ಕುಂದಾಪುರ (ನ ,18): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ ಇಲ್ಲಿನ 9 ನೇ ತರಗತಿಯ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಮತ್ತು ಸಿರಿಕಾ ಇವರು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7 ನೇ ತರಗತಿಯ ಅಕ್ಷರ್ ಎನ್ ಶೆಟ್ಟಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳನ್ನು ಎಂ.ಎಂ ಹೆಗ್ಡೆ ಎಜುಕೇಶನಲ್ […]
Day: November 19, 2022
ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ಸ್ವರಕ್ಷಣ ತರಬೇತಿ ಕಾರ್ಯಗಾರ
ಗಂಗೊಳ್ಳಿ ( ನ,18): ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಸ್ವರಕ್ಷಣಾ ತಂತ್ರಗಳನ್ನು ಕಲಿತುಕೊಳ್ಳಬೇಕು. ಇದು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಆಪತ್ತಿನ ಕಾಲದಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ ಹೇಳಿದರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ,ರೋಟರಿ ಕ್ಲಬ್ ಗಂಗೊಳ್ಳಿ, ವೆಂಕಟೇಶ ಕೃಪ ಟ್ರೇಡರ್ಸ್ ಗಂಗೊಳ್ಳಿ ಸುರಭಿ ಡಿಜಿಟಲ್ ಸ್ಟುಡಿಯೋ […]
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ನ,18): ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವಗುಣ, ಸಮಯಪ್ರಜ್ಞೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಎನ್.ಎಸ್.ಎಸ್. ಉತ್ತಮ ವೇದಿಕೆ. ಈ ವೇದಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಪಡೆಯುವುದರ ಜೊತೆ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ| ರಾಧಾಕೃಷ್ಣ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ […]
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕಗಳ ಉದ್ಘಾಟನೆ
ಕುಂದಾಪುರ ( ನ,18): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನೆ ನವೆಂಬರ್ 17 ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಸ್ವಯಂ ಸೇವಕರ ಪಾತ್ರ ಹಾಗೂ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ಡಾ | ಬಿ. ಬಿ. ಹೆಗ್ಡೆ ಕಾಲೇಜು: ಇಂಗ್ಲೀಷ್ ಸಂಘದ ಉದ್ಘಾಟನೆ
ಕುಂದಾಪುರ (ನ,18): ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯ ಅಗತ್ಯವಿಲ್ಲದಿರಬಹುದು ಆದರೆ ಇಂಗ್ಲೀಷ್ ಭಾಷೆಯ ಬಳಕೆ ಇಂದಿನ ತುರ್ತು. ಹಾಗಾಗಿ ಯಾವುದೇ ಹಿಂಜರಿಕೆ, ಕೀಳರಿಮೆ ಇಲ್ಲದೆ ಮಾತನಾಡುವ ಮೂಲಕ ಸಂವಹನ ಸ್ಪಷ್ಟತೆಯನ್ನು ಮತ್ತು ಭಾಷೆಯ ತೊಡಕುಗಳನ್ನು ನಿವಾರಿಸಿಕೊಳ್ಳಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶ್ರೀ ಪಿ.ಎ. ಥೋಮಸ್ ಹೇಳಿದರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ […]










