ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ & ರೇಂಜರ್ಸ್ , ಯುವ ರೆಡ್ಕ್ರಾಸ್ ಘಟಕ ಹಾಗೂ ರೋರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
Year: 2023
ಡಾ| ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಸರ್ವಧರ್ಮ ಪ್ರಾರ್ಥನೆ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ […]
ಕೂಕನಾಡು ಪುಟ್ಟಮ್ಮ ಶೆಡ್ತಿ ನಿಧನ
ಹೆಮ್ಮಾಡಿ (ಆ.03): ಇಲ್ಲಿನ ದೇವಲ್ಕುಂದ ಗ್ರಾಮದ ಸಾಲಗದ್ದೆ ದಿ.ಶಿವರಾಮ ಶೆಟ್ರ ಪತ್ನಿ ಕೂಕನಾಡು ಪುಟ್ಟಮ್ಮ ಶೆಡ್ತಿ (93) ಅಕ್ಟೋಬರ್ 03 ರಂದು ನಿಧನ ಹೊಂದಿದ್ದಾರೆ. ಇವರು ಕೂಕನಾಡು ಅರಣ್ಯ ಗುತ್ತಿಗೆದಾರ ರಾಜರಾಮ ಶೆಟ್ಟಿ ಸೇರಿ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಗಾಂಧಿ ಎಂಬ ಮಾಂತ್ರಿಕ …..
2 ಅಕ್ಟೋಬರ್ 1869 ರಂದು ನಮ್ಮ ಭಾರತಾಂಬೆಯ ಪುಣ್ಯಗರ್ಭದಲ್ಲಿ ಜನಿಸಿ, ಭಾರತಾಂಬೆಯ ಕೀರ್ತಿಪತಾಕೆಯನ್ನು ವಿಶ್ವಕ್ಕೆ ಹಾರಿಸಿದ ಮಹಾನ್ ಚೇತನ ಮಹಾತ್ಮಾ ಗಾಂಧೀಜಿ. ಗಾಂಧಿ ಎಂದರೆ ಯಾರೊಬ್ಬರೂ ಮರೆಯಲಾಗದ ಭಾವ. ಜಗತ್ತಿಗೆಲ್ಲಾ ಶಾಂತಿ ಪಾಠಮಾಡಿದ ಶಾಂತಿ ದೂತ. ಆಧುನಿಕ ತಂತ್ರಜ್ಞಾನ ಯುಗದಲ್ಲೂ ಸದಾ ಕಾಡುವ ಶಕ್ತಿ. ದೇಶಕಾಲಗಳನ್ನು ಮೀರಿದ ವ್ಯಕ್ತಿ, ಇವರು ವ್ಯಕ್ತಿಯಷ್ಟೇ ಅಲ್ಲ ಚಿಂತನೆಗಳ ಜಾಲವಾಗಿದ್ದಾರೆ. ಆದರೆ ನಮ್ಮ ದುರ್ದೈವವೆಂದರೆ ಅಂದಿನಿoದ ಇಂದಿನವರೆಗೂ ಅಂತಹ ಮತ್ತೊಬ್ಬ ಮಹಾನ್ ಚೇತನ ಭಾರತಾಂಬೆಯ […]
ಗಂಗೊಳ್ಳಿ:ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕ ಮತ್ತು ಮಾಲಕರಿಂದ ಸ್ವಚ್ಚತಾ ಕಾರ್ಯ
ಗಂಗೊಳ್ಳಿ(ಆ.01): ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಗಂಗೊಳ್ಳಿಯ ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕರು ಮತ್ತು ಮಾಲಕರು (ರಿ). ವತಿಯಿಂದ ಗಂಗೊಳ್ಳಿಯ ಪರಿಸರದ ಬಂದರು ಒಳಗಡೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಯೂನಿಯನ್ ಅಧ್ಯಕ್ಷರಾದ ಅನಂತ್ ಕೊಡೇರಿ, ಉಪಾಧ್ಯಕ್ಷರಾದ .ಜಿ.ಟಿ.ರಾಘವೇಂದ್ರ ಹಾಗೂ ಖಜಾಂಚಿ ಶರತ್ ಖಾರ್ವಿ ಹಾಗೂ ಯೂನಿಯನ್ ಸರ್ವ ಸದಸ್ಯರು ಸ್ವಚ್ಛತೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಉಡುಪಿ: ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಮನವಿ
ಉಡುಪಿ (ಸೆ,28): 2006 ರ ಏಪ್ರಿಲ್ 01 ರ ಪೂರ್ವದಲ್ಲಿ ಹಾಗೂ ನಂತರ ಸೇವೆಗೆ ಸೇರಿ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನೂತನ ಪಿಂಚಣಿ ಯೋಜನೆ ಅಥವಾ ನಿಶ್ಚಿತ ಪಿಂಚಣಿ ಯೋಜನೆ ಎನ್ನುವ ಯಾವುದೇ ಸೌಲಭ್ಯ ಇರುವುದಿಲ್ಲ. ಈ ವ್ಯವಸ್ಥೆಯಿಂದ ಈಗಾಗಲೇ 25 ರಿಂದ 30 ವರ್ಷಗಳವರೆಗೆ ಸೇವೆ ಸಲ್ಲಿಸಿದ ನೌಕರರು ವಯೋನಿವೃತ್ತಿ ಸಮಯದಲ್ಲಿ ಬರಿಗೈಯಲ್ಲಿ ಮನೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿವೃತ್ತಿ ಹೊಂದಿದ ಅನೇಕ ನೌಕರರು ಮಾನಸಿಕ ತೊಂದರೆಗೆ ಒಳಗಾಗಿ […]
ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ರಾಯಬಾರಿಗಳಾಗಬೇಕು: ಕೆ.ಸಿ. ರಾಜೇಶ್
ಕುಂದಾಪುರ (ಸೆ.23): ವಿದ್ಯಾರ್ಥಿಗಳು ಜೀವನ ಮೌಲ್ಯ, ಸಂಸ್ಕಾರ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಳ್ಳುವಂತಾಗಬೇಕು. ಇದರಿಂದ ಶಿಕ್ಷಣ ಸಂಸ್ಥೆಗಳು ಕಲಿಸಿದ ವಿದ್ಯೆಗೆ ಸಾರ್ಥಕತೆ ದೊರೆಯುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯೊoದರ ರಾಯಬಾರಿಗಳಾಗಬೇಕು ಎಂದು ಕಾಲೇಜು ಗವನಿಂಗ್ ಕೌನ್ಸಿಲ್ ಸದಸ್ಯ, ಪತ್ರಕರ್ತ ಶ್ರೀ ಕೆ.ಸಿ. ರಾಜೇಶ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಫ್ರೇಶ್ […]
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂದಿದೆ. […]
ಡಾ| ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ : ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಕುಂದಾಪುರ (ಸೆ.24): ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸಲು ಎನ್.ಎಸ್.ಎಸ್. ಸಹಕಾರಿ. ವಿದ್ಯಾರ್ಥಿ ದೆಸೆಯಲ್ಲಿ ಸಕ್ರಿಯವಾಗಿ ಇಂತಹ ಸೇವಾ ಘಟಕಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಬದಲಾವಣೆ ಆಗುವುದರ ಜೊತೆಗೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಕಿರಣ್ ಹೇಳಿದರು. ಅವರ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ […]
ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]










