ಕುಂದಾಪುರ (ಅ.26): ಕರಾವಳಿಯ ಪ್ರಸಿದ್ಧ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಕುಂದಾಪುರದ ಡಾ|ಬಿ.ಬಿ ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸ್ವಯಂ ಸೇವಕರಿಂದ ಒಂದು ದಿನದ ಸೇವಾ ಶಿಬಿರವನ್ನು ಅಕ್ಟೋಬರ್ 22ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಸ್ವಯಂಸೇವಕರು ಸಕ್ರಿಯವಾಗಿ ಈ ಶಿಬಿರದಲ್ಲಿ ಭಾಗವಹಿಸಿದ್ದರು.ಕಾಲೇಜಿನ ರೋವರ್ಸ್ ಘಟಕದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಶಿಬಿರವನ್ನು ಸಂಯೋಜಿಸಿದರು.ಜಿಲ್ಲಾ ಸ್ಕೌಟ ಮತ್ತು ಗೈಡ್ ಪ್ರಮುಖರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.
Day: October 26, 2023
ಜೈ ಕುಂದಾಪ್ರ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯಾ ಕುಂದಾಪುರ ಆಯ್ಕೆ
Views: 235
ಕುಂದಾಪುರ (ಅ.26): ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ). ಕುಂದಾಪುರ ಸಂಸ್ಥೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿ ಮಹಿಳಾ ಘಟಕದ ನಿರ್ವಾಹಕಿಯಾಗಿ ಈಗ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಅವಧಿಗೆ ದಿವ್ಯ ಕುಂದಾಪುರ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪುಂಡಲಿಕ ಮೊಗವೀರ ಹಾಗೂ ಪದಾಧಿಕಾರಿಗಳು ಇವರಿಗೆ ಶುಭ ಹಾರೈಸಿದ್ದಾರೆ.
ಉಚ್ಚಿಲ ದಸರಾ ಮೆರವಣಿಗೆ: ಸಾರ್ವಜನಿಕರ ಗಮನ ಸೆಳೆದ ಮೊಗವೀರ ಯುವ ಸಂಘಟನೆಯ ಟ್ಯಾಬ್ಲೊ
Views: 215
ಉಚ್ಚಿಲ(ಅ.26): ಕರಾವಳಿ ಭಾಗದ ಪ್ರಸಿದ್ಧ ಉಚ್ಚಿಲ ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಇವರ ರಕ್ತದಾನದ ಮಹತ್ವದ ಕುರಿತಾಗಿ ಜನಜಾಗೃತಿ ಸಾರುವ ಟ್ಯಾಬ್ಲೊ ಸಾರ್ವಜನಿಕರ ಗಮನ ಸೆಳೆದಿದೆ. ಕರಾವಳಿ ಭಾಗದಲ್ಲಿ ರಕ್ತದಾನದ ಕ್ರಾಂತಿಯನ್ನೇ ಮಾಡಿರುವ ನಾಡೋಜ ಡಾ.ಜಿ. ಶಂಕರ್ ರವರ ಮಾರ್ಗದರ್ಶನದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಈಗಾಗಲೇ ನಾಡಿನಾದ್ಯಂತ ಹಮ್ಮಿಕೊಂಡಿರುವ ರಕ್ತ ದಾನದ ಕಿರುನೋಟ ಹಾಗೂ ಜಿ.ಶಂಕರ್ ಮಣಿಪಾಲ […]










