ಕೋಟೇಶ್ವರ (ಜ.20): ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ ಕ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಇವರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ ಆಯ್ಕೆ ಮಾಡಿ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಶ್ರೀ ಸತೀಶ ಜೋಗಿ, ಸಮಿತಿ ಸದಸ್ಯರಾಗಿ ಶ್ರೀ ಎ. ರೋಶನ್ ಶೆಟ್ಟಿ ಸಲ್ವಾಡಿ, ಶ್ರೀ ಕಾಳಿಂಗ ಶೆಟ್ಟಿ ಬೀಡಿನಮನೆ, ಶ್ರೀ ಚಂದ್ರಶೇಖರ ನಾಯ್ಕ ಕಾಳಾವರ, ಶ್ರೀ ವಸಂತ ಶೆಟ್ಟಿ […]
Month: January 2022
ಕಂಬದಕೋಣೆ: ಲಿವರ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಜಯಶ್ರೀ ಮೊಗವೀರಗೆ ಬೇಕಿದೆ ಸಹಾಯ ಹಸ್ತ
ಕಂಬದಕೋಣೆ(ಜ.18): ಕಂಬದಕೋಣೆ ನಿವಾಸಿಯಾದ ನಾಗರಾಜರವರ ಪತ್ನಿ ಜಯಶ್ರೀ ಮೊಗವೀರ ರವರು ದೀರ್ಘಕಾಲದಿಂದ ಲಿವರ್ ಕ್ಯಾನ್ಸರ್” ಸಮಸ್ಯೆಯಿಂದ ಬಳಲುತ್ತಿದ್ದು , ಪ್ರಸ್ತುತ ಇವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಚಿಕಿತ್ಸೆಗೆ ಸುಮಾರು 10 ಲಕ್ಷದವರಿಗೆ ಖರ್ಚಾಗಿದ್ದು, ಮುಂದಿನ ಚಿಕಿತ್ಸೆಗೆ 8ಲಕ್ಷ ಖರ್ಚಾಗಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ . ಇಷ್ಟು ಖರ್ಚನ್ನು ಬರಿಸಲು ಈ ಬಡ ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಹಾಗಾಗಿ ಸಹ್ರದಯಿ ದಾನಿಗಳು ಚಿಕಿತ್ಸೆಗೆ ನೆರವು ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.ಧನ ಸಹಾಯ ಮಾಡುವವರು ಈ […]
ಮುಂಬೈ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷರಾಗಿ ರಾಜು ಮೆಂಡನ್ ಆಯ್ಕೆ
ಕುಂದಾಪುರ (ಜ.17 ): ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬೈಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ರಾಜು ಮೆಂಡನ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ನಡೆದ ಸಂಘದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿಶ್ರೀ ರಾಜು ಮೆಂಡನ್ ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉದ್ಯಮಿ ರಮೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಂಜುನಾಥ್ ಎನ್ ನಾಯ್ಕ್, ಮೊಗವೀರ ಮುಖಂಡರುಗಳಾದ ಸುರೇಶ್ ಆರ್ ಕಾಂಚನ್, ಮಹಾಬಲ ಕುಂದರ್, ಎನ್ ಎಚ್ ಬಗ್ವಾಡಿ, ಸಂತೋಷ್ […]
ಮಲ್ಪೆ: ಈಜುಪಟು ಸುರೇಶ್ ಖಾರ್ವಿಯಿಂದ ಮೀನುಗಾರ ಮಹಿಳೆಯ ರಕ್ಷಣೆ
ಮಲ್ಪೆ(ಜ,17): ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಮೀನು ಹೊರುವ ಮಹಿಳೆ ರಾತ್ರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸುತಿರುವಾಗ ಆಯತಪ್ಪಿ ನೀರಿಗೆ ಬಿದ್ದ ಅಪಾಯದ ಸಂದರ್ಭದಲ್ಲಿ ಸ್ವಲ್ಪವೂ ತಡಮಾಡದೆ ಅಮೃತೇಶ್ವರಿ ಬೋಟಿನಲ್ಲಿ ದುಡಿಯುತ್ತಿದ್ದ ಜೀವರಕ್ಷಕ ಸುರೇಶ್ ಖಾರ್ವಿ ಭಟ್ಕಳ (ಬಂದರ್ ರೋಡ್ ) ತನ್ನ ಜೀವದ ಹಂಗು ತೊರೆದು ನೀರಿಗೆ ಹಾರಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇವರ ಸಮಯ ಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀ ಸುರೇಶ್ ಖಾರ್ವಿಯವರು ನುರಿತ ಈಜುಪಟು ಆಗಿದ್ದು, ತುರ್ತು ಸಮಯದಲ್ಲಿ ಹಲವಾರು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ(ಜ.17): ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು. ಇದು ಸ್ಪರ್ಧಾತ್ಮಕ ಯುಗ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
ಶಿರ್ವ(ಜ.17): ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ […]
ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಗಂಗೊಳ್ಳಿ(ಜ.15 ): ಯುವ ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ದೇವಾಡಿಗ ಉಪ್ಪಿನಕುದ್ರು ಇವರು ವೈಯಕ್ತಿಕ ನೆಲೆಯಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿದರು. ಸನ್ಮಾನಿಸಿ ಮಾತನಾಡಿದ ಅವರು ನಮ್ಮ ನಡುವಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ ನಿರಂತರವಾಗಿ ಆಗಬೇಕಿದೆ. ಆ ಮೂಲಕ ಇಂತಹ ಕಾರ್ಯಗಳು ಮತ್ತಷ್ಟು ಪ್ರತಿಭೆಗಳ ಬೆಳವಣಿಗೆಗೆ […]
ಕಂದಾವರದ ಕೆಂದಾವರೆಗೆ ಕಿರೀಟ ಪ್ರಶಸ್ತಿ ಪ್ರದಾನ ( ಮಾರಣಕಟ್ಟೆ ಹಬ್ಬದಲ್ಲಿ ನೈಕಂಬ್ಳಿ ಸಂಯೋಜನೆಯ ಯಕ್ಷಸಂಕ್ರಾಂತಿ ಯಕ್ಷಗಾನ)
ಕುಂದಾಪುರ (ಜ.15): ಮಕರ ಸಂಕ್ರಾಂತಿಯಂದು ಮಾರಣಕಟ್ಟೆ ಹಬ್ಬದಲ್ಲಿ ಜರುಗಿದ ಪಾವಂಜೆ ಮೇಳದ ಯಕ್ಷಗಾನ ಬಯಲಾಟದಲ್ಲಿ ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ನಾಗರಾಜ್ ಶೆಟ್ಟಿ ನೈಕಂಬ್ಳಿ ನೇತೃತ್ವದ ಯಕ್ಷ ಸಂಕ್ರಾಂತಿಯ ‘ಕಿರೀಟ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಂದಾವರ ರಘುರಾಮ ಶೆಟ್ಟಿಯವರು, ಯಕ್ಷಗಾನ ಅಮೋಘವಾದ ಕಲೆ. ದೀರ್ಘವಾಗಿ ಸಾಗಿ ಬಂದ ಈ ಕಲೆ ವಿಚಾರಶೀಲರು, ಜಿಜ್ಞಾಸುಗಳು, ಸಾಮಾನ್ಯ ಹಳ್ಳಿಯ ಜನರನ್ನೂ ತಲುಪುವ ಸಾಮರ್ಥ್ಯ ಹೊಂದಿದ ಪ್ರಭಾವಿ ಕಲೆಯಾಗಿದೆ. ಯಕ್ಷಗಾನಕ್ಕೆ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ:ವಿವೇಕಾನಂದ ಜಯಂತಿಯ ಪ್ರಯುಕ್ತ ಪುಸ್ತಕ ಕೊಡುಗೆ
ಆಜ್ರಿ(ಜ.13): ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಇಲ್ಲಿನ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು .ಜ.12 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿಯ ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ವಸಂತ ಪೂಜಾರಿ ಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ದಿನಾಚರಣೆ
ಶಿರ್ವ(ಜ.13): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋವರ್- ರೇಂಜರ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಆದರ್ಶ, ಅವರ […]










