ಕುಂದಾಪುರ (ಜೂ,10): ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ,ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶೈಕ್ಷಣಿಕ ,ಸಾಹಿತ್ಯ ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತಿದ್ದು ,ವಿದ್ಯಾರ್ಥಿಗಳ ಕಲಿಕಾ ಆಸಕ್ತಿಗೆ ಪೂರಕವಾದ ಅವಕಾಶವನ್ನು ಸಂಸ್ಥೆ ಕಲ್ಪಿಸುತ್ತಿದೆ […]
Month: June 2022
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ (ಜೂ,10):. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾರ್ಷಿಕ ಕ್ರೀಡಾಕೂಟದಲ್ಲಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರದ ನಿರ್ದೇಶಕರಾದ ಶ್ರೀ ಕುಸುಮಾಕರ ಶೆಟ್ಟಿ ,ಸಂಚಲನ ಗ್ರೂಪ್ ಕುಂದಾಪುರದ ಅಧ್ಯಕರಾದ ಅಕ್ಷತ್ ಶೆಟ್ಟಿ ,ಕಾಲೇಜಿನ ದೈಹಿಕ ಶಿಕ್ಷಣ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಮೆಗಾ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ
ಕುಂದಾಪುರ(ಜೂ,08): ಸಿ.ಎ. ಸಿ ಎಸ್ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು.ನಿರಂತರ ಪರಿಶ್ರಮ ಹಾಗೂ ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ ಸಿ.ಎಸ್ ಕನಸ್ಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ ಸಿ ಎ ಐ ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ ಕೋತಾ ಎಸ್ ಶ್ರೀನಿವಾಸ ಹೇಳಿದರು. ಅವರು ಐ ಸಿ ಎ ಐ ಉಡುಪಿ ಶಾಖೆಯ ಎಸ್ ಐ ಆರ್ ಸಿ ಹಾಗೂ ಕಾಲೇಜಿನ ವಾಣಿಜ್ಯ ವಿಭಾಗ ಜೂ,8 […]
ಚಿಟ್ಟೆ ನಾಟಕ ಪ್ರದರ್ಶನಕ್ಕೆ ಮನಸೋತ ಪ್ರೇಕ್ಷಕ ವರ್ಗ
ಬೇಲೂರು ರಘುನಂದನ್ ಸರ್ ರವರ ರಚನೆಯ, ಕೃಷ್ಣಮೂರ್ತಿ ಕವತ್ತಾರ್ ಸರ್ ರವರ ನಿರ್ದೇಶನದಲ್ಲಿ, ನನ್ನ ಪುಟ್ಟ ಗೆಳೆಯ ಗೋಕುಲ ಸಹೃದಯ ನಟಿಸಿರುವ ನಾಟಕ ಚಿಟ್ಟೆ. ಈ ನಾಟಕ ರಚನೆಯಾಗಿ ಪ್ರದರ್ಶನ ಗೊಳ್ಳಲು ಪ್ರಾರಂಭವಾಗಿ ಸುಮಾರು ಒಂದೂವರೆ ವರ್ಷಗಳೇ ಆಗಿರಬಹುದು ಎಂದು ಭಾವಿಸುತ್ತೇನೆ.ಇಂದು ಕರಾವಳಿ ಭಾಗದಲ್ಲಿ ಈ ನಾಟಕದ ಪ್ರದರ್ಶನಗಳು ಆಯೋಜನೆಗೊಂಡಿದ್ದು ಅದೆಷ್ಟೋ ದಿನಗಳಿಂದ ಈ ನಾಟಕವನ್ನು ನೋಡಲು ಅವಕಾಶ ವಂಚಿತನಾಗಿದ್ದ ನಾನು ಇಂದು ಅರೆಹೊಳೆ ಪ್ರತಿಷ್ಠಾನ, ಅರೆಹೊಳೆಯಲ್ಲಿ ಈ ನಾಟಕದ ನಲವತ್ತೈದನೇ ಪ್ರದರ್ಶನ […]
ಶ್ರೀ ಆನೆಗುಂದಿ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಪೋಷಕರ ಸಭೆ
ಮಂಗಳೂರು (ಜೂ,7):ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶ್ರೀ ಆನೆಗುಂದಿ ಮಠ ಸೂರ್ಯಚೈತನ್ಯ ಶಾಲಾ ಸಭಾಂಗಣದಲ್ಲಿ ಜೂ,04ರಂದು ಶ್ರೀ ಆನೆಗುಂದಿ ಮೂಲಗುರು ಪರಂಪರಾ ಪರಮ ಪೂಜ್ಯನೀಯ ಜಗದ್ಗುರುಗಳ ದಿವ್ಯ ಉಪಸ್ಥಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. “ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ. ಸೂರ್ಯ ಚೈತನ್ಯ ಹೈಸ್ಕೂಲ್ […]
ಆರ್.ಎನ್. ಶೆಟ್ಟಿ ಪಿಯು ಕಾಲೇಜಿನಲ್ಲಿ ಶ್ರಾವ್ಯಾಳಿಗೆ ಉಚಿತ ಪ್ರವೇಶಾತಿ: ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ
ಕುಂದಾಪುರ:(ಜೂ,7): ಅನಾರೋಗ್ಯದ ನಡುವೆಯೂ ಆಸ್ಪತ್ರೆಯಲ್ಲಿ ಮಲಗಿಕೊಂಡೆ ಎಸ್ಎಸ್ ಎಲ್ ಸಿ ಪರೀಕ್ಷೆ ಬರೆದು 580 ಅಂಕ ಪಡೆದ ಶ್ರಾವ್ಯಾಳ ಭವಿಷ್ಯದ ಶಿಕ್ಷಣವನ್ನು ಗಮನಿಸಿದ ಬೈಂದೂರು ಶಾಸಕರು ಹಾಗೂ ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಶ್ರಾವ್ಯಗಳ ಪಿ.ಯು.ಸಿ ಶಿಕ್ಷಣಕ್ಕೆ ಉಚಿತ ಅವಕಾಶ ಮಾಡಿಕೊಟ್ಟಿದ್ದಾರೆ. ಬಗ್ವಾಡಿ ನಿವಾಸಿ ರಾಜು ಪೂಜಾರಿ ಮತ್ತು ಸುಜಾತಾ ಆರ್. ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಕರಳು ಸಂಬಂಧಿ […]
ಶ್ರಾವ್ಯಾಳ ವೈದ್ಯಕೀಯ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಡಾ. ಗೋವಿಂದ ಬಾಬು ಪೂಜಾರಿ
ಹೆಮ್ಮಾಡಿ(ಜೂ,7): ಅನಾರೋಗ್ಯದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ವಿಶೇಷ ಸಾಧನೆಗೈದ ಕುಂದಾಪುರ ತಾಲ್ಲೂಕಿನ ಬಗ್ವಾಡಿ ಗ್ರಾಮದ ಬಗ್ವಾಡಿ ನಿವಾಸಿ ರಾಜು ಪೂಜಾರಿ ಮತ್ತು ಸುಜಾತಾ ಆರ್. ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಕರಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಇಕೆಯ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಲು ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಮಂದೆ ಬಂದಿದ್ದಾರೆ. ಬಗ್ವಾಡಿ ಸಿಂಗನಕೊಡ್ಲುವಿನಲ್ಲಿರುವ ಶ್ರಾವ್ಯಳ ಮನೆಗೆ ಖುದ್ದಾಗಿ ಡಾ.ಗೋವಿಂದ ಬಾಬು ಪೂಜಾರಿಯವರಯ […]
ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್: ಟಿ. ಶಶಾಂಕ್ ಶೆಣೈ ಗೆ ಚಿನ್ನದ ಪದಕ
ಉಡುಪಿ(ಜೂ,5): ಬೊಡೋಕಾನ್ ಕರಾಟೆ& ಸ್ಪೋರ್ಟ್ಸ್ ಅಸೋಸಿಯೇಷನ್ ಉಡುಪಿ ಇವರು ಅಂಬಲಪಾಡಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಿರಣ್ಸ್ ಡ್ರಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ವಿದ್ಯಾರ್ಥಿ ಹಾಗೂ ತರಬೇತುದಾರರಾದ ಟಿ. ಶಶಾಂಕ್ ಶೆಣೈ ಸೀನಿಯರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕಿಯೋಶಿ ಕಿರಣ್ ಕುಂದಾಪುರ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ ಟಿ.ದಿನಕರ ಶ್ಯಾನುಭಾಗ್ ಮತ್ತು ಉಷಾ ದಿನಕರ್ ರವರ ಪುತ್ರ .
ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಜೂ,5): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನ ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 14 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಮಯ ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು : ಪ್ರತಿಭಾ ಪ್ರದರ್ಶನ – ನೆಲದ ಕಲೆ & ಸಂಸ್ಕೃತಿಯನ್ನುಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಮೇಲಿದೆ -ಶ್ರೀ ಭಾಸ್ಕರ ಕೊಗ್ಗ ಕಾಮತ್
ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು. ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. […]










