ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕುಂದಾಪುರ ಇವರ ವತಿಯಿಂದ ಕುಂದಾಪುರ ಪರಿಸರದ ಹಿರಿಯ ವೈದ್ಯರು ಹಾಗೂ ಸೀನಿಯರ್ ರೋಟರಿಯನ್ಗಳಾದ ಡಾ| ಮಲ್ಲಿ, ಡಾ| ಕಮಲ್, ಡಾ| ರಾಜೀವ್ ಶೆಟ್ಟಿ, ಡಾ| ರಾಜರಾಮ್ ಶೆಟ್ಟಿ,, ಡಾ| ಹರಿಪ್ರಸಾದ್ ಶೆಟ್ಟಿ,
ಡಾ| ಎಮ್.ಎನ್. ಅಡಿಗ ಹಾಗೂ ಡಾ. ರಾಜೇಂದ್ರ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.
Month: July 2021
ಬೈಕ್ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕ ಜಿ. ಎಸ್. ಶಿವಕುಮಾರ್ ರವರ ಚಿಕಿತ್ಸೆಯ ನೆರವಿಗೆ ಮನವಿ
ಮಂಗಳೂರು (ಜು, 03) : ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸುರುಳಿಕುಮೇರಿ ನಿವಾಸಿ, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಜಿ.ಎಸ್. ಶಿವಕುಮಾರ್ ಅವರು ಕಳೆದ ಜೂನ್, 25 ರಂದು ಪುತ್ತೂರಿನ ಸಂಪ್ಯ ಬಳಿ ಬೈಕ್ ಅಪಘಾತದಿಂದಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಅವರ ಮಕ್ಕಳು ಇನ್ನೂ ಚಿಕ್ಕವರಾಗಿದ್ದು, ಪತ್ನಿ ಗೃಹಿಣಿಯಾಗಿದ್ದಾರೆ. ಅವರ ಚಿಕಿತ್ಸೆಗೆ ಬಹುದೊಡ್ಡ ಮೊತ್ತದ ಅವಶ್ಯಕತೆಯಿದ್ದು. ದಿನಕ್ಕೆ 40-50 ಸಾವಿರ ರೂ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ನೆರವು
ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಗಂಗೊಳ್ಳಿ : ರಾಷ್ಟ್ರೀಯ ವೈದ್ಯರ ದಿನಾಚರಣೆ
ಗಂಗೊಳ್ಳಿ (ಜು, 01): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಗಂಗೊಳ್ಳಿ ಇದರ ಆಶ್ರಯದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ರವರನ್ನು ವೈದ್ಯರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಗಂಗೊಳ್ಳಿ ಇದರ ಅಧ್ಯಕ್ಷ ರಾಜೇಶ್ ಶೇರೆಗಾರ್ ವಹಿಸಿದ್ದರು. ನಾರಾಯಣ ನಾಯ್ಕ, ರಮನಾಥ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಇದರ ಪದಾಧಿಕಾರಿಗಳು, ಗ್ರಾಮ ಪಂಚಾಯತ್ […]
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ಕೋವಿಡ್ ಲಸಿಕಾ ಅಭಿಯಾನ
ಮಧುವನ (ಜು, 02) : ಇಲ್ಲಿನ ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ಕಾಲೇಜು ಪ್ರಾರಂಭಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾಕರಣ ಹಮ್ಮಿಕೊಳ್ಳಲಾಗಿತ್ತು. ಜೂನ್ 30 ಬುಧವಾರದಂದು 100 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಸಿಕೆ ನೀಡಲಾಗಿದೆ ಎಂದು ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್ ತಿಳಿಸಿದರು. ಲಸಿಕೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ ಸೈಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ಪ್ರಾಂಶುಪಾಲರು […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ : ಶಾಲಾ ಪ್ರಾರಂಭೋತ್ಸವ
ಕೋಟೇಶ್ವರ (ಜು, 2): ಕುಂದಾಪುರ ತಾಲೂಕಿನ ಪಡು ಗೋಪಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜುಲೈ,1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಜೊತೆಗೆ ರಾಜ್ಯ ಸರಕಾರ ನಿಗದಿ ಪಡಿಸಿದ ಕರೋನದ ಮಾರ್ಗಸೂಚಿಯ ಬಗ್ಗೆ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೋಪಾಡಿ ಪಂಚಾಯಿತಿನ ಪ್ರಥಮ ಪ್ರಜೆ ಶ್ರೀಮತಿ ಸರೋಜಾ ಪೂಜಾರಿ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಶೆಟ್ಟಿ, ಸಹ ಶಿಕ್ಷಕಿ ಶ್ರೀಮತಿ ಮಾಲತಿ ನಾಯ್ಕ,ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,ಪಂಚಾಯತ್ […]
ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆ ಯ ನೆರವಿಗೆ ಮನವಿ
ಕುಂದಾಪುರ (ಜು, 02): ಶ್ರೀ ಮಾರಣಕಟ್ಟೆ ಮೇಳದ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರು ಮಾರಣ ಕಟ್ಟೆ ಸಮೀಪದ ಹಾರ್ಮಣ್ ಬಳಿ ಜೂನ್, 30ರಂದು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕಡು ಬಡತನದಲ್ಲಿರುವ ಸುಬ್ರಹ್ಮಣ್ಯ ಮೊಗವೀರ ರವರು ತಾಯಿ, ತಮ್ಮ ಹಾಗೂ ಅಜ್ಜಿಯೊಂದಿಗೆ ಸಣ್ಣ ಗುಡಿಸಿಲಿನಲ್ಲಿ ಜೀವನ ಸಾಗಿಸುತ್ತಿದ್ದರು. ಕಲಾವಿದ ಸುಬ್ರಹ್ಮಣ್ಯರವರ ಚಿಕಿತ್ಸಾ ವೆಚ್ಚ ಬರಿಸಲಾಗದೆ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಮಾನವೀಯ ನೆಲೆಯಲ್ಲಿ ಕಲಾವಿದನ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : 10 ಸಾವಿರ ಮಾಸ್ಕ್ ವಿತರಣಾ ಅಭಿಯಾನ
ಶಿರ್ವ (ಜು, 02): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ,ಎಂಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ , ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10 ಸಾವಿರ ಮಾಸ್ಕ್ ಗಳ ವಿತರಣೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಶಿರ್ವ ಆರೋಗ್ಯ ಸಮುದಾಯ ಕೇಂದ್ರ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ,ವಿವಿಧ ಧಾರ್ಮಿಕ ಕೇಂದ್ರಗಳು, ಶಿರ್ವ ಗ್ರಾಮ ಪೇಟೆ, ಕಾಲೇಜಿನ ಸಂತ […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ : ಶಾಲಾ ಪ್ರಾರಂಭೋತ್ಸವ
ಜಡ್ಕಲ್ (ಜು, 01): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇದರ ಶಾಲಾ ಪ್ರಾರಂಭೋತ್ಸವ ಜುಲೈ,01 ರಂದು ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ನಾಗೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀಮತಿ ರಾಧಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಣಾಭಿಮಾನಿ ರಾಮ ಶೆಟ್ಟಿ ಅತ್ತಿಕಾರ್, ಮುಖ್ಯ ಶಿಕ್ಷಕಿ ಶ್ರೀಮತಿ ದೇವಕಿ, ಸಹಶಿಕ್ಷಕಿ ಶ್ರೀಮತಿ ನೇತ್ರ ಹಾಗೂ ಶಾಲಾ ಮಕ್ಕಳ ಪೋಷಕರು […]
ನಾನು, ಕನ್ನಡಿ ಮತ್ತು ನೆರಳು
ಕನ್ನಡಿಯೊಂದೇ ತೋರಿಸುವುದಂತೆನನ್ನನ್ನು ನಾನಿದ್ದಂತೆಕಾಣಬೇಕಿತ್ತು ನನ್ನೊಳಗಿನ ನನ್ನನ್ನು ನಾನುಆಳೆತ್ತರದ ಕನ್ನಡಿಯೆದುರು ನಿಂತೆ ಏನಾಶ್ಚರ್ಯ !ಎಡಭಾಗ ಬಲಭಾಗವಾಗಿಬಲಭಾಗ ಎಡಭಾಗವಾಗಿನನ್ನ ವೈರುಧ್ಯಗಳ ದರ್ಶನ ಕನ್ನಡಿಯೊಳಗಿನ ನನ್ನ ಬಿಂಬದಕಣ್ಣಲ್ಲಿ ಕಣ್ಣಿಟ್ಟು ದಿಟ್ಟಿಸಿ ನೋಡಿದೆಕಣ್ಣುಗಳ ಮೂಲಕವೇ ನನ್ನೊಳಗಿಳಿದು ಕೇಳಿದೆಹೌದು, ಯಾರು ನಾನುಅಲುಗಾಡಿದ ತುಟಿ ಅತ್ತದ್ದೇ ನಕ್ಕದ್ದೇ ಅರ್ಥವಾಗಲಿಲ್ಲಕಣ್ಣುಗಳಾದರೂ ಹೇಳಿದ್ದೇನು? ಅದೂ ಅರ್ಥವಾಗಲಿಲ್ಲನನ್ನ ಪ್ರತಿಬಿಂಬಕ್ಕೂ ನನ್ನರಿವಾಗದೆ ನಿಟ್ಟುಸಿರು ಬಿಟ್ಟಿರಬೇಕು ಖಚಿತವಾಯ್ತು. ಇಲ್ಲ..ಕನ್ನಡಿ ತೋರಲಾರದು ಸತ್ಯಅರ್ಥವಾಗಿತ್ತು ನನಗೆಹಾಗೇ ಸುಮ್ಮನೆ ನಡೆದು ಹೋದೆಬಿಡಲಾರದೆ ನನ್ನನ್ನೇ ಹಿಂಬಾಲಿಸುತ್ತಿತ್ತು ನೆರಳುಅದನ್ನೇ ಕೇಳಿದೆ ‘ಹೌದು ನಾನು […]










