ಗಂಗೊಳ್ಳಿ(ಫೆ,25):ಅವಕಾಶ ಫೌಂಡೇಶನ್ ತನ್ನ ದಶಮಾನೋತ್ಸವದ ಅಂಗವಾಗಿ ಇತ್ತೀಚಿಗೆ ಅಮಾವಾಸೆ ಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಿಭಾಗದ ಗ್ರಾಮೀಣ ಜೀವನ ಕುರಿತಾದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ : ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ,22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ(ಫೆ,24):ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 […]
ಔದ್ಯಮಿಕ ಕ್ಷೇತ್ರದ ಸಾಧಕ ಶ್ರೀ ಎಸ್.ಎಸ್. ಹೆಗ್ಡೆಯವರಿಗೆ ಸನ್ಮಾನ
ಕುಂದಾಪುರ (ಫೆ.24) : ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಶ್ರೀ ಎಸ್.ಎಸ್. ಹೆಗ್ಡೆಯವರನ್ನು […]
ಹೆಮ್ಮಾಡಿ ಜನತಾ ಪಿ ಯು ಕಾಲೇಜು: ಇಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ 98.22 ಪರ್ಸಂಟೈಲ್
ಹೆಮ್ಮಾಡಿ( ಫೆ .24): ರಾಷ್ಟ್ರೀಯ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಯಾ 98.22 ಪರ್ಸಂಟೈಲ್ ಪಡೆದು ಸಾಧನೆಗೈದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನಲ್ಲಿ ತರಬೇತಿ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ದೇಶ-ವಿದೇಶದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದು ವ್ಯಾಸಾಂಗ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ […]
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ: ಉದ್ಯೋಗ ಮೇಳ -2025 ” ಸಂಪನ್ನ
ಕುಂದಾಪುರ (ಫೆ ,24): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಆಶ್ರಯದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಸಂಯೋಜನೆಯ ” ಉದ್ಯೋಗ ಮೇಳ -2025 ” ಯಶಸ್ವಿಯಾಗಿ ನಡೆಯಿತು. ಉದ್ಯೋಗ ಮೇಳವನ್ನು ಉದ್ಘಾಟಿಸಿದ ಮಾಜಿ ಸಂಸದರಾದ ಶ್ರೀ ಜಯಪ್ರಕಾಶ್ ಹೆಗ್ಡೆ -” ಇದು ಸ್ಪರ್ಧಾತ್ಮಕ ಜಗತ್ತು, ಇಂದಿನ ನವ ಪೀಳಿಗೆ ಶೈಕ್ಷಣಿಕ ಸಾಧನೆಯಲ್ಲಿ ಮುಂದಿದ್ದು ಅವರ ಅರ್ಹತೆಗೆ ತಕ್ಕ ಉದ್ಯೋಗದ ಅನಿವಾರ್ಯತೆಯಿದೆ. ಆ ನೆಲೆಯಲ್ಲಿ 119 ವರ್ಷಗಳ ಭವ್ಯ ಇತಿಹಾಸವುಳ್ಳ […]
ಕೋಟಿ-ಚೆನ್ನಯ್ಯರ ನಡೆ-ನುಡಿ ಎಂದೆಂದಿಗೂ ಶಾಶ್ವತ : ಸಂಗೀತಾ ಕುಲಾಲ್
ಗಣಿತ ನಗರ(ಫೆ,22): ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯ […]
ಬಿ .ಬಿ ಹೆಗ್ಡೆ ಕಾಲೇಜಿನ ಬ್ರಾಹ್ಮಿ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ
ಕುಂದಾಪುರ (ಫೆ.22): ರಾಜ್ಯ ಎನ್ಎಸ್ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆಬ್ರವರಿ 18 ರಿಂದ 22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಕುಂದಾಪುರದ ಡಾ Iಬಿ ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್ .ಎಸ್ ಸ್ವಯಂ ಸೇವಕಿ ಬ್ರಾಹ್ಮಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ […]
ವಡ್ಡರ್ಸೆಯಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಂಪನ್ನ
ಬ್ರಹ್ಮಾವರ, (ಫೆ,12): ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ ಅವರು ಸಮಾರೋಪ ನುಡಿಗಳನ್ನಾಡಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಇಂತಹ ಕ್ಯಾಂಪುಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ಊರಿನ […]
ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ–ಉಪನ್ಯಾಸ
ಕುಂದಾಪುರ (ಫೆ.20): ಜೀವನ ಮೌಲ್ಯಗಳು ಕಲಿಯುವುದಲ್ಲ, ಪಾಲಿಸುವಂತದದ್ದು. ಹೀಗಾಗಿ ತಂದೆ, ತಾಯಿ, ಗುರುಗಳು ಜೀವನದ ಅತ್ಯಮೂಲ್ಯ ಮೌಲ್ಯ. ಅವರ ಆದರ್ಶ ಬದುಕು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಬೇಕು. ಅದರೊಂದಿಗೆ ವ್ಯಕ್ತಿತ್ವಪೂರ್ಣ ಜೀವನವನ್ನು ಪ್ರಾಮಾಣಿಕವಾಗಿ ರೂಢಿಸಿಕೊಂಡಾಗ ವ್ಯಕ್ತಿಯ ಬದುಕಿಗೆ ಬೆಲೆ ಬರುತ್ತದೆ ಎಂದು ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ| ವಿನಾಯಕ್ ಭಟ್ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ […]
ಬಿ.ಬಿ. ಹೆಗ್ಡೆ ಕಾಲೇಜು: ದೇಸಿ ಗೋ ಉತ್ಪನ್ನಗಳ ಕುರಿತು ಉಪನ್ಯಾಸ
ಕುಂದಾಪುರ(ಫೆ.20): ಭಾರತೀಯ ಪರಂಪರೆಯಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಭಾರತೀಯ ದೇಸಿಯ ಗೋ ತಳಿಗಳಲ್ಲಿ ಪಂಚಗವ್ಯ ಔಷಧೀಯ ಗುಣಗಳಿದೆ. ವಿದ್ಯಾರ್ಥಿಗಳು ದಿನನಿತ್ಯದ ಬಳಕೆಯಲ್ಲಿ ದೇಸಿ ಗೋ ಉತ್ಪನ್ನಗಳನ್ನು ಹೆಚ್ಚು ಬಳಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಕಪಿಲೆ ಗೋ ಸಮೃದ್ಧಿ ಟ್ರಸ್ಟ್ ಇದರ ಪ್ರವರ್ತಕರಾದ ಕುಮಾರ್ ಎಸ್. ಕಾಂಚನ್ ಹೇಳಿದರು. ಅವರು ಕಾಲೇಜಿನ ಕನ್ನಡ ವಿಭಾಗ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ “ದೇಸಿ ಗೋ […]










