ಕೊಲ್ಲೂರು(ಜ.30); ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.25 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಸ್ ಅರುಣ್ಪ್ರಕಾಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಹಾಗೂ ಉಪಸ್ಥಿತರಿದ್ದರು.
Month: January 2022
ಸಂವಿಧಾನದ ಅರಿವು ಅಗತ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ (ಜ.30): ನಮ್ಮ ಸಂವಿಧಾನದ ಉನ್ನತ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಅದನ್ನು ಅಧ್ಯಯನ ಮಾಡುವಂತಹ ಕೌಶಲ್ಯವನ್ನು ನಾವು ಬೆಳೆಸಿಕೊಳ್ಳಬೇಕಿದೆ. ಪೂರ್ವಾಪರಗಳನ್ನು ಅರಿಯದೆ ಎಲ್ಲ ವಿಚಾರಗಳಿಗೂ ಅನಗತ್ಯವಾಗಿ ಸಂವಿಧಾನವನ್ನು ತಳುಕು ಹಾಕುವ ಕೆಟ್ಟ ಪ್ರವೃತ್ತಿ ನಮ್ಮಲ್ಲಿ ಕೊನೆಗಾಣಬೇಕಿದೆ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲನಾಯಕ ಇಂಡೋರ್ ಸ್ಟೇಡಿಯಂನಲ್ಲಿ ಗಂಗೊಳ್ಳಿ ರೋಟರಾಕ್ಟ್ ಕ್ಲಬ್ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
ಇ ಸಿ ಆರ್ ಕಾಲೇಜ್: 73 ನೇ ಗಣರಾಜ್ಯೋತ್ಸವ
ಮಧುವನ(ಜ.30): ಇ ಸಿ ಆರ್ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನೆರವೇರಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ ಭಾಸ್ಕರನ್ ಧ್ವಜಾರೋಹಣ ನೆರವೇರಿಸಿ ಪ್ರಜಾ ಪ್ರಭುತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಶ್ರೀ ಅನಿಲ್ ಪಣಿಕ್ಕರ್, ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್, ಕೆನರಾ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀ ನಟರಾಜ್ ಕೆ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಸುಷ್ಮಿತಾ ಸ್ವಾಗತಿಸಿದರು, […]
ಸಂತ ಮೇರಿ ಮಹಾವಿದ್ಯಾಲಯದ 73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ
ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಅಭಿಯಾನ
ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, […]
ಕಟ್ ಬೆಲ್ತೂರು: ರಾಷ್ಟ್ರೀಯ ಮತದಾರರ ದಿನಾಚರಣೆ
ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: 73 ನೇ ಗಣರಾಜ್ಯೋತ್ಸವ (ಧ್ವಜಾರೋಹಣ, ಎನ್ಸಿಸಿ ಪೆರೇಡ್, ಸೈನಿಕರಿಗೆ ಸಮ್ಮಾನ)
ಕುಂದಾಪುರ ( ಜ26) : ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ ನೆರವೇಸಿದರು. ನಂತರ ಮಾತನಾಡಿದ ಅವರು, ನಾವು ಸಮಾನತೆಯಿಂದ ಶಿಕ್ಷಣ ಕಲಿಯುತ್ತಿರುವುದೇ ಸಂವಿಧಾನ ಜಾರಿಗೆ ಬಂದದ್ದರಿಂದ. ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ: ವಾರ್ಷಿಕ ಮಹಾಸಭೆ
ಉಡುಪಿ(ಜ.26): ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ 16ನೇ ವಾರ್ಷಿಕ ಮಹಾಸಭೆ ಜ. 26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಜರುಗಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್’ನ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮೊಗವೀರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೆ.ಎಂ. ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ- ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ
ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ : ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆ
ಉಡುಪಿ (ಜ.26): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆಯಾಗಿದ್ದಾರೆ. ಜನವರಿ26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಂಘಟನೆಯ16 ನೇ ವಾರ್ಷಿಕ ಸಭೆಯಲ್ಲಿ 2022-24 ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಾಡೋಜ ಡಾ. ಜಿ ಶಂಕರ್ ಯವರ ಉಪಸ್ಥಿತಿಯಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಶ್ರೀಮತಿ ಗುಲಾಬಿ ,ಪ್ರಧಾನ ಕಾರ್ಯದರ್ಶಿಯಾಗಿ ರವೀಶ ತೆಕ್ಕೆಟ್ಟೆ, ಕೋಶಾಧಿಕಾರಿಯಾಗಿ ರವಿರಾಜ ಕಳವಾಡಿ ಆಯ್ಕೆಯಾಗಿದ್ದಾರೆ.ಈ […]










