ತ್ರಾಸಿ(ಫೆ.26): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೇರಿ ಚೌಕಿ ಸುಬ್ಬಯ್ಯ ಖಾವಿ೯ ಇವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ವರಾಜ್ಯ ೭೫ ತಂಡದ 29ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಜೊತೆಯಾದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪ್ರಥಮ ದಜೆ೯ ಕಾಲೇಜು ಬೈಂದೂರು ,ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ,ಜನಸೇವಾ ಟ್ರಸ್ಟ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕುಂದಾಪುರ : ಎಚ್.ಎಮ್.ಎಮ್, ವಿ.ಕೆ.ಆರ್ ಶಾಲೆಯಲ್ಲಿ “ಸರಿಗನ್ನಡಂ ಗೆಲ್ಗೆ” ಕಾರ್ಯಾಗಾರ
ಕುಂದಾಪುರ (ಫೆ.22) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ಸರಿಗನ್ನಡಂ ಗೆಲ್ಗೆ” ಎಂಬ ವಿಷಯಾಧಾರಿತ ಸಂವಾದ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಆಗಮಿಸಿ, […]
ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳ ಸಮ್ಮಿಲನ
ಕುಂದಾಪುರ (ಫೆಬ್ರವರಿ 24): ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| […]
ಬಿ.ಬಿ. ಹೆಗ್ಡೆ ಕಾಲೇಜು – ಪ್ರೊಫೆಷನಲ್ ಕೋರ್ಸ್ ಕಾರ್ಯಾಗಾರ
ಕುಂದಾಪುರ (ಫೆಬ್ರವರಿ 23): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರೊಫೆಷನಲ್ ಕೋರ್ಸ್ಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತೀಕ್ಷಾ, ಪ್ರಥಮ ಬಿ.ಕಾಂ. (ಡಿ) ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ, ಓದಿನ ಬಗ್ಗೆ ಇರಬೇಕಾದ ಶ್ರದ್ಧೆ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇ […]
ರಾಷ್ಟೀಯ ಅತ್ಲೇಟಿಕ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಕುಂದಾಪುರದ ಪ್ರಶಾಂತ್ ಶೆಟ್ಟಿ
ಕುಂದಾಪುರ (ಫೆ.26): ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಇದರ ತರಬೇತುದಾರರು ಹಾಗೂ ಕ್ರೀಡಾಪಟು ಆಗಿರುವ ಶ್ರೀ ಪ್ರಶಾಂತ್ ಶೆಟ್ಟಿ ಕುಂದಾಪುರ ಇವರು ಇದೇ ಏಪ್ರಿಲ್ 26 ರಿಂದ 28 ರ ತನಕ ಮುಂಬೈನ ಸೋಮಯ್ಯ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ರಾಷ್ಟೀಯ ಅತ್ಲೇಟಿಕ್- 2024 ನ 400m and 4x400m ರಿಲೇ ಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಗಾಗಲೇ ಅನೇಕ ರಾಜ್ಯಮಟ್ಟದ ಅತ್ಲೇಟಿಕ್ಸ್ ನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಇವರು ಒಕ್ […]
ಅಂಪಾರು ದಿನೇಶ್ ವೈದ್ಯರಿಗೆ ಮಂತ್ರಾಲಯದ ಜಗತ್ಪ್ರಸಿದ್ಧ ಪರಿಮಳ ಪ್ರಶಸ್ತಿ
ಕುಂದಾಪುರ ( ಫೆ.22): ರಾಯಚೂರು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಿಂದ ಪ್ರತಿ ವರ್ಷ ಕೊಡಮಾಡುವ ಪ್ರತಿಷ್ಠಿತ ಜಗತ್ಪ್ರಸಿದ್ಧ ಪರಿಮಳ ಪ್ರಶಸ್ತಿಯನ್ನು ನಮ್ಮ ಕುಂದಾಪುರದವರಾದ ಉದ್ಯಮಿ, ಸಮಾಜ ಸೇವಕ,ದಿನೇಶ್ ವೈದ್ಯ ಅಂಪಾರು ಆಯ್ಕೆ ಆಗಿದ್ದಾರೆ ಎಂದು ಮಂತ್ರಾಲಯ ಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಸುಭುಧೇಂದ್ರ ತೀರ್ಥರು ಮಾರ್ಚ್ 17 ರ ಸಂಜೆ ಮಠದ ರಂಗಮಂದಿರದಲ್ಲಿ ಗಣ್ಯರ ಸಮ್ಮುಖದಲ್ಲಿ ಬಿರುದು […]
ಬೈಂದೂರು ಕಂಬಳ ಛಾಯಾಚಿತ್ರ ಸ್ಪರ್ಧೆ-2024 : ಕೃಷ್ಣಮೂರ್ತಿ ಹೈಕಾಡಿ ಪ್ರಥಮ
ಬೈಂದೂರು (ಫೆ.22): ಸೌತ್ ಕೆನರ ಫೋಟೊಗ್ರಾಪರ್ಸ್ ಅಸೋಸಿಯೇಶನ್(ರಿ) ಕುಂದಾಪುರ, ಬೈಂದೂರು ವಲಯ ಹಾಗೂ ಬೈಂದೂರು ತಾಲೂಕು ರೈತ ಸಂಘದ ಸಹಯೋಗದೊಂದಿಗೆ ದಿನಾಂಕ: 07-01-2024ನೇ ಭಾನುವಾರ ಸಂಜೆ ನಡೆದ ಬೈಂದೂರು ಕಂಬಳದಲ್ಲಿ ಸೌತ್ ಕೆನರ ಫೋಟೊಗ್ರಾಪರ್ಸ್ ಅಸೋಸಿಯೇಶನ್ಸ್ ಸದಸ್ಯರಿಗೆ ಆಯೋಜಿಸಿದ ಕಂಬಳದಲ್ಲಿ ಕೃಷ್ಣಮೂರ್ತಿ ಹೈಕಾಡಿ ಇವರು ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿ ಬಹುಮಾನ ಮೊತ್ತ 7೦೦೦ ಪಡೆದುಕೊಂಡಿದ್ದಾರೆ. ಕಂಬಳದ ಛಾಯಾಚಿತ್ರವು ವಿಶಿಷ್ಟವಾಗಿ ಪ್ರತಿಬಿಂಬ ಮೂಡಿಬಂದಿದ್ದು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು […]
ಮೊಳಹಳ್ಳಿ : ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಕುಂದಾಪುರ (ಫೆ.22): ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ವಾಟರ್ ಫಿಲ್ಟರ್ ಹಸ್ತಾಂತರ ಕಾರ್ಯಕ್ರಮವು ಮಾನ್ಯ ಶ್ರೀ ಜಯಶೀಲ ಶೆಟ್ಟಿ ಹೆಚ್, ನಿವೃತ್ತ ಜಂಟಿ ನಿರ್ದೇಶಕರು, ತೋಟಗಾರಿಕಾ ಇಲಾಖೆ ಇವರ ಉಪಸ್ಥಿತಿಯಲ್ಲಿ ನಡೆಯಿತು. ನೀಲಾವರ ಮಕ್ಕಿತೋಟ ಮನೆ ಶ್ರೀಮತಿ ಗೌರಿ ವಿಠಲಶೆಟ್ಟಿ ಇವರ ಸ್ಮರಣಾರ್ಥವಾಗಿ 45 ಸಾವಿರ ರೂಪಾಯಿ ಮೌಲ್ಯದ ವಾಟರ್ ಫಿಲ್ಟರ್ ಕೊಡುಗೆ ನೀಡಿದ ದಾನಿಗಳಾದ ಶ್ರೀ ನಾಗರಾಜ ಶೆಟ್ಟಿ ಮಕ್ಕಿತೋಟ ಮನೆ […]
ಎಚ್. ಎಮ್. ಎಮ್, ವಿ ಕೆ ಆರ್ ಶಾಲೆ: ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರಿಂದ ಉಪನ್ಯಾಸ
ಕುಂದಾಪುರ (ಫೆ. 14): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಮತ್ತು ವಿ. ಕೆ ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಫೆಬ್ರವರಿ 12, ಸೋಮವಾರದಂದು 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ಮಕ್ಕಳೊಂದಿಗೆ ಮಾತು–ಕತೆ” ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕವಿ, ವಿದ್ವಾಂಸ, ನಿರ್ದೇಶಕ, ನಾಟಕಕಾರರೂ ಆಗಿರುವ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರು ಆಗಮಿಸಿ, ಮಕ್ಕಳಿಗೆ […]
ಅಬಾಕಸ್ನಲ್ಲಿ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಫೆ,18) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ವತಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 19ನೇ ರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಶ್ರೇಯಸ್ ಆರ್ ರಾವ್, ಪ್ರಣವ್ ದ್ವಿತೀಯ ಸ್ಥಾನವನ್ನು ಮತ್ತು ಪ್ರಥ್ವಿನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]










