ಕೋಟ (ಅ,13) : ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳ-50 ರ ಸುವರ್ಣ ಪರ್ವದ ಎರಡನೆ ಕಾಯಕ್ರಮವು ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಅಕ್ಟೋಬರ್ 20 ರ ಆದಿತ್ಯವಾರ ಸಂಜೆ 4.30 ಕ್ಕೆ ನಡೆಯಲಿದೆ. ಅಂದಿನ ಸಭೆಯಲ್ಲಿ ಮಕ್ಕಳ ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ ಮಂಗಳೂರು ಕೋಡಿಕಲ್ನ ಸರಯೂ ಬಾಲ ಯಕ್ಷವೃಂದ(ರಿ) ಮಕ್ಕಳ ಮೇಳದ ನಿರ್ದೇಶಕ ರವಿ ಅಲೆವೂರಾಯ ವರ್ಕಾಡಿ ಅವರಿಗೆ ಸುವರ್ಣ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್ ಎಮ್ ಎಮ್, ವಿ ಕೆ ಆರ್ ಶಾಲೆಗೆ ಮಾಹೆ ಸಿಕ್ಕಿಂ ಪ್ರೊ. ಚಾನ್ಸೆಲರ್ ಡಾ.ಕೆ ರಾಮ್ ನಾರಾಯಣ್ ಭೇಟಿ
ಕುಂದಾಪುರ (ಅ.19) : ತರಗತಿ ಎಂದರೆ ವಿದ್ಯಾರ್ಥಿಗಳಿಗೆ ಮುಕ್ತ ವಾತಾವರಣ ಕಲ್ಪಿಸುವ ತಾಣವಾಗಿರಬೇಕೇ ಹೊರತು ಅವರ ಭಾವನೆಗಳನ್ನು ಕಟ್ಟಿ ಹಾಕುವ ಕೋಣೆಯಾಗಿರಬಾರದು. ಅಲ್ಲದೇ ವಿದ್ಯಾರ್ಥಿಗಳನ್ನು ಪ್ರೀತಿಸುವ, ಕಾಳಜಿಯುಕ್ತ ಜೀವಂತಿಕೆ ತುಂಬಿಸಬಲ್ಲ ಶಿಕ್ಷಕರು ಎಂದೆಂದಿಗೂ ಅವಿನಾಶಿ ಎಂದು ಸಿಕ್ಕಿಂ ಮಣಿಪಾಲ ವಿಶ್ವವಿದ್ಯಾನಿಲಯದ ಪ್ರೊ. ಚಾನ್ಸೆಲರ್ ಡಾ.ಕೆ ರಾಮ್ ನಾರಾಯಣ್ ಹೇಳಿದರು. ಅವರು ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ
ಗಂಗೊಳ್ಳಿ (ಆ,19): ಗಂಗೊಳ್ಳಿಯ ಸಾರ್ವಜನಿಕ ಶ್ರೀ ಶಾರದೋತ್ಸವದ ಸುವರ್ಣ ಮಹೋತ್ಸವದ ಮೆರವಣಿಗೆಯಲ್ಲಿ ಗಂಗೊಳ್ಳಿಯ ಟೀಮ್ ವಿಶ್ವಸಾಗರ ಪ್ರದರ್ಶಿಸಿದ ಅಯೋಧ್ಯ ರಾಮ ಮಂದಿರದ ಟ್ಯಾಬ್ಲೋ ತನ್ನ ಸೌಂದರ್ಯದಿಂದ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಧನುರ್ಧಾರಿ ರಾಮನ ಪ್ರತಿಕೃತಿ ಮತ್ತು ರಾಮ ಸ್ಮರಣೆಯ ಮೌಲಿಕ ನುಡಿಗಳ ಜೊತೆಯಲ್ಲಿಯೇ ಇತ್ತೀಚೆಗಷ್ಟೇ ನಿಧನರಾದ ಪ್ರಮಾಣಿಕತೆ ಮತ್ತು ಯಶಸ್ಸಿನ ಪ್ರೇರಕ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ಅಪಾರವಾದ ಮಹೋನ್ನತ ಕೊಡುಗೆಯನ್ನು ನೀಡಿದ ಅಪ್ರತಿಮ ದೇಶಪ್ರೇಮಿ ಶ್ರೀ ರತನ್ ಟಾಟಾ ಅವರ […]
ಕುಂದಾಪುರ ಎಜುಕೇಶನ್ ಸೊಸೈಟಿಗೆ ಸುವರ್ಣ ಸಂಭ್ರಮ
ಕನ್ನಡ ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ– ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಕುಂದಾಪುರ ಪರಿಸರದಲ್ಲಿ ಉತ್ತಮ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ಒದಗಿಸಬೇಕು ಎನ್ನುವ ಸದಾಶಯದೊಂದಿಗೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ. ಕುಂದಾಪುರ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಆರಂಭಗೊಂಡದ್ದು ನರ್ಸರಿ ತರಗತಿಯ ಮೂಲಕ. ಆದರೆ ಇಂದು ತನ್ನ ಶೈಕ್ಷಣಿಕ ಉತ್ಕ್ರಷ್ಟತೆಯೊಂದಿಗೆ ಸಂಸ್ಥೆ ನರ್ಸರಿ ಇಂದ ಪದವಿಯ ವರೆಗೆ […]
ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಜ್ಞಾನ ಸುಧಾ ವಿದ್ಯಾರ್ಥಿಯ ಸಾಧನೆ
ಉಡುಪಿ ( ಆ,18): ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ಬೆಂಗಳೂರಿನ ಬಸವನ ಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ 400 ಮೀ ಇಂಡ್ ಮಿಡ್ಲೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಕುಮಾರಿ ಭೂಮಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಶ್ರೀ ಕೆ. ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು […]
ಡಾ. ಬಿ ಬಿ ಹೆಗ್ಡೆ ಕಾಲೇಜು : ರತನ್ ಟಾಟಾರವರಿಗೆ ನುಡಿ ನಮನ
ಕುಂದಾಪುರ ( ಆ ,18): ಇಲ್ಲಿನ ಡಾ . ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ಶ್ರೀ ರತನ್ ಟಾಟಾರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟರವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ( ಆ,18): ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ವಿಭಾಗ) ಬೆಳಗಾವಿ,ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ,ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಬಾಲಕಿಯರ 70ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ […]
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಎಚ್ ಎಮ್ ಎಮ್ & ವಿ ಕೆ . ಅರ್ ಆಂಗ್ಲ ಮಾಧ್ಯಮ ಶಾಲೆಯ ಶ್ರಾವ್ಯಾ ಚೆಸ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ 4ನೇ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಮತ್ತು […]
ಹಾರ್ಡ್ ಬಾಲ್ ಕ್ರಿಕೆಟ್ : ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ರಾಜ್ಯ ಮಟ್ಟಕ್ಕೆ
ಕುಂದಾಪುರ:( ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅಜಯ್, ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಬಾಲಕರ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಂಸ್ಥೆಯ ಪ್ರಾಂಶುಪಾಲೆ ಡಾ. […]










