ಕುಂದಾಪುರ (ಮೇ,28 ): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ಪ್ರತಿಭಾ ಪ್ರದರ್ಶನ “ಸಂಭ್ರಮ”ವನ್ನು ಕುಂದಾಪುರದ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಸತೀಶ್ ಪೂಜಾರಿಯವರು ಉದ್ಘಾಟಿಸಿದರು. ಕರಾವಳಿ ಭಾಗದಲ್ಲಿ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜು ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಸಾಧನೆಗೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿ ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲಿರುವ 16 ತಂಡಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ […]
Year: 2023
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಸಂಭ್ರಮದ ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಮೇ ,28 ): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ಪ್ರತಿಭಾ ಪ್ರದರ್ಶನ ಸಂಭ್ರಮ ಮೇ27 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 16 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಪೂರ್ಣವಾಗಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿಯವರು ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಿರ್ಪುಗಾರರಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ […]
ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ನಲ್ಲಿ ಕ್ರಿಯೇಟಿವ್ ಕಾಲೇಜಿಗೆ 2 ರ್ಯಾಂಕ್
ಕಾರ್ಕಳ(ಮೇ 27): ಇದೇ 2023 ಮೇ ತಿಂಗಳಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್ ಜಿ ನಾಯಕ್ ಆಲ್ ಇಂಡಿಯಾ ರ್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಗಳಿಸಿದ್ದಾರೆ ಹಾಗೂ ಸುಮುಖ್ ಶೆಟ್ಟಿ ಜೆ.ಎಸ್ ಬಿ.ಆರ್ಕ್ ನಲ್ಲಿ 609 ನೇ ರ್ಯಾಂಕ್ ಗಳಿಸಿದ್ದಾರೆ. ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಹಾಗೂ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲಾ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಾಣಿಜ್ಯ ವಿಭಾಗದಿಂದ ಕೈಗಾರಿಕಾ ಭೇಟಿ
ಕುಂದಾಪುರ : (ಮೇ 21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ ನೀಡದರು.ಮಣಿಪಾಲದ ಅರ್ಮೊರ್ ಕಾರ್ಟೊನ್ಸ್ ಮತ್ತು ಉದಯವಾಣಿ ಪ್ರೆಸ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನದ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅರ್ಮೊರ್ ಕಾರ್ಟೊನ್ಸ್ನ ಮ್ಯಾನೇಜರ್ ಪ್ರಶಾಂತ್ ಕಾಮತ್, ಕ್ವಾಲಿಟಿ ಇಂಜಿನಿಯರ್ ಪ್ರತಿಭಾ ಕೈಗಾರಿಕಾ ನಿರ್ವಹಣೆ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಐ.ಬಿ.ಎಮ್. ಪ್ರೈವೇಟ್ ಲಿಮಿಟೆಡ್ ಶೈಕ್ಷಣಿಕ ಒಪ್ಪಂದ
ಕುಂದಾಪುರ, (ಮೇ, 19): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಐಬಿಎಮ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ ನಡುವೆ ಶೈಕ್ಷಣಿಕ ಒಪ್ಪಂದ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಐಬಿಎಮ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ನ ಕಂಟ್ರಿ ಮ್ಯಾನೇಜರ್ ಶ್ರೀ ಜಗದೀಶ್ ಭಟ್ ಅವರು ಐಬಿಎಮ್ ತರಬೇತಿಯ ಅಗತ್ಯತೆ ಹಾಗೂ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಿದರು.ಇನ್ನೋರ್ವ ಅತಿಥಿಯಾದ ಐಬಿಎಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರೀಜಿನಲ್ ಮ್ಯಾನೇಜರ್ […]
ಎಚ್.ಎಮ್.ಎಮ್&ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್- ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳು ತೀರಾ ವಿಭಿನ್ನ, ವಿಶಿಷ್ಟ ರೀತಿಯಲ್ಲಿ ಶಿಸ್ತುಬದ್ಧವಾಗಿ ಸಮ್ಮರ್ ಕ್ಯಾಂಪ್ ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಹರ್ಷೋದ್ಗಾರ, ಅಭಿಮಾನ ಮತ್ತು ಅಭಿನಂದನೆಯೊಂದಿಗೆ 10 ದಿನಗಳ “ಪ್ಯಾಟಿ ಮಕ್ಕಳ್ ಹಳ್ಳಿ ಟೂರ್” ಸಮ್ಮರ್ ಕ್ಯಾಂಪ್ ಸಂಪನ್ನಗೊಂಡಿತು. ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ […]
ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ: ಮಂಗಳೂರು ವಿ.ವಿ ಥ್ರೋಬಾಲ್ ಪಂದ್ಯಾವಳಿ- ಆಳ್ವಾಸ್ ಮೂಡುಬಿದಿರೆ ಚಾಂಪಿಯನ್
ಮೂಡ್ಲಕಟ್ಟೆ (ಮೇ,21): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಪಟ್ಟ ಅಲಂಕರಿಸಿತು . ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ […]
ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ: ಸಿ.ಎಮ್.ಐ ಅರ್ಹತಾ ಪರೀಕ್ಷೆಯಲ್ಲಿ ಉತ್ಕ್ರಷ್ಟ ಸಾಧನೆ – 11 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,17): ಕಂಪೆನಿ ಸೆಕ್ರೇಟರಿ ಆಫ್ ಇಂಡಿಯಾ ಇದರ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನಸ್ಟಿಟ್ಯೂಟ್ ಆಫ್ ಕಂಪೆನಿ ಸಕ್ರೇಟರಿ ಆಫ್ ಇಂಡಿಯಾ ಇದೇ ಮೇ 6 ರಂದು ನಡೆಸಿದ ಸಿ.ಎಸ್.ಇ.ಇ.ಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ಧ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್ ಹೆಗಡೆಯಾಲ್, ಧೃತಿ ಡಿ. […]
ಗುಳ್ಳಾಡಿಯ ಶ್ರೀ ಚಿತ್ತೇರಿ ಬ್ರಹ್ಮಲಿಂಗೇಶ್ವರ ದೈವಸ್ಥಾನ- ಒಂದು ಅಧ್ಯಯನ
ತುಳುನಾಡ ಸಿರಿ ಯ ಬದುಕಿನ ಪೂರ್ವಾರ್ಧ ಭಾಗವೆಲ್ಲಾ ನಡೆದಿರುವುದು ಕರಾವಳಿಯ ಕುಂದಾಪುರದ ಪರಿಸರದಲ್ಲೇ. ಕುಲದೈವ ಬ್ರಹ್ಮರ ವರಪ್ರಸಾದದಿಂದ ಸಿರಿಯ ಜನನವಾಯಿತೆಂಬ ಮಾಹಿತಿ ನಮಗೆ ತಿಳಿದುಬರುತ್ತದೆ. ಹೊದೆದ ಬಟ್ಟೆಯಲ್ಲಿ ಬಿರ್ಮಾಳ್ವರಿಗೆ ನೀಡಿದ ಪ್ರಸಾದವು ಹಿಂಗಾರದ ಹಾಳೆ ( ಪಿಂಗಾರದ ಹೂವಿನ ಗೊಂಚಲು ) ಮತ್ತು ಗಂಧದ ಗುಳಿಗೆ, ಈ ಪ್ರಸಾದದಲ್ಲಿ ಬಿರ್ಮಾಳ್ವರಿಗೆ ಹೆಣ್ಣು ಮಗುವೊಂದು ಜನಿಸುತ್ತದೆ. ಈ ಹೆಣ್ಣು ಮಗುವಿಗೆ ಸಿರಿ, ಅಕ್ಕೆರಸು ಸಿರಿ, ಸತ್ಯನಾಪುರದ ಸಿರಿ, ಸತ್ಯಮಾಲೋಕದ ಸಿರಿ, ಸತ್ಯದ […]
ಮೂಡ್ಲಕಟ್ಟೆ ಐ.ಎಂ.ಜೆ. ಕಾಲೇಜಿನಲ್ಲಿ ಮೇ 17-18 ರಂದು ಮಂಗಳೂರು ವಿ.ವಿ. ಮಟ್ಟದ ತ್ರೋ ಬಾಲ್ ಪಂದ್ಯಾಟ
ಕುಂದಾಪುರ(ಮೇ16): ಮೂಡ್ಲಕಟ್ಟೆಯ ಐ.ಎಂ.ಜೆ ವಿದ್ಯಾ ಸಂಸ್ಥೆಯ ಅಂಗಸಂಸ್ಥೆಯಾದ ಐ.ಎಂ.ಜೆ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾ ಸಂಸ್ಥೆ ಯ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋ ಬಾಲ್ ಪಂದ್ಯಾಟ ಇದೇ ಮೇ 17 ರಿಂದ 18ರ ತನಕ ನಡೆಯಲಿದೆ. ಉಡುಪಿ ಜೋನ್ ಮಟ್ಟದ ಪಂದ್ಯಗಳನ್ನು ಆಯೋಜಿಸುವುದರೊಂದಿಗೆ ಅದರ ಮುಂದಿನ ಹಂತವಾಗಿ ಉಡುಪಿ-ಮಂಗಳೂರಿನ ಅಂತರ್ ಜೋನ್ ಪಂದ್ಯಗಳನ್ನು ಸಂಸ್ಥೆ ನಡೆಸಿಕೊಡಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ ಎಂ.ಪಟೇಲ್ ಹಾಗೂ […]










