ಕುಂದಾಪುರ(ಜು,7): ಇಲ್ಲಿನ ಎಚ್. ಎಂ. ಎಂ ಮತ್ತು ವಿ. ಕೆ. ಆರ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳು ಪರಿಸರ ದಿನಾಚಣೆಯನ್ನು ಜೂನ್ 05 ರಂದು ಆಚರಿಸಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಾಗು ಜನರಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ಸ್ಕೌಟ್ ಮಾಸ್ಟರ್ ವೀರೇಂದ್ರ ನಾಯಕ್ ಗೈಡ್ಸ್ ಕ್ಯಾಪ್ಟನ್ ರೇಖಾ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
ಉಡುಪಿ(ಜು,7):ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು“ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು […]
ಬಿ.ಬಿ. ಹೆಗ್ಡೆ ಕಾಲೇಜು: ಮೆಗಾ ಜಾಬ್ ಡ್ರೈವ್ 2024
ಕುಂದಾಪುರ(ಜು,4): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡಿಪಾರ್ಟ್ಮೆಂಟ್ ಆಫ್ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿ ದಿನಾಂಕ 01 ಜೂನ್ ರಂದು ಅಂತಿಮ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೆಗಾ ಜಾಬ್ ಡ್ರೈವ್ 2024” ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ […]
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ಭಾಷೆಯ ಮಹತ್ವದ ಕುರಿತು ಉಪನ್ಯಾಸ
ಕುಂದಾಪುರ (ಜೂನ್ 03): ತ್ರಿಭಾಷಾ ಸೂತ್ರದಡಿಯಲ್ಲಿ ಮಾತೃಭಾಷೆ, ರಾಷ್ಟçಭಾಷೆ, ಅಂತಾರಾಷ್ಟ್ರೀಯ ಭಾಷೆ ಇವೆಲ್ಲವೂ ಇಂದಿನ ವಿದ್ಯಾರ್ಥಿಗಳಿಗೆ ಅತಿಮುಖ್ಯ. ಅದರಲ್ಲಿಯೂ ಹಿಂದಿ ಪ್ರಪಂಚದ ಪ್ರಾಚೀನ, ಶ್ರೀಮಂತ ಮತ್ತು ಸರಳ ಭಾಷೆಯಾಗಿದ್ದು, ವಿಶ್ವವ್ಯಾಪಿಯಾಗಿ ಸಂವಹನಕ್ಕೆ ಬಳಸುವ ಭಾಷೆಯಾಗಿದೆ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರ ಭಾಷೆಯ ಮೇಲೆ ವಿದ್ಯಾರ್ಥಿಗಳಿಗೆ ಅಭಿಮಾನವಿರಲಿ ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಜೋಸೆಫ್ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. […]
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ(ಜು,03): ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ […]
ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾಶೆಟ್ಟಿ 9ನೇ ರ್ಯಾಂಕ್
ಕುಂದಾಪುರ (ಮೇ 29): ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ, D/o. ನಾರಾಯಣ ಶೆಟ್ಟಿ, ಉಳ್ಳೂರು-74, ಕುಂದಾಪುರ ಇವರು 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬಿ. ಬಿ. ಹೆಗ್ಡೆ ಕಾಲೇಜು: ಮಾಹಿತಿ ಕಾರ್ಯಾಗಾರ
ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯಕ್ಕೆ ಮತ್ತೆ ಎರಡು ರ್ಯಾಂಕ್
ಗಂಗೊಳ್ಳಿ(ಮೇ,26): ಪಿಯುಸಿ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಗ್ರ 10 ರ್ಯಾಂಕ್ ಗಳಲ್ಲಿ ಸ್ಥಾನ ಪಡೆಯುವ ಮುಖೇನ ಒಟ್ಟಾರೆ ಮೂರು ರ್ಯಾಂಕ್ಗಳನ್ನು ಕಾಲೇಜು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 600ರಲ್ಲಿ 591 ಅಂಕಗಳನ್ನು ಪಡೆದ ಹರ್ಷಿತಾ ಎಸ್ ಪೂಜಾರಿ ಎಂಟನೇ ರ್ಯಾಂಕ್ ಗಳಿಸಿದರೆ ಇಂಚರ ಆರ್ ದೇವಾಡಿಗ 600 ರಲ್ಲಿ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಹತ್ತನೇ […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್: ಕುಂದಾಪುರ ಟ್ರ್ಯಾಕ್& ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ(ಮೇ,24):ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಮೇ 24ರಂದು ನಡೆದ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಎಂಟು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಶ್ರುತಾ ಶೆಟ್ಟಿ ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, 40ಮೀಟರ್ ಓಟದಲ್ಲಿ ಕಂಚಿನ ಪದಕ,ಹತ್ತು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಅರ್ಥಾ ಎಸ್ ಶೆಟ್ಟಿ […]










