ಉಡುಪಿ (ಜೂ, 21): ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನದ ಕುರಿತು ಯುವ ಜನತೆಯಲ್ಲಿ ಆಸಕ್ತಿ ಹಾಗೂ ಕಾಳಜಿ ಮೂಡಿಸುವ ನೆಲೆಯಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನಾ ಸಮಾರಂಭ ಜುಲೈ 20 ರ ಮಂಗಳವಾರದಂದು ಜರುಗಿತು. ಶ್ರೀ ಶಶಿಕಾಂತ್ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಕ್ಷಗಾನ ಹಾಗೂ ಈ ಸಂಸ್ಥೆಯ ಹಿರಿಮೆಯನ್ನು ಜಗತ್ತಿನಾದ್ಯಂತ ಪಸರಿಸುವ […]
Month: July 2021
ಪುಟ್ಕತೆ – 1 : ನೀತಿ ಕಥೆ
ಮರ ದಿನಂಪ್ರತಿ ಮನೆಯೆದುರು ಹಕ್ಕಿಗಳ ಹಿಕ್ಕೆಯನ್ನು ಗುಡಿಸಿ ಸ್ವಚ್ಛಗೊಳಿಸುವ ಕೆಲಸ ಸಾಕಾಗಿಹೋಗಿತ್ತು. ಮನೆಯೆದುರು ತಾವರೆ ಕೊಳಕ್ಕೆ ಅರ್ಧ ಬುಟ್ಟಿಯಾಗುವಷ್ಟು ಒಣಗಿದ ಎಲೆಗಳೂ ಬೀಳುತ್ತಿದ್ದವು. ಮಳೆ ಬಂದು ನಿಂತರೂ ಮರದ ಎಳೆಗಳಿಂದ ಹನಿಗಳು ಬೀಳುತ್ತಿದ್ದವು. ಒಮ್ಮೊಮ್ಮೆ ಬೀಸುವ ಗಾಳಿಗೆ ಚಳಿಯೂ ವಿಪರೀತ. ಬೇಸರವಾಗಿ ಮರಕ್ಕೊಂದು ಗತಿ ಕಾಣಿಸಿದ. ಈಗ ದಿನವೂ ತಾವರೆ ಕೊಳಕ್ಕೆ ನೀರು ತುಂಬಿಸಬೇಕು. ಪಕ್ಷಿಗಳಿಗಾಗಿ ತಾರಸಿಯಲ್ಲಿ ಪಾತ್ರಗಳಲ್ಲಿ ನೀರಿಡುತ್ತಾನೆ. ಆದರೆ ಪಕ್ಷಿಗಳು ಸುಳಿಯುವುದೇ ಇಲ್ಲ! ಬೆವರಿದಾಗ ಚಳಿಯಾಗುತ್ತದೆ…! ಕಿಗ್ಗಾಲು […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ : ಸಿಎ/ಸಿಎಸ್ ಆಸಕ್ತರಿಗೆ ನೂತನ ಬ್ಯಾಚ್ ಆರಂಭ
ಕುಂದಾಪುರ (ಜು, 20) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಜುಲೈ 2021 ರಂದು ಪ್ರಕಟಿಸಿರುವ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ಕೋರ್ಸುಗಳನ್ನು ಆಯ್ಕೆಮಾಡಿಕೊಳ್ಳಲು ಹಾದಿ ಸುಲಭವಾಗಿದೆ. ಸಿಎ ಮತ್ತು ಸಿಎಸ್ ಕೋರ್ಸುಗಳನ್ನು ಪೂರ್ಣಗೊಳಿಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶ್ವದಾದ್ಯಂತ ಉಜ್ವಲ ಭವಿಷ್ಯವಿದೆ. ಈ ನಿಟ್ಟಿನಲ್ಲಿ ಕುಂದಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಆಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (SPACE) ಶಿಕ್ಷಣ […]
ನಿರುಪಯುಕ್ತ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಿ ಸುಂದರ ಕೈದೋಟ ನಿರ್ಮಿಸಿದ ಯತೀಶ್ ಕಿದಿಯೂರು ಮನೆಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ
ಉಡುಪಿ (ಜು, 20) : ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳನ್ನು ಹಾಗೂ ಹಾಲಿನ ಪ್ಯಾಕೆಟ್ ಗಳನ್ನು ಬಳಸಿ ಮನೆಯ ಸುತ್ತಮುತ್ತಲೂ ಸುಂದರ ಕೈದೋಟ ನಿರ್ಮಿಸಿ ಸಾರ್ವಜನಿಕರ ಗಮನ ಸೆಳೆದ ಉಡುಪಿಯ ಯತೀಶ್ ಕಿದಿಯೂರು ಮನೆಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಕುಟಂಬದೊಂದಿಗೆ ಭೇಟಿ ನೀಡಿದರು. ಸಹೋದ್ಯೋಗಿ ಯತೀಶ್ ಕಿದಿಯೂರು ರವರ ಪರಿಸರ ಪ್ರೇಮ ಮತ್ತು ಸ್ರಜನಶಿಲತೆಗೆ ಜಿಲ್ಲಾಧಿಕಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯತೀಶ್ ಕಿದಿಯೂರು ಬಿಡುವಿನ ಸಮಯದಲ್ಲಿ […]
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಗಂಗೊಳ್ಳಿ ಮೂಲದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿ ದೈವೈಕ್ಯ
ಕುಂದಾಪುರ (ಜು, 19): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠವಾದ ಪರ್ತಗಾಳಿ ಜೀವೋತ್ತಮ ಮಠದ ಸ್ವಾಮಿಗಳಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು(76) ಜುಲೈ 19 ರಂದು ಹೃದಯಾಘಾತದಿಂದ ದೈವೈಕ್ಯರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ವೆಂಕಟರಮಣ ದೇವಾಲಯದ ಅರ್ಚಕ ಮನೆತನದವರು.ದ್ವಾರಕಾನಾಥ ತೀರ್ಥ ಸ್ವಾಮೀಜಿ ಅವರಿಂದ 1967ರ ಫೆಬ್ರುವರಿ 26ರಂದು ಸನ್ಯಾಸ ದೀಕ್ಷೆ ಸ್ವೀಕರಿಸಿ, 1973ರ […]
ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಕೆಸರುಮಯ – ಸಾರ್ವಜನಿಕ ಸಂಚಾರಕ್ಕೆ ಅಡಚಣೆ
ತಲ್ಲೂರು (ಜು, 19): ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಅತಿಯಾಗಿ ಸುರಿದ ಮಳೆಯ ಕಾರಣದಿಂದಾಗಿ ಕೆಸರುಮಯವಾಗಿದ್ದು ಸಾರ್ವಜನಿಕರಿಗೆ ಓಡಾಡಲು ಕಷ್ಟಕರವಾಗಿದೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದು ,ಸ್ವಲ್ಪ ಹೆಚ್ಚು ಕಡಿಮೆಯಾದರೆ ಕೈ ಕಾಲು ಮುರಿದುಕೊಳ್ಳವ ಭೀತಿಯಲ್ಲಿದ್ದಾರೆ. ಗ್ರಾಮ ಪಂಚಾಯತ್ ಈ ಕುರಿತು ಗಮನ ಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೂಡ ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ : ಕೋವಿಡ್ ಲಸಿಕಾ ಅಭಿಯಾನ
ಹೆಮ್ಮಾಡಿ (ಜು, 19 ): ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ ವತಿಯಿಂದ ಕರೋನಾ ವಿರುದ್ದ ಲಸಿಕಾಕರಣವನ್ನು ಜುಲೈ 19 ರಂದು ಸುಳ್ಸೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಆಟೋ ರಿಕ್ಷಾ ಚಾಲಕರಿಗೆ, ಹೋಟೆಲ್ ಕಾರ್ಮಿಕರಿಗೆ, ಪರ ಊರುಗಳಲ್ಲಿ ಉದ್ಯೋಗಕ್ಕೆ ತೆರಳುವವರಿಗೆ ಆದ್ಯತೆಯ ಮೇರೆಗೆ ಹಾಗೂ 18ರಿಂದ 45 ಪ್ರಾಯದವರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ಮತ್ತು ಉಪಾಧ್ಯಕ್ಷೆ ಶ್ವೇತಾ ಉಪಸ್ಥಿತರಿದ್ದರು. […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 19) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ […]
ಕವಿ ಕೆ.ವಿ.ತಿರುಮಲೇಶ್ ಕವಿತೆಗಳು ಮಲೆಯಾಳಕ್ಕೆ ಅನುವಾದ
ಬ್ರಹ್ಮಾವರ(ಜು,18): ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆಯವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ. ನರ್ತಕಿ ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ ಉತ್ಕೃಷ್ಟ ಕಾವ್ಯ ರಚನೆ ಮಾಡಿದರು. ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು. ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು […]
ಉಪ್ಪಿನ ಕುದ್ರು: ಪಂಚಗಂಗಾವಳಿ ನದಿ ತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕಾರ್ಯಕ್ರಮ
ತಲ್ಲೂರು (ಜು, 18) : ಕುಂದಾಪುರ ಕರಾವಳಿಯ ಪಂಚಗಂಗಾವಳಿ ನದಿತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕುಂದಾಪುರ ರೋಟರಿ ಕ್ಲಬ್ ಕೃಷಿಮಿತ್ರ ಯೋಜನೆಯಡಿಯಲ್ಲಿ ಉಪ್ಪಿನಕುದ್ರು ಗ್ರಾಮದಲ್ಲಿ ಪ್ರಯೋಗಿಕವಾಗಿ 1 ಎಕರೆ ಕೃಷಿ ಭೂಮಿಯಲ್ಲಿ ಪ್ರಾಯೋಗಿಕವಾಗಿ ನಾಟಿ ಮಾಡಿದ್ದೇವೆ ಎಂದು ಕುಂದಾಪುರ ರೋಟರಿ ಕ್ಲಬ್ ನೂತನ ಅಧ್ಯಕ್ಷರಾದ ಶ್ರೀ ಶಶಿಧರ್ ಹೆಗ್ಡೆ ಹೇಳಿದರು. ಅವರು ಕುಂದಾಪುರದ ರೋಟರಿ ಕ್ಲಬ್ ಹಾಗೂ ಯುವ ಸ್ಪಂದನ […]










