ಕುಂದಾಪುರ (ಜು. 12): ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ಉದ್ದೇಶದಿಂದ ಹಲಸು ಮತ್ತು ಕೃಷಿ ಉತ್ಪನ್ನಗಳ ವಿಶೇಷ ಆಹಾರ ಹಾಗೂ ಕೃಷಿ ಯಂತ್ರೋಪಕರಣ ಮತ್ತು ಸಾವಯವ ಉತ್ಪನ್ನ ಗಳ ಮಾರಾಟ ಹಾಗೂ ಪ್ರದರ್ಶನವನ್ನು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ವತಿಯಿಂದ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಜುಲೈ 12 ರಿಂದ 14 ರ ತನಕ ನಗರದ ನೆಹರು ಮೈದಾನದಲ್ಲಿ ಯೋಜಿಸಲಾಗಿದೆ. ಇದರ ಉಪಯೋಗವನ್ನು ಕುಂದಾಪುರ ಪರಿಸರದ […]
Year: 2024
ಎಕ್ಸಲೆಂಟ್ ಪಿ ಯು ಕಾಲೇಜು ಕುಂದಾಪುರ: ವಿಶೇಷ ಡಿಪಿಪಿ ತರಗತಿ ಉದ್ಘಾಟನೆ
ಕುಂದಾಪುರ(ಜು,06): ಇಲ್ಲಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್,ಜೆಇಇ, ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ನೀಟ್, ಜೆಇಇ, ಸಿಇಟಿ ಕೋರ್ಸ್ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಇವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಕುರಿತು ಮಾತನಾಡಿದ […]
ಎಂ ಐ ಟಿ ಮೂಡ್ಲಕಟ್ಟೆ: ಹೊಸ ಕೋರ್ಸ್ ಎಂ ಸಿ ಎ ಆರಂಭ
ಕುಂದಾಪುರ(ಜು.06): ಇಲ್ಲಿನ ಪ್ರತಿಷ್ಠಿತ ಕಾಲೇಜು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ನ ಸ್ನಾತಕೋತ್ತರ ಪದವಿಯನ್ನು ಪ್ರಾರಂಭಿಸಲು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎ ಐ ಸಿ ಟಿ ಈ )ಹೊಸದಿಲ್ಲಿ ಇವರಿಂದ ಅನುಮೋದನೆ ದೊರೆತಿದೆ. ಈ ಕೋರ್ಸ್ ನ ಪದವಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ ಟಿ ಯು )ಅಡಿಯಿಂದ ನೀಡಲಾಗುವುದು. ಬಿ ಸಿ ಎ/ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಅಥವಾ ಸಮಾನಾಂತರ ವಿಷಯಗಳಲ್ಲಿ ಶೇಕಡ 50 ಮತ್ತು ಅಧಿಕ ಅಂಕಗಳೊಂದಿಗೆ ಪದವಿ ಮುಗಿಸಿದ ವಿದ್ಯಾರ್ಥಿಗಳು, ಈ ಶೈಕ್ಷಣಿಕ ವರ್ಷದಿಂದಲೇ ಪ್ರವೇಶಾ ತಿ ಪಡೆಯಲು ಅವಕಾಶವಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಚೇರಿಯನ್ನು ಸಂಪರ್ಕಿಸಿಲು ತಿಳಿಸಲಾಗಿದೆ.
ಜು.14 ರಂದು ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಗಂಗೊಳ್ಳಿ(ಜು,06) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇದರ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ದಿ.ಜಿ.ಕೆ ರಾಮದಾಸ ಕೊಡೇರಿ ಮನೆ ಇವರ ಸ್ಮರಣಾರ್ಥ ಶ್ರೀಮತಿ ರಾಧಾ ರಾಮದಾಸ ಪೂಜಾರಿ ಮತ್ತು ಮಕ್ಕಳ ಪ್ರಾಯೋಜಕತ್ವದಲ್ಲಿ ನೀಡುತ್ತಿರುವ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 14 ಭಾನುವಾರದಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಜರಗಲಿರುವುದು. ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ.ಗೋಪಾಲ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಕೊಲ್ಲೂರು (ಜು,05): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ ಕೆ ಯವರು ವಹಿಸಿದ್ದರು.ರಾಜ್ಯಮಟ್ಟದ ಯೋಗದ ಸಂಪನ್ಮೂಲ ವ್ಯಕ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಹೊಳೆಯ ಶಿಕ್ಷಕ ಮಂಜುನಾಥ ದೇವಾಡಿಗಯವರು ಉದ್ಘಾಟಿಸಿ ಯೋಗದ ಉಪಯೋಗಗಳು ಹಾಗೂ ಯೋಗವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ […]
ಸರ್ಕಾರಿ ಬಸ್ಸು .. ಈಡೇರುವುದೇ ಭರವಸೆಗಳು ..?
ಕುಂದಾಪುರ ಹಾಗೂ ಬೈಂದೂರು ಕ್ಷೇತ್ರದ ಸಾರಿಗೆ ಸಮಸ್ಯೆಗಳ ಕುರಿತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈಗಾಗಲೇ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಅಧಿಕಾರಿಗಳು, ಮೀನಾಮಿಷ ಎನ್ನುತಿದ್ದು,ಸತತ ಮೂರು ವರ್ಷಗಳಿಂದ ಎಲ್ಲಾ ಗ್ರಾಮಗಳಿಗೂ ಸಾರಿಗೆ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳಲ್ಲಿ ಕೇಳಿದರೆ ಆರ್. ಟಿ.ಓ ಅಧಿಕಾರಿಗಳು ಪರವಾನಗಿ ನೀಡುತ್ತಿಲ್ಲ ಎಂದು ಹೇಳುತ್ತಾರೆ. ಆರ್. ಟಿ.ಓ ಅಧಿಕಾರಿಗಳಲ್ಲಿ ಕೇಳಿದರೆ ಸಾರಿಗೆ […]
ಡಾ lಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ : ಆನ್ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ (ಜು, 02): ಡಾl ಬಿ ಬಿ ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತಿಮ ಬಿ ಬಿ ಎ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸಿ. ಎ ಆನಂದ್ ತೀರ್ಥ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಮಾಡುವಾಗ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ […]
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು
ಕುಂದಾಪುರ(ಜು 02): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಶಿರೂರು ಮಂದಾರ್ತಿ ನಿವಾಸಿಯಾದ ಶ್ರೀ ನಿತೇಶ್ ಶೆಟ್ಟಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಹಾಗೂ ಶಿವಮೊಗ್ಗದ ದಿನೇಶ್ ಶೆಟ್ಟಿ ಅವರ ಚಿಕಿತ್ಸೆಗೆ 10000 ರೂಪಾಯಿಯನ್ನು ಸಂಘದ ಆಡಳಿತ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ […]
ಕಲರ್ಸ್ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 82024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ಕ್ಕೆ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ
ಕುಂದಾಪುರ(ಜು 01): ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ಅಮಾಸೆಬೈಲು ಪರಿಸರದಲ್ಲಿ ತೇಜಸ್ವಿನಿ ಕ್ಲಿನಿಕ್ ಮೂಲಕ ರಸ್ತೆ, ವಾಹನ, ಪೋನ್ ಸೌಲಭ್ಯಗಳಿಲ್ಲದ ಕಾಲದಲ್ಲಿ ರಾತ್ರಿ-ಹಗಲು ಎನ್ನದೆ ಸಾವಿರಾರು ಬಾಣಂತಿಯರ, ಮಕ್ಕಳ, ರೋಗಿಗಳ ಪ್ರಾಣ ಉಳಿಸಿ ಇಂದಿಗೂ ಅದೇ ಪರಿಸರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರಾದ ಡಾ. ಮಂದಾರ ಶೆಟ್ಟಿಯವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಮಂದಾರ ಶೆಟ್ಟಿಯವರು ಕಷ್ಟವಾದರೂ […]










