ಕುಂದಾಪುರ(ಜು,24): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಹಾಗೂ ವಿ.ಕೆ.ಆರ್ ಶಾಲೆಗಳಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನೆ ಜುಲೈ 22 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ನೆರವೇರಿತು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ. ಜಿ ಭಟ್ ರವರು ಮುಖ್ಯ ಅತಿಥಿಗಳಾಗಿ ಶಿಕ್ಷಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ ವಿದ್ಯಾರ್ಥಿಗಳಿಗೆ ಪುಷ್ಪವನ್ನು ನೀಡುವ […]
Year: 2024
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ
ಕುಂದಾಪುರ;(ಜು,23): ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಜುಲೈ 22 ರಂದು ಜರುಗಿತು.ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕೋಟೇಶ್ವರ(ಜು,22): ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಉಡುಪಿ ,ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ ,ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಜುಲೈ 21 ರಂದು ನಡೆಯಿತು . ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ನಾಗರಾಜ […]
ಗಂಗೊಳ್ಳಿ: ಹೆಬ್ಬಾಗಿಲು ಮನೆ ಕಾವೇರಿ ದೇವಾಡಿಗ ನಿಧನ
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
ಹೆಮ್ಮಾಡಿ (ಜು, 19): ಮೊಗವೀರ ಯುವ ಸಂಘಟನೆ( ರಿ. ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ ),ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಕೋಟ, ಮೊಗವೀರ ಮಹಾಜನ ಸೇವಾ ಸಂಘ (ರಿ. ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ )ಹೆಮ್ಮಾಡಿ, ಮಹಿಷಾಸುರ ಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ ಇವರ ಸಹಕಾರದೊಂದಿಗೆ ವನ ಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಬಗ್ವಾಡಿ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜುಲೈ 18) : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆ : ಕೃಷಿ ಭೂಮಿಯಲ್ಲಿ ಒಂದು ದಿನ
ಕುಂದಾಪುರ (ಜು15): ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ನೆಟ್ಟಿ ಮಾಡಿದ ಮಕ್ಕಳ ಆಸಕ್ತಿ ಮತ್ತು ಉತ್ಸಾಹ ನಮಗೆ ಸಂತಸವನ್ನು ನೀಡಿದೆ ಎಂದು ಕುಂದಾಪುರದ ಕೃಷಿಕರಾದ ಕೋಟ್ಯಾನ್ ಮನೆಯವರು ಹೇಳಿದರು. ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ನೋಡುತ್ತ ತಿಳಿ ಮಾಡುತ್ತ ಕಲಿ ಎನ್ನುವ ಆಶಯದೊಂದಿಗೆ ಹಮ್ಮಿಕೊಂಡ ನಮ್ಮ ನಡೆ ಕೃಷಿ ಭೂಮಿ ಕಡೆ ಎನ್ನುವ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆ ಕುರಿತು ಅವರು […]
ಬಿ. ಬಿ. ಹೆಗ್ಡೆ ಕಾಲೇಜು: ಸಿ. ಎ. ಇಂಟರ್ಮೀಡಿಯೇಟ್ ಹಾಗೂ ಸಿ.ಎಂ.ಎ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಜು,16): ಮೇ 2024ರಲ್ಲಿ ನಡೆದ ಸಿ.ಎ. ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಇಲ್ಲಿನ ಪ್ರಾಕ್ತನ ವಿದ್ಯಾರ್ಥಿಗಳಾದ (2022-23) ಶಾಂಭವಿ ಬಂಗೇರ (120), ರಂಜನ್ ಕುಮಾರ್ ಶೆಟ್ಟಿ (118), ನಾದಶ್ರೀ (116), ಶಮಂತ್ (114) ಮತ್ತು ಸುದರ್ಶನ್ ಉಪಾಧ್ಯಾಯ (103) ಹಾಗೂ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಾದ ವಿನೋಲ್ ಬಜಿಲ್ ಡಿಸೋಜಾ (331) ಇವರು ಸಿ. ಎ. ಇಂಟರ್ಮೀಡಿಯೇಟ್ 2 ಗ್ರೂಪ್ಗಳನ್ನೂ ತೇರ್ಗಡೆಯಾದರೆ, ಭುವನ (174) ಗ್ರೂಪ್ 1 ರಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎಂ.ಎ. […]
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ […]
ರೋಟರಿ ಕ್ಲಬ್ ಕೋಟೇಶ್ವರ: ಪದಪ್ರದಾನ ಸಮಾರಂಭ-ಅಧ್ಯಕ್ಷರಾಗಿ ಸತೀಶ ಎಂ. ನಾಯ್ಕ ಅಧಿಕಾರ ಸ್ವೀಕಾರ
ಕೋಟೇಶ್ವರ, (ಜು.15) :ರೋಟರಿ ಕ್ಲಬ್ ಕೋಟೇಶ್ವರ ಇದರ2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 13 ರಂದು ತೆಕ್ಕಟ್ಟೆ ಯ ಗ್ರೇಸ್ ಕನ್ವೆನ್ಸನ್ ಹಾಲ್ ನಲ್ಲಿನಡೆಯಿತು. ನೂತನ ಅಧ್ಯಕ್ಷ ಸತೀಶ ಎಂ. ನಾಯ್ಕ ಮತ್ತು ಕಾರ್ಯದರ್ಶಿ ಸುಭಾಸ್ ಚಂದ್ರ ಶೆಟ್ಟಿ ಅವರಿಗೆ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಸಲಹೆಗಾರರದ ಎಂಪಿಎಚ್ಎಫ್ ಬಿ ಶೇಖರಶೆಟ್ಟಿ ಪದಪ್ರದಾನ ನೆರವೇರಿಸಿದರು. 2023-24ನೇ ಸಾಲಿನ ಅಧ್ಯಕ್ಷ ಜಗದೀಶ ಮೊಗವೀರ ಸಮಾರಂಭದ ಅಧ್ಯಕ್ಷತೆ […]










