ಕುಂದಾಪುರ(ಜು,24): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಹಾಗೂ ವಿ.ಕೆ.ಆರ್ ಶಾಲೆಗಳಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನೆ ಜುಲೈ 22 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ನೆರವೇರಿತು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ. ಜಿ ಭಟ್ ರವರು ಮುಖ್ಯ ಅತಿಥಿಗಳಾಗಿ ಶಿಕ್ಷಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ ವಿದ್ಯಾರ್ಥಿಗಳಿಗೆ ಪುಷ್ಪವನ್ನು ನೀಡುವ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ
ಕುಂದಾಪುರ;(ಜು,23): ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಜುಲೈ 22 ರಂದು ಜರುಗಿತು.ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. […]
ಗಂಗೊಳ್ಳಿ: ಹೆಬ್ಬಾಗಿಲು ಮನೆ ಕಾವೇರಿ ದೇವಾಡಿಗ ನಿಧನ
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜುಲೈ 18) : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆ : ಕೃಷಿ ಭೂಮಿಯಲ್ಲಿ ಒಂದು ದಿನ
ಕುಂದಾಪುರ (ಜು15): ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ನೆಟ್ಟಿ ಮಾಡಿದ ಮಕ್ಕಳ ಆಸಕ್ತಿ ಮತ್ತು ಉತ್ಸಾಹ ನಮಗೆ ಸಂತಸವನ್ನು ನೀಡಿದೆ ಎಂದು ಕುಂದಾಪುರದ ಕೃಷಿಕರಾದ ಕೋಟ್ಯಾನ್ ಮನೆಯವರು ಹೇಳಿದರು. ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ನೋಡುತ್ತ ತಿಳಿ ಮಾಡುತ್ತ ಕಲಿ ಎನ್ನುವ ಆಶಯದೊಂದಿಗೆ ಹಮ್ಮಿಕೊಂಡ ನಮ್ಮ ನಡೆ ಕೃಷಿ ಭೂಮಿ ಕಡೆ ಎನ್ನುವ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆ ಕುರಿತು ಅವರು […]
ಬಿ. ಬಿ. ಹೆಗ್ಡೆ ಕಾಲೇಜು: ಸಿ. ಎ. ಇಂಟರ್ಮೀಡಿಯೇಟ್ ಹಾಗೂ ಸಿ.ಎಂ.ಎ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಜು,16): ಮೇ 2024ರಲ್ಲಿ ನಡೆದ ಸಿ.ಎ. ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಇಲ್ಲಿನ ಪ್ರಾಕ್ತನ ವಿದ್ಯಾರ್ಥಿಗಳಾದ (2022-23) ಶಾಂಭವಿ ಬಂಗೇರ (120), ರಂಜನ್ ಕುಮಾರ್ ಶೆಟ್ಟಿ (118), ನಾದಶ್ರೀ (116), ಶಮಂತ್ (114) ಮತ್ತು ಸುದರ್ಶನ್ ಉಪಾಧ್ಯಾಯ (103) ಹಾಗೂ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಾದ ವಿನೋಲ್ ಬಜಿಲ್ ಡಿಸೋಜಾ (331) ಇವರು ಸಿ. ಎ. ಇಂಟರ್ಮೀಡಿಯೇಟ್ 2 ಗ್ರೂಪ್ಗಳನ್ನೂ ತೇರ್ಗಡೆಯಾದರೆ, ಭುವನ (174) ಗ್ರೂಪ್ 1 ರಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎಂ.ಎ. […]
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ […]
ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣ: ಸಂಸದ ಕೋಟ
ಕುಂದಾಪುರ (ಜು:14): ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಜುಲೈ 14 ರಂದು ಆನಗಳ್ಳಿಯಲ್ಲಿ ನಡೆಯಿತು. ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ ರಕ್ತದಾನ ಮಹಾದಾನ, […]
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಶ್ರೀ ಚಂದ್ರಶೇಖರ ಶೆಟ್ಟಿ ಬಡ್ತಿ
ಉಡುಪಿ (ಜು, 13):ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸಿರುವ ಶ್ರೀಚಂದ್ರಶೇಖರ ಶೆಟ್ಟಿಯವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ (CLASS-1)ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಇವರು ದೈಹಿಕ ಶಿಕ್ಷಣ ವಿಭಾಗದಲ್ಲಿ ಹಲವಾರು ಸಂಸ್ಥೆಗಳಲ್ಲಿ ಸೇವೆಸಲ್ಲಿಸಿ,ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ,ತಾಲೂಕು ಯುವ ಜನಸೇವಾ ಕ್ರೀಡಾಧಿಕಾರಿಯಾಗಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹೀಗೆ ಮುಂತಾದ ಹುದ್ದೆಗಳಲ್ಲಿ ಸೇವೆಸಲ್ಲಿಸಿ, ಆಲೂರಿನ ಶೈಕ್ಷಣಿಕ,ಕ್ರೀಡಾ, ಸಾಂಸ್ಕೃತಿಕ,ಧಾರ್ಮಿಕ ಹೀಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.
ಆಲೂರು ಗೋಳಿಕಟ್ಟೆ ಸಂಪನ್ನ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ ( ಜು,13): ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ಟಿ ಮನೆ ಸಂಪನ್ನ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಇವರು ಬೈಂದೂರು ತಾಲೂಕು ಹೇರೂರು ಗ್ರಾಮದ ಗರಡಿ ಮನೆ ಶೇಖರ ಶೆಟ್ಟಿ ಮತ್ತು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ರ ಮನೆ ಸುಜಾತಾ ಶೆಟ್ಟಿ ದಂಪತಿಗಳ ಪುತ್ರ. ಇವರು ಉಡುಪಿಯ ಸುರೇಂದ್ರ ನಾಯಕ್ ಕೋ.ಚಾರ್ಟೆಡ್ ಅಕೌಂಟೆಂಟ್ ಅವರಲ್ಲಿ ತರಬೇತಿ ಪಡೆದುಕೊಂಡಿರುತ್ತಾರೆ.










