ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಗಸ್ಟ್15 ರಂದು ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದಿಂದ ಹೊರಟು ಹೆದ್ದಾರಿ ಮಾರ್ಗವಾಗಿ ಕೋಟೇಶ್ವರ ಪೇಟೆಯ ಮೂಲಕ ತಿರುವು ಪಡೆದು ಕುಂದಾಪುರ ಪೇಟೆಯಯತ್ತ ಸಾಗಿದ ಜಾಥಾ ನಂತರ ಶಾಸ್ತ್ರೀ ವೃತ್ತದಲ್ಲಿ ಪೂರ್ಣಗೊಳಿಸಲಾಯಿತು. ಸೈಕಲ್ ಜಾಥಕ್ಕೆ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಚಾಲನೆ ನೀಡಿದರು. […]
Day: August 17, 2021
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ : ಯೋಧರಿಗೆ ಸನ್ಮಾನ
Views: 465
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಮಾತ್ರಭೂಮಿಯ ರಕ್ಷಣೆಗಾಗಿ ಹೋರಾಡಿದ ಯೋಧರನ್ನು ಗೌರವಿಸುವ ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ಆಗಸ್ಟ್ 15 ರಂದು ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಯೋಧರಾದ ಶ್ರೀವಿಶ್ವನಾಥ ಹಂದೆ ಕುಂಭಾಶಿ ಹಾಗೂ ಕೋಟ ಪಡುಕರೆಯ ಯೋಧ ಶ್ರೀ ಲೋಹಿತ್ ಪೂಜಾರಿ ಯವರನ್ನು ಅತ್ಯಂತ ಗೌರವ ಪೂರ್ವಕವಾಗಿ ಅವರ […]
ಬಡಾಬಾಳು : ಅಟಲ್ ಜೀ ಬಸ್ ತಂಗುದಾಣ ಉದ್ಘಾಸಿದ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ
Views: 536
ಸಿದ್ದಾಪುರ (ಆ, 17) : ಸಿದ್ದಾಪುರ ಗ್ರಾಮ ಪಂಚಾಯತ್ ಬಡಾಬಾಳುವಿನಲ್ಲಿ ದೇಶದ ಮಾಜಿ ಪ್ರಧಾನಿ, ಧೀಮಂತ ನಾಯಕ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ಅಟಲ್ ಜೀ ಬಸ್ ತಂಗುದಾಣ ವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಬಡಾಬಾಳು ಇದರ ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.










