿಸಿದ್ದ ಇಟಿಐ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ಉದ್ಘಾಟನೆ
ಗಂಗೊಳ್ಳಿ (ಮಾ. 17) : ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಕ್ರೀಡಾ ಶಿಕ್ಷಣದ ಜೊತೆ ಜೊತೆಯಲ್ಲಿ ವ್ಯಕ್ತಿತ್ವ ವಿಕಸನದ ಕಡೆಗೂ ಗಮನಹರಿಸಬೇಕು ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಡುಪಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ […]
ಮೂಡ್ಲಕಟ್ಟೆ ಎಂ. ಐ. ಟಿ. : ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ. ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು.
ವಿವೇಕ ಪದವಿಪೂರ್ವ ಕಾಲೇಜು ಕೋಟ : ಅರ್ಥಶಾಸ್ತ್ರ ಪಠ್ಯ ಆಧಾರಿತ ಕಾರ್ಯಗಾರ
ಕೋಟ (ಮಾ.16) : ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಅರ್ಥಶಾಸ್ತ್ರ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇದಿಕೆಯ ಒಂದು ದಿನದ ಪಠ್ಯ ಆಧಾರಿತ ಕಾರ್ಯಗಾರವು ಕೋಟ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ಜರಗಿತು. ಈ ಕಾರ್ಯಗಾರವನ್ನು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಭಗವಂತ ಕಟ್ಟಿಮನಿಯವರು ಉದ್ಘಾಟಿಸಿದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ರಾಮದೇವ […]
ಮೂಡ್ಲಕಟ್ಟೆ ಎಮ್.ಐ.ಟಿ. : ಕ್ಯಾಂಪಸ್ ಉದ್ಯೋಗ ಮೇಳ
ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಇದೇ ತಿಂಗಳ 26 ಹಾಗೂ 27ನೇ ದಿನಾಂಕದಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಶ್ರೀ ಶಿವಶಂಕರಿ ದೇವಾಲಯ ವತಿಯಿಂದ ಗಾಯಕ ಗಣೇಶ್ ಗಂಗೊಳ್ಳಿರವರಿಗೆ ಸನ್ಮಾನ
ಕುಂದಾಪುರ (ಮಾ 16): ಮಹಾ ಶಿವರಾತ್ರಿಯ ಆಚರಣೆಯ ಪ್ರಯುಕ್ತ ಮಾರ್ಚ್ 12 ರಂದು ಕುಂದಾಪುರ ತಾಲೂಕಿನ ಸೌಕೂರು ಶ್ರೀ ಶಿವಶಂಕರಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಈ ಸಂದರ್ಭದಲ್ಲಿ ಜಾನಪದ ಗಾಯಕ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಗಣೇಶ್ ಗಂಗೊಳ್ಳಿ ಇವರನ್ನು ದೇವಾಲಯದ ವತಿಯಿಂದ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಶ್ರೀ […]
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ವಾರ್ಷಿಕ ಕ್ರೀಡಾಕೂಟ
ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ 2020-21 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮಾರ್ಚ್ 10ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಫಾ.ವೆಲೆರಿಯನ್ ಮೆಂಡೋನ್ಸಾ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಿ.ಎಸ್.ಎನ್.ಎಲ್ ಉಡುಪಿ ವಲಯದ ನಿರ್ವಹಣಕಾರರಾದ ಎನ್ .ಸಂದೀಪ್ ರವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ […]
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ವಿಚಾರಗೋಷ್ಠಿ
ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ ಮಾನವಿಕ ಸಂಘ ಆಶ್ರಯದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣ ಎನ್ನುವ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಸಂಸ್ಥೆಯ ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಶ್ರೀ ಸಂಜಯ್ ಸಂಜಯ್ ನಾಯಕ್ ಆಗಮಿಸಿದ್ದರು. ಕಾಲೇಜಿನ ಮಾನವಿಕ ಸಂಘದ ಸಂಯೋಜಕರಾದ ಉಪನ್ಯಾಸಕಿ ಲೋಯಿಲೀಸಾ ಹಾಗೂ ಸಹ ಸಂಯೋಜಕರಾದ […]










