ಬೈಂದೂರು (ಸೆ , 9) : ವೀರ ಯೋಧ ಪ್ರಶಾಂತ್ ದೇವಾಡಿಗರ ಮುಂದಾಳತ್ವದ ನೇಶನ್ ಲವರ್ಸ್ ಬೈಂದೂರು ತಂಡ ಯುವಕರಲ್ಲಿ ದೇಶ ಪ್ರೇಮ ಹಾಗೂ ಕ್ರೀಡಾಸಕ್ತಿಯೊಂದಿಗೆ ಸೈನಿಕ ತರಬೇತಿಯಂತಹ ಅರ್ಥಪೂರ್ಣ ಯೋಜನೆಯನ್ನು ಹಾಕಿಕೊಂಡಿದ್ದು ,ಇವರ ಯೋಜನೆಗೆ ಬೆನ್ನೆಲುಬಾಗಿ ನಿಂತ ದೇಶದ ಪ್ರತಿಷ್ಠಿತ ಆಹಾರ ಮತ್ತು ಆತಿಥ್ಯಕ್ಕೆ ಹೆಸರಾದ ಶೆಫ್ ಟಾಕ್ ಸಂಸ್ಥೆಯ ಮುಖ್ಯಸ್ಥರು ಹಾಗೂ ವರಲಕ್ಷೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಸಂಚಾಲಕರಾಗಿರುವ ಗೋವಿಂದ ಬಾಬು ಪೂಜಾರಿಯವರನ್ನು ಗೌರವಾಧ್ಯಕ್ಷರಾಗಿ ಹಾಗೂ […]
Month: September 2021
ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ವತಿಯಿಂದ ವಿವಿಧ ಕಾರ್ಯಕ್ರಮ
ಬೈಂದೂರು (ಸೆ, 9): ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸಪ್ಟೆಂಬರ್,9 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ
ವಂಡ್ಸೆ (ಸೆ,7): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಛತ್ರಮಠ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮೆಕ್ಕೆ ಒಕ್ಕೂಟದ ಅಧ್ಯಕ್ಷರಾದ ಎಂ ಜೆ ಬೇಬಿ ಅವರು ಅಧ್ಯಕ್ಷತೆ ವಹಿಸಿದ್ದರು. ವನದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿಯಾದ ನಾರಾಯಣ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ […]
ಉಡುಪಿ ಹೆಲ್ಪ್ ಲೈನ್ (ರಿ):4ನೇಯ ವರ್ಷದ ಸಂಭ್ರಮದ ಕಾರ್ಯಕ್ರಮ
ಉಡುಪಿ (ಸೆ,7): ಹಸಿದವರ ಬಾಳಿನ ಆಶಾಕಿರಣವಾಗಿರುವ ಉಡುಪಿ ಹೆಲ್ಪ್ ಲೈನ್ (ರಿ) ಇದರ 4ನೇಯ ವರ್ಷದ ಸಂಭ್ರಮದ ಕಾರ್ಯಕ್ರಮ ಆಗಸ್ಟ್,28 ರಂದು ಅನಾಥ ಮಕ್ಕಳ ಬಾಳಿನ ಆಶಾ ಕಿರಣವಾದ ಸಂತೆಕಟ್ಟೆಯ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ಆಶ್ರಮದ ಮಕ್ಕಳಿಗೆ ಊಟ,ಉಪಹಾರ ಹಾಗೂ ಹಣ್ಣು ಹಂಪಲು ಗಳನ್ನು ವಿತರಿಸಲಾಯಿತು. ಹಾಗೆಯೇ ಕೆ.ಜಿ ರೋಡ್ ಸಮೀಪ ಸುಬ್ರಹ್ಮಣ್ಯ ಆಚಾರ್ಯರವರ ತಾಯಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ […]
ಕುಂದಾಪುರ ಮೂಲದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ
ಕುಂದಾಪುರ(ಸೆ,7): ಕುಂದಾಪುರ ಮೂಲದ ಮೂರು ವರ್ಷದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ್ದಾನೆ.ಎಳೆಯ ವಯಸ್ಸಿನಲ್ಲಿಯೇ ಅಪಾರ ಜ್ಞಾಪಕ ಶಕ್ತಿ ಹೊಂದಿರುವ ಆರ್ಯನ್ ದೇಶಗಳು, ರಾಜ್ಯಗಳು, ರಾಜಧಾನಿ, ವರ್ಣಮಾಲೆ ,ಬಣ್ಣ, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಟ್ಟನೇ ಉತ್ತರಿಸುವ ಅಪಾರ ಜ್ಞಾಪನಾ ಶಕ್ತಿ ಹೊಂದಿರುವ ಕಾರಣಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಲಭಿಸಿದೆ . ಬೆಂಗಳೂರಿನಲ್ಲಿ ನೆಲೆಸಿರುವ ಕುಂದಾಪುರದ ಕೋಡಿಯ ಕೋಟೆಮನೆ ನಾಗೇಂದ್ರ ಹಾಗೂ ಅಂಜಲಿ […]
ಶಿಕ್ಷಕರ ದಿನಾಚರಣೆ: ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರಿಗೆ ಸನ್ಮಾನಿಸಿದ ಶಿಷ್ಯೆ ಶೈನಾ ಕಲ್ಯಾಣಪುರ
ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ – ಸನ್ಮಾನ ಕಾರ್ಯಕ್ರಮ
ಕುಂದಾಪುರ ( ಸೆ.7): ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ. ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕುಂದಾಪುರ ತಾಲೂಕಿನ ಹೊಂಬಾಡಿಯ ನಿವೃತ್ತ ಶಿಕ್ಷಕರಾದ ಶ್ರೀ ಸಚ್ಚಿದಾನಂದ ಹೆಗ್ಡೆ ದಂಪತಿಯವರನ್ನು ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಇವರಿಗೆ ಸನ್ಮಾನಿಸುವ ಮೂಲಕ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಪ್ರತಿಯೊಬ್ಬ ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಅಪಾರ ಗೌರವ ಹಾಗೂ ಅಭಿಮಾನ ಹೊಂದಿರುತ್ತಾರೆ. ಅಲ್ಲದೆ ಸಂಘ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯಧನ ಹಸ್ತಾಂತರ
ಕೋಟ( ಸೆ.06) : ನೊಂದವರಿಗೆ ನೆರವಿನ ದಾರಿ ದೀಪ ವಾಗಿರುವ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಬಹುಬಗೆಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವುದರ ಜೊತೆಗೆ ನೊಂದವರಿಗೆ ಸಹಾಯ ಹಸ್ತ ಚಾಚಲು ಅರ್ಥಪೂರ್ಣ ಯೋಜನೆಗಳನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ನ 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯ ಧನ ಹಸ್ತಾಂತರ ಕಾರ್ಯಕ್ರಮ ಸಪ್ಟೆಂಬರ್, 5 ರಂದು ನೆರವೇರಿತು. ಗುರುಪ್ರಸಾದ್ ಎನ್ನುವ ವ್ಯಕ್ತಿ ಟಿಪ್ಪರ್ ಲಿಫ್ಟ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಟಿಪ್ಪರ್ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕ : ಕೊರೋನ ಲಸಿಕಾ ಅಭಿಯಾನ
ಕೋಟೇಶ್ವರ(ಸೆ.6): ಮೊಗವೀರ ಯುವ ಸಂಘಟನೆ(ರಿ) ಉಡುಪಿ ಇದರ ಕೋಟೇಶ್ವರ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರದ ಸಹಭಾಗಿತ್ವದಲ್ಲಿ ಸೆಪ್ಟೆಂಬರ್,4 ರಂದು ಕೋಟೇಶ್ವರದ ವಿಶ್ವ ಕರ್ಮ ಕಲ್ಯಾಣ ಮಂಟಪದಲ್ಲಿ ಉಚಿತ ಕೊರೋನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು.217 ಡೋಸ್ ಲಸಿಕೆ ಹಾಕುವ ಮೂಲಕ ಅಭಿಯಾನ ಯಶಸ್ವಿಯಾಯಿತು. ಮೊಗವೀರ ಯುವ ಸಂಘಟನೆಯ ಮಾರ್ಗದರ್ಶಕರಾದ ಡಾ. ಜಿ. ಶಂಕರ್ ರವರು ಕರೋನ ಸಮಯದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಸ್ಪಂದಿಸಿದ ರೀತಿ ಮತ್ತು ಕೋಟೇಶ್ವರ ಸಂಘಟನೆಯ […]










