ಕುoದಾಪುರ (ನ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಮತ್ತು ಯೋಗ ಶಿಕ್ಷಣದ ಆಶ್ರಯದಲ್ಲಿ ನವರಾತ್ರಿಯ ವಿಶೇಷ ಆಚರಣೆಯಾದ ‘ದಾಂಡಿಯಾ’ವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ ನೃತ್ಯ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಲಿತಕಲಾ ಸಂಘದ ಸಂಯೋಜಕರಾದ ಶ್ರೀಮತಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ| ಬಿ. ಬಿ. ಹೆಗ್ಡೆ ಕಾಲೇಜು: “ಸಂಗಮ” – ಸಿಬ್ಬಂದಿ ಕ್ರೀಡಾಕೂಟ
ಕುಂದಾಪುರ (ನ.01): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಸಂಘ ಆಯೋಜಿಸಿದ ಸಿಬ್ಬಂದಿಗಳ ಕ್ರೀಡಾಕೂಟ ‘ಸಂಗಮ – 2023’ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಚಾಲನೆ ನೀಡಿ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಿಬ್ಬಂದಿ ಸಂಘದ ಕಾರ್ಯದರ್ಶಿ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಪುರುಷರಿಗೆ ವಾಲಿಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ […]
ಈಜು ಸ್ಪರ್ಧೆಯಲ್ಲಿ ಸತತ ಐದನೆಯ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ನಾಗರಾಜ ಖಾರ್ವಿ
ಕುಂದಾಪುರ( ನ.03) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 200 ಮೀ. ಬ್ರೆಸ್ಟ್ ಸ್ಟ್ರೋಕ್-ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್-ಬೆಳ್ಳಿ ಪದಕ, 50 ಮೀ. ಬ್ರೆಸ್ಟ್ ಸ್ಟ್ರೋಕ್- ಬೆಳ್ಳಿ ಪದಕ, 4X100 […]
ಡಾ.ಬಿ.ಬಿ. ಹೆಗ್ಡೆ ಕಾಲೇಜು,ಎನ್.ಎಸ್.ಎಸ್ ಘಟಕ: ರಾಷ್ಟ್ರೀಯ ಏಕತಾ ದಿವಸ್- ಪ್ರತಿಜ್ಞೆ ಸ್ವೀಕಾರ
ಕುಂದಾಪುರ(ಆ,31):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಅಕ್ಟೋಬರ್ 31 ರಂದು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್.ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ
ಕುಂದಾಪುರ ( ಆ,31): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು. ಈ ಸಂಧರ್ಭದ್ಲಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಶ್ರೀ. ಚೇತನ್ ಶೆಟ್ಟಿ ಕೊವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ […]
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ
ಕುಂದಾಪುರ(ಆ,31) :ದೇಶದ ಮೊದಲ ಗ್ರಹ ಮಂತ್ರಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ ವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀ ಭುಜಂಗ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆʼಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆ: ಡಾ. ಯಂಡಮೂರಿ ವೀರೇಂದ್ರನಾಥ್ ರವರೊಂದಿಗೆ ವಿದ್ಯಾರ್ಥಿಗಳ ಸಂವಾದ
ಕುಂದಾಪುರ(ಆ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗಾಗಿ ಒಂದು ದಿನದ ಜ್ಞಾನ ವಿಕಾಸ ಕಾರ್ಯಾಗಾರವು ಸಂಪನ್ನಗೊಂಡಿತು. ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೆ. ಸೀತಾರಾಮ ನಕ್ಕತ್ತಾಯ ಇವರು ಕಾರ್ಯಾಗಾರವನ್ನು ಅರಿವೆ ಜ್ಯೋತಿ ಎನ್ನುವಂತೆ ವಿದ್ಯುಕ್ತವಾಗಿ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜಯಕ್ಕೆ ಐದು ಮೆಟ್ಟಿಲು ಖ್ಯಾತಿಯ ಹಿರಿಯ […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಎಮ್ ದೇವಾಡಿಗರಿಂದ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಆ,27): ಸೇವಾ ಸಂಘ(ರಿ.) ಗಂಗೊಳ್ಳಿಯ 49 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ವೇದಿಕೆಯಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಶಾರದೆ ದಯೆ ತೋರಿದೆ, ಡೀ ಡೀ ಆಡ್ಯಾನೇ ರಂಗ , ಆವ ಕುಲವೋ ರಂಗ, ಕಣ್ಣುಗಳೆರಡು ಸಾಲದಮ್ಮ, ಕಮಲದ ಮೊಗದೋಳೆ, ತುಳುವನಾಡ ಧರ್ಮ ತುಡರ್, ಎಂಥ ಅಂದ ಎಂಥ ಚಂದ, ತಂಬೂರಿ ಮೀಟಿದವ […]
ಕ್ರಿಕೆಟ್ : ಕುಂದಾಪುರದ ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ,27): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟದ ಕ್ರಿಕೆಟ್ ಹಾರ್ಡ್ ಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 8ನೇ ತರಗತಿ ವಿದ್ಯಾರ್ಥಿನಿ ತ್ರಿಶಾ ಐ ನಾಯಕ್ 14ರ ವಯೋಮಾನದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. 10ನೇ ತರಗತಿಯ ಅಂಶಿತ್ 17ರ ವಯೋಮಾನದ […]
ಡಾIಬಿ.ಬಿ.ಹೆಗ್ಡೆ ಕಾಲೇಜು:ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ(ಆ,27): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರದಲ್ಲಿ ವಿಸ್ತರಣಾ ಚಟುವಟಿಕೆ ಜರುಗಿತು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಂತ್ರಜ್ಞರಾದ ಶ್ರೀ ವೀರೇಂದ್ರರವರು ವಿದ್ಯಾರ್ಥಿಗಳಿಗೆ ರಕ್ತವನ್ನು ನೀಡಲು ಹೇಗೆ ಸಹಾಯಕರಾಗಬೇಕು ಜೊತೆಗೆ ರಕ್ತ ಸಂಗ್ರಹ, ಪರಿಷ್ಕರಣೆ, ಮತ್ತು ಸಂಗ್ರಹಿಸಿದ ರಕ್ತದ ಪ್ರಕ್ರಿಯೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಸಭಾಪತಿಗಳಾದ […]










