ಉಡುಪಿ (ಜೂ, 06) : ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ನಿವಾಸಿ ಚಂದ್ರಾವತಿ ಶೆಟ್ಟಿ ಯವರ ಮಗಳು 10 ವರ್ಷ ಪ್ರಾಯದ ಬಾಲಕಿ ಯುಕ್ತಿ ಶೆಟ್ಟಿ ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದು, ಖಾಯಿಲೆಯ ಅರಿವೂ ಇಲ್ಲದ ಈ ಮಗುವಿನ ನೆರವಿಗಾಗಿ ಕೊಕ್ಕರ್ಣೆ – ಕಾಡೂರು ಸ್ಥಳೀಯ ಪರಿಸರದ ಸಂತೋಷ್ ಶೆಟ್ಟಿ ಮುಂಡಾಡಿ ಅವರ ನೇತೃತ್ವದಲ್ಲಿ ಹಾಗೂ ಅವರ ಆಪ್ತ ಸ್ನೇಹಿತ ವರ್ಗದವರಾದ ಅಶೋಕ್ ಕುಂದರ್ ಮಂದಾರ್ತಿ, ವಸಂತ್ ಕುಮಾರ್ ನುಕ್ಕೂರು, […]
Day: June 6, 2021
ಕರೋನಾದ ಕಾರ್ಮೋಡದಲ್ಲಿ ಕಾಲೇಜಿನ ಆ ದಿನಗಳು
ಸುಂದರ ಪ್ರಪಂಚದಲ್ಲಿ ರೆಕ್ಕೆ ಬಲಿತ ಹಕ್ಕಿಯಂತೆ ಹಾರಾಡುತ್ತಿದ್ದ ನಾವುಗಳು ಕರೋನ ಮಹಾಮಾರಿಗೆ ಸಿಲುಕಿ ನೆಲೆ ಇಲ್ಲದ ನಡುಗಾಟದ ಜೀವನಕ್ಕೆ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ. ಅತ್ತ ಕಾಲೇಜಿನ ಸವಿ-ಸಡಗರ ಇಲ್ಲ, ಇತ್ತ ಮುಂದಿನ ಜೀವನದ ಸ್ಪಷ್ಟತೆ ಕಣ್ಣೆದುರಿಗಿಲ್ಲ. ಎಲ್ಲವೂ ಸರಿ ಇದ್ದಿದ್ದರೆ ಅಂತಿಮ ವರ್ಷದ ಪದವಿ ಮುಗಿಸಿ ಎಲ್ಲೋ ಒಂದು ಕಡೆ ನೆಲೆ ಕಂಡುಕೊಳ್ಳುತ್ತಾ ಇದ್ದೇವು. ಆದರೆ ಈ ಕಾಣದ ಕರೋನ ನಮ್ಮ ಬದುಕಿನ ದಿಕ್ಕನ್ನೇ ಬದಲಿಸಿ ಬಿಟ್ಟಿದೆ. ತರಗತಿ ಗೋಡೆಗಳ […]
ಸೈಬರ್ ಸುರಕ್ಷತೆ ಸುದ್ದಿ ಪತ್ರದ ಮೊದಲನೇ ಆವೃತ್ತಿಯಾದ “ಸೈಬರ್ ವಾರ್ತಿಕಾ” ಬಿಡುಗಡೆ
ಬೆಂಗಳೂರು (ಜೂ. 06): CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಇದು ತನ್ನ ದ್ವಿಭಾಷಾ ಸೈಬರ್ ಸುರಕ್ಷತೆ ಸುದ್ದಿಪತ್ರದ ಮೊದಲನೇ ಆವೃತ್ತಿಯಾದ “ಸೈಬರ್ ವಾರ್ತಿಕಾ” ವನ್ನು ನಿಮ್ಮೊಂದಿಗೆ ಹಂಚಿಕೊಂಡಿದೆ. ಈ ಸುದ್ದಿ ಪತ್ರದಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉಪಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸುದ್ದಿಪತ್ರವು ಆಸಕ್ತಿದಾಯಕ ಮಾಹಿತಿಗಳನ್ನು ಒಳಗೊಂಡಿದ್ದು, “ರಕ್ಷಕ ಮತ್ತು ಭಕ್ಷಕ” ಸೈಬರ್ ಮ್ಯಾಸ್ಕಾಟ್ಗಳ ಮಾರ್ಗದರ್ಶನಗಳನ್ನು ಇದು […]
ಐಐಐಟಿ ಧಾರವಾಡ : ಬಿ.ಟೆಕ್. ಹಾಗೂ ಬಿ.ಇ. ಮುಗಿಸಿದ ಮಹಿಳಾ ಪದವೀಧರರಿಗೆ ಸೈಬರ್ ಸೆಕ್ಯೂರಿಟಿ ಉಚಿತ ತರಬೇತಿ ಕಾರ್ಯಕ್ರಮ
ಉಡುಪಿ (ಜೂನ್, 06) : CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಸೈಬರ್ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಅವಿಷ್ಕಾರ ತಂತ್ರ, ಸೃಜನಶೀಲತೆ, ತಂತ್ರಜ್ಞಾನದ ಸದ್ಬಳಕೆ, ಸೈಬರ್ ಸೆಕ್ಯೂರಿಟಿ ಕುರಿತಾದ ಅರಿವು ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೈಬರ್ ಶಿಕ್ಷಾ ,ಇದು ಮೈಕ್ರೋಸಾಫ್ಟ್ ಹಾಗೂ ಡಿ.ಎಸ್.ಐ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಡಿ ಐಐಐಟಿ ಧಾರವಾಡ ಹಾಗೂ CySek ಕರ್ನಾಟಕದ ಜಂಟಿ ಆಶ್ರಯದಲ್ಲಿ […]
ಬಾ ಮಳೆಯೇ…, ಬಾ…
ಬಾ ಮಳೆಯೇ…, ಬಾಭಾನು ಅಳುತಿದೆಕತ್ತಲಗೂಡಿನೊಳಗೆಕರಿಮೋಡಗಳ ತಿಕ್ಕಾಟಕೆ ಸಿಕ್ಕಿಕಣ್ಣೀರ ಧಾರೆಗಳು ಮಳೆಯಾಗಿ ಭೂಮಿಗೆ ಸೇರುವ ತವಕದಲಿಗಗನದಲಿ ಮಳೆ ಮೋಡಗಳ ಕದನಭೂಮಿಗೆ ಮಳೆಯ ತಂಪಾದ ನರ್ತನಯಾರಿಗೋ ನೋವಿನ ಅನುಭವ ಇನ್ನೂ ಯಾರಿಗೋ ಸುಖದ ತಾಂಡವಹಾಗಂತ ನೀ ಸುರಿಯದಿರ ಬೇಡನೀ ಚೆಲ್ಲಿದ ಹನಿಯ ಅಮೃತಧಾರೆಗಳುಕಾದ ಭೂಮಿಗೆ ಅದು ಪ್ರೀತಿ ಸಿಂಚನ ನಿರಂತರ ನಿನ್ನ ಪ್ರೇಮ ಹನಿ ಸುರಿಸುತ್ತಿರುಭೂಮಿಯ ಒಡಲು ಒಣಗಿದೆ ನಿನ್ನ ನಿರೀಕ್ಷೆಯಲಿ ಸಾಕು ಪರೀಕ್ಷೆ ಸುರಿಸಿ ಬೀಡು ಇಳೆಗೆ ಮಳೆಯಾಗಿನಿನಗೆ ನೋವು ಆದರೂ […]
ಕೋಟೇಶ್ವರ : ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ
ಕೋಟೇಶ್ವರ (ಜೂ, 05): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋಟೇಶ್ವರ ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ ಶೇಟ್, ಕೇಂದ್ರದ ನಿರ್ವಾಹಕ ಸುಹಾಸ್ ಪೈ ಜಿಲ್ಲಾಧಿಕಾರಿಗಳಿಗೆ ಲಸಿಕಾ ಕೇಂದ್ರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೇವಾ ಭಾರತಿಯ ಸ್ವಯಂಸೇವಕರು ಉಪಸ್ಥಿತರಿದ್ದರು.
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ವಿಶ್ವ ಪರಿಸರ ದಿನಾಚರಣೆ
ಶಿರ್ವ(ಜೂ, 5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ಸಿಸಿ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಘಟಕದ ಸ್ವಯಂಸೇವಕರ ಮನೆಯ ಅಂಗಳಗಳಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರು ಡಾ|ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಎನ್ಸಿಸಿ ಘಟಕದ ಸಹ ಸಂಯೋಜಕಿ ಯಶೋಧಾ […]










