ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ 2020-21 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮಾರ್ಚ್ 10ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಫಾ.ವೆಲೆರಿಯನ್ ಮೆಂಡೋನ್ಸಾ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಿ.ಎಸ್.ಎನ್.ಎಲ್ ಉಡುಪಿ ವಲಯದ ನಿರ್ವಹಣಕಾರರಾದ ಎನ್ .ಸಂದೀಪ್ ರವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ವಿಚಾರಗೋಷ್ಠಿ
ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ ಮಾನವಿಕ ಸಂಘ ಆಶ್ರಯದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣ ಎನ್ನುವ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಸಂಸ್ಥೆಯ ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಶ್ರೀ ಸಂಜಯ್ ಸಂಜಯ್ ನಾಯಕ್ ಆಗಮಿಸಿದ್ದರು. ಕಾಲೇಜಿನ ಮಾನವಿಕ ಸಂಘದ ಸಂಯೋಜಕರಾದ ಉಪನ್ಯಾಸಕಿ ಲೋಯಿಲೀಸಾ ಹಾಗೂ ಸಹ ಸಂಯೋಜಕರಾದ […]
ಎಂ.ಐ.ಟಿ. ಮೂಡ್ಲಕಟ್ಟೆ : ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳ
ಮೂಡ್ಲಕಟ್ಟೆ ಎಂ.ಐ.ಟಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳವನ್ನು ಆಯೋಜಿಸಿರುತ್ತಾರೆ.
ಇ ಸಿ ಆರ್ ಕಾಲೇಜು : ಪ್ರತಿದಿನವೂ ಮಹಿಳಾ ದಿನ
ಮಧುವನ (ಮಾ.14) : ವರ್ಷದಲ್ಲಿ ಒಂದು ದಿನ ಸಾಂಕೇತಿಕವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸದೇ ಪ್ರತಿ ದಿನವೂ ಮಹಿಳೆಯರ ದಿನ ಆಚರಿಸುವಂತಾಗ ಬೇಕು.ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಮಗಳಾಗಿ, ಹೆಂಡತಿಯಾಗಿ ಹೀಗೆ ಮುಂತಾದ ಪಾತ್ರಗಳನ್ನು ನಿರ್ವಹಿಸುವ ಮಹಿಳೆಯರಿಗೆ ಅದಕ್ಕೆ ಪೂರಕವಾದ ಸಮಾಜದ ನಿರ್ಮಾಣವಾಗಬೇಕು ಎಂದು ಸೌಖ್ಯ ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಪ್ರೊ, ಲಿಸಾ ಲಿಯೋ ಹೇಳಿದರು. ಅವರು ಇ ಸಿ ಆರ್ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಘಟಕ ಯೋಜಿಸಿದ್ದ “ವಿಶ್ವ ಮಹಿಳಾ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ : ಸಿ.ಎ. ಇಂಟರ್ ಮೀಡಿಯೇಟ್ ಸಾಧಕರಿಗೆ ಸನ್ಮಾನ.
ನಿರಂತರ ಅಭ್ಯಾಸ, ಶಿಸ್ತು, ಸಮಯ ಪಾಲನೆಯಿಂದ ವಿದ್ಯಾರ್ಥಿಗಳು ತಮ್ಮನ್ನು ಓದಿನ ಕಡೆಗೆ ತೊಡಗಿಸಿಕೊಂಡರೆ ಸಿಎ/ಸಿಎಸ್ ಮತ್ತು ಯುಪಿಎಸ್ಸಿ ಅಂತಹ ಅತ್ಯುತ್ತಮ ಕೋರ್ಸುಗಳನ್ನು ಅನಾಯಾಸವಾಗಿ ಪೂರ್ಣಗೊಳಿಸಬಹುದು ಎಂದು ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ರವರು ಹೇಳಿದರು .
ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆ
ಕುಂದಾಪುರ (ಮಾ.13) ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2020 -21ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಜಿತ್ ಶೆಟ್ಟಿ ಹಾಗೂ ಭರತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೆಸಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಆಶಾ ಶೆಟ್ಟಿ ಹಾಗೂ ಸ್ವಸ್ತಿ ಶೆಟ್ಟಿ , ಕೋಶಾಧಿಕಾರಿಯಾಗಿ ಯೋಗೀಶ್ ಶ್ಯಾನುಭಾಗ್ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 13 ರಂದು ನಡೆದ […]
ಕ್ರೀಡೆಗೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ : ಮನೀಷ್ ಪೂಜಾರಿ
ಕುಂದಾಪುರ, ಮಾ.(10) : ಅತ್ಯಂತ ಕಿರು ಅವಧಿಯಲ್ಲಿ ಕ್ರೀಡೆಯಲ್ಲಿ ಉತ್ಕ್ರಷ್ಟ ಸಾಧನೆ ಮಾಡುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದ ಗಮನ ಸೆಳೆದ ಸಂಸ್ಥೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜು. ವಿದ್ಯಾರ್ಥಿದೆಸೆಯಲ್ಲಿ ನನ್ನ ಕ್ರೀಡಾಪ್ರತಿಭೆಯನ್ನು ಗುರುತಿಸಿದ ಈ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ ಎಂದು ಖಾಸಗಿ ಕಂಪೆನಿ ಉದ್ಯೋಗಿ ಕಾಲೇಜಿನ ಪೂರ್ವ ವಿದ್ಯಾರ್ಥಿ ಮನೀಷ್ ಪೂಜಾರಿ ಹೇಳಿದರು.ಅವರು ನಗರದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ, (ಮಾ. 10) : ನಗರದ ಗಾಂಧಿ ಮೈದಾನದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಮಾರ್ಚ್ 10ರಂದು ನಡೆಯಿತು.ಕಾಲೇಜು ಪೂರ್ವ ವಿದ್ಯಾರ್ಥಿ ಉದ್ಯಮಿ ಶ್ರೀಧರ್ ಶೆಟ್ಟಿ ಕೆರಾಡಿ, ಯುವಜನ ಸೇವಾ ವಿಭಾಗದ ಕ್ರೀಡಾಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕೃತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜನ ಪ್ರಾಂಶುಪಾಲರಾದ ಪ್ರೊ| […]
ಶ್ರೀಧವಲಾ ಕಾಲೇಜು : ಕಲಾ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಶ್ರೀಧವಲಾ ಕಾಲೇಜಿನ ಕಲಾ ಸಂಘದ 2020-21ನೇ ಸಾಲಿನ ಚಟುವಟಿಗಳ ಉದ್ಘಾಟನೆಯು ಮಾರ್ಚ್ 6 ರಂದು ಜರುಗಿತು. ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲಾ ವಿದ್ಯಾರ್ಥಿಗಳ ಮುಂದಿನ ಹೆಜ್ಜೆ ಮತ್ತು ಹಾದಿ ಈ ವಿಷಯದ ಕುರಿತು ಮಾತನಾಡಿದರು.
ಶ್ರೀ ಶಾರದಾ ಕಾಲೇಜು ಬಸ್ರೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ (ಮಾ. 10) ಶ್ರೀ ಶಾರದಾ ಕಾಲೇಜಿನ ಮಹಿಳಾ ವೇದಿಕೆ ಮತ್ತು ರೋವರ್ ಹಾಗೂ ರೇಂಜರ್ ಘಟಕದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾರಣೆ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಂತರಾಷ್ಟ್ರೀಯ ಮಹಿಳಾ ದಿನ ಒಂದು ವಿಶೇಷ ದಿನವಾಗಿದ್ದು, ಮಹಿಳೆ ಒಂದು ಕುಟುಂಬದ ಆಧಾರ ಸ್ತಂಭವಾಗಿ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ, ವಿಜ್ಞಾನ, ಕ್ರೀಡಾ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ನೆನೆಯುವ ದಿನವಾಗಿದೆ. ಮಹಿಳೆಯರ ಸಾಧನೆಗೆ ಪ್ರೋತ್ಸಾಹ […]










