ಉಡುಪಿ (ಜೂನ್, 06) : CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಸೈಬರ್ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಅವಿಷ್ಕಾರ ತಂತ್ರ, ಸೃಜನಶೀಲತೆ, ತಂತ್ರಜ್ಞಾನದ ಸದ್ಬಳಕೆ, ಸೈಬರ್ ಸೆಕ್ಯೂರಿಟಿ ಕುರಿತಾದ ಅರಿವು ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೈಬರ್ ಶಿಕ್ಷಾ ,ಇದು ಮೈಕ್ರೋಸಾಫ್ಟ್ ಹಾಗೂ ಡಿ.ಎಸ್.ಐ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಡಿ ಐಐಐಟಿ ಧಾರವಾಡ ಹಾಗೂ CySek ಕರ್ನಾಟಕದ ಜಂಟಿ ಆಶ್ರಯದಲ್ಲಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ವಿಶ್ವ ಪರಿಸರ ದಿನಾಚರಣೆ
ಶಿರ್ವ(ಜೂ, 5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ಸಿಸಿ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಘಟಕದ ಸ್ವಯಂಸೇವಕರ ಮನೆಯ ಅಂಗಳಗಳಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರು ಡಾ|ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಎನ್ಸಿಸಿ ಘಟಕದ ಸಹ ಸಂಯೋಜಕಿ ಯಶೋಧಾ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ಎನ್. ಎಸ್. ಎಸ್. ಘಟಕದ ವತಿಯಿಂದ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ
ಕುಂದಾಪುರ (ಜೂ, 5): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು (ಉಸಿರನಿತ್ತ ಪ್ರಕೃತಿಯನ್ನು ಹಸಿರಾಗಿಸೋಣ) ಎನ್ನುವ ಗಿಡ ನೆಡುವ ಅಭಿಯಾನಕ್ಕೆ ಜೂನ್ 5ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರ ಮಾರ್ಗದರ್ಶನದೊಂದಿಗೆ ಕಾಲೇಜಿನ ರಾಷ್ಟ್ರೀಯ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ : ಸಿಎ/ಸಿಎಸ್ ಕೋರ್ಸುಗಳಿಗೆ ದಾಖಲಾತಿ ಆರಂಭ
ಕುಂದಾಪುರ (ಜೂ. 05) : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸ್ಪೇಸ್) ಸಂಸ್ಥೆ ಸಿಎ/ಸಿಎಸ್ ಮತ್ತು ಸಿಎಂಎ ಪರೀಕ್ಷೆಗಳಿಗೆ ಅನೇಕ ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ತಯಾರಿಗೊಳಿಸಿ ಅಖಿಲ ಭಾರತ ಮಟ್ಟದಲ್ಲಿ ರ್ಯಾಂಕ್ ಮತ್ತು ಅತ್ಯುತ್ತಮ ಫಲಿತಾಂಶ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುತ್ತದೆ. ಸಂಸ್ಥೆಯ […]
ಸೇಂಟ್ ಮೇರಿಸ್ ಕಾಲೇಜು ಶಿರ್ವ : ಸೈಬರ್ ಸುರಕ್ಷತೆ, ನೈತಿಕ ಹ್ಯಾಕಿಂಗ್ ಕುರಿತು ವರ್ಚುವಲ್ ಕಾರ್ಯಾಗಾರ
ಶಿರ್ವ (ಜೂ, 02): ಸೇಂಟ್ ಮೇರಿಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಡಾಟಾ ಸ್ಪೇಸ್ ಸೆಕ್ಯುರಿಟಿ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಎಥಿಕಲ್ ಹ್ಯಾಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮೊದಲ ಅಧಿವೇಶನದಲ್ಲಿ ಎಥಿಕಲ್ ಹ್ಯಾಕಿಂಗ್ನಲ್ಲಿ ಡಾಟಾ ಸ್ಪೇಸ್ ಸೆಕ್ಯುರಿಟಿ ಎಕ್ಸ್ಪರ್ಟ್ನ ಸಂಸ್ಥಾಪಕರಾದ ಶ್ರೀ ಸಮಿರನ್ ಸಾಂತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಸೈಬರ್ ಸುರಕ್ಷತೆಯ ಬಗ್ಗೆ ಅವರು ಮಾತನಾಡುತ್ತಾ ಇದು ಸಮಯದ ತುರ್ತು ಅವಶ್ಯಕತೆಯಾಗಿದೆ ಮತ್ತು […]
ಮಂಗಳೂರು ವಿವಿ : ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಅಹ್ವಾನ
ಮಂಗಳೂರು ( ಮೇ, 26): ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರುವಿನ ಯೋಗ ವಿಜ್ಞಾನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂಗ್ಲಿಷ್ ವಿಷಯದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅಂಗೀಕೃತ ವಿ.ವಿ. ಯಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ ಶೇ. 50) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿವಿಯ ವೆಬ್ ಸೈಟ್( www.mangaloreuniversity.ac.in) […]
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ಹತ್ತು ದಿನಗಳ ಆನ್ಲೈನ್ ಬೇಸಿಗೆ ಶಿಬಿರ ಸಂಪನ್ನ
ಉಡುಪಿ (ಮೇ, 27): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಮೇ 16 ರಿಂದ 25 ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ 10 ದಿನಗಳ “ಆನ್ಲೈನ್ ಬೇಸಿಗೆ ಶಿಬಿರ” ಸಂಪನ್ನಗೊಂಡಿದೆ. ಈ ಹತ್ತು ದಿನಗಳ ಶಿಬಿರದಲ್ಲಿ ಕಾಲೇಜಿನ 9 ತಂಡಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳನ್ನು ವಿಂಗಡನೆ ಮಾಡಿ ಅವರಿಗೆ ವಿವಿಧ […]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ : ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ
ಬೆಂಗಳೂರು (ಮೇ, 24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು 3200ಕ್ಕೂ ಹೆಚ್ಚು ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧಿಕೃತ ವೆಬ್ https://recruitment.ksp.gov.in ನಲ್ಲಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮೇ 25ರ ಬೆಳಗ್ಗೆ 10 ರಿಂದ ಜೂನ್ 25 ಸಂಜೆ 6 ಗಂಟೆಯೊಳಗೆ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ : ಸಿಎಸ್ ಪರೀಕ್ಷೆಯಲ್ಲಿ ಶೇ100 ಫಲಿತಾಂಶ
ಕುಂದಾಪುರ (ಮೇ, 20): ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ,ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಯ ವಿದ್ಯಾರ್ಥಿಗಳು ಇನ್ಸಿಟ್ಯೂಟ್ ಆಫ್ ಕಂಪೆನಿ ಸಕ್ರೆಟರಿ ಆಫ್ ಇಂಡಿಯಾ ಮೇ 2021 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ ಸಿಎಸ್ಇಇಟಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದು ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ 5 ವಿದ್ಯಾರ್ಥಿಗಳಾದ ದಿಶಾ (131), ಜಯಲಕ್ಷ್ಮಿ (126), ದೀಪಿಕಾ (108), […]
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ
ಉಡುಪಿ (ಮೇ. 12): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ IEEE ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಆರ್ಥಿಕವಾಗಿ ಪ್ರಾಯೋಜಿಸಲ್ಪಟ್ಟ ವಿವಿಧ ಪ್ರಾಜೆಕ್ಟ್ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಶಾಖೆಯ ಅಧ್ಯಕ್ಷರಾದ ಶ್ರೀ ಅಶುತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿ […]










