ಕುಂದಾಪುರ, (ನ.15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಕುಸ್ತಿ ಪಾರಂಪರಿಕ ಹಿನ್ನಲೆ ಇರುವ ಕ್ರೀಡೆ. ರಾಜಪ್ರಭುತ್ವ ಕಾಲಘಟ್ಟದಲ್ಲಿ ಅತ್ಯಂತ ಚಾಲ್ತಿಯಲ್ಲಿತ್ತು. ದೇಸಿ ಸೊಗಡು ಹೊಂದಿರುವ ಈ ಕ್ರೀಡೆ ಇಂದು ಜಾಗತಿಕ ಮನ್ನಣೆ ಪಡೆದು ವಿವಿಧ ಆಯಾಮಗಳಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಕ್ರೀಡೆಯಲ್ಲಿ […]
Year: 2024
ಬೈಂದೂರು ಉತ್ಸವದಲ್ಲಿ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ
ಬೈಂದೂರು( ನ.19): ಬೈಂದೂರು ಉತ್ಸವ- 2024 ರಲ್ಲಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಇವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ತವಿಲ್ ನಲ್ಲಿ ನಿತ್ಯಾನಂದ ದೇವಾಡಿಗ, ತಾಳದಲ್ಲಿ ಮಾಧವ ದೇವಾಡಿಗ, ಗೆಜ್ಜೆಯಲ್ಲಿ ಹರ್ಷವರ್ಧನ ಖಾರ್ವಿ ಸಹಕರಿಸಿದರು.
ಹೆಮ್ಮಾಡಿ : ಜನತಾ ಪಿ ಯು ಕಾಲೇಜಿನಲ್ಲಿ ವಾರ್ಷಿಕ ಸಂಭ್ರಮ – ಜನತಾ ಪರ್ವ 2K24
ಹೆಮ್ಮಾಡಿ ( ನ .19): ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ನವೆಂಬರ್ 14 ರಂದು ಅದ್ದೂರಿಯಾಗಿ ನೆರವೇರಿತು.ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿ ‘ಜನತಾ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆ ಮಹತ್ತರವಾದದ್ದು,ವಿದ್ಯಾರ್ಥಿಗಳ ಪ್ರತಿಭೆಯ ವಿಕಾಸಕ್ಕೆ ಜನತಾ ಸಂಸ್ಥೆಯ ಕಾರ್ಯಚಟುವಟಿಕೆಗಳು ಪ್ರಶಂಸನೀಯ’ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ […]
ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
ಉಡುಪಿ ( ನ .17) : ಕರ್ನಾಟಕ ಯುವ ಬರಹಗಾರರ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಸಂಸ್ಮರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಪ್ರಥಮ ಕವಿಗೋಷ್ಠಿಯನ್ನು ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ಆಸಕ್ತ ಕವಿ-ಕವಯಿತ್ರಿಯರಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಜಿ.ಎಸ್. ಕಿರಣ್ ಕುಮಾರ್ ತಿಳಿಸಿದ್ದಾರೆ. ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಯಾವುದೇ ವಯೋಮಾನದ ಆಸಕ್ತ ಕವಿ-ಕವಯಿತ್ರಿಯರು […]
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಪಿ ಯು ಕಾಲೇಜಿನಲ್ಲಿ ನ.22, 23 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ನಟ್ ಬಾಲ್ ಪಂದ್ಯಾಟ
ಕೊಲ್ಲೂರು( ನ .16) : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 22 ಹಾಗೂ 23 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕ – ಬಾಲಕಿಯರ ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024-25 ನಡೆಯಲಿದೆ. ನವೆಂಬರ್ 22 ರ ಮಧ್ಯಾಹ್ನ 03ಗಂಟಗೆ ಕೊಲ್ಲೂರಿನ ಲಲಿತಾಂಬಿಕಾ ಅತಿಥಿ ಗೃಹದಿಂದ ಪುರ […]
ಬಿ. ಬಿ. ಹೆಗ್ಡೆ ಕಾಲೇಜು : ಕಾನೂನಿನ ಅರಿವಿನ ವಿನೂತನ ಪ್ರಯೋಗ ‘ವಿಧಿಕ್ತ-2024’ ಸಂಪನ್ನ
ಕುಂದಾಪುರ (ನ.12): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2024’ ಕಾನೂನು ಅರಿವಿನ ಅಂತರ್ ತರಗತಿ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊoಡಿತು. ವಿದ್ಯಾರ್ಥಿಗಳಿಗೆ ಕಾನೂನಿನ ಪ್ರಾಯೋಗಿಕ ಅಂಶಗಳನ್ನು ಅರ್ಥ ಮಾಡಿಸುವ ಹಾಗೂ ಕಾನೂನಿನ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಹಕರಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಬಾರ್ ಅಸೋಸಿಯೇಷನ್ ಇದರ ಮಾಜಿ ಅಧ್ಯಕ್ಷರು ಹಾಗೂ ಹೆಸರಾಂತ […]
ಬಿ. ಬಿ. ಹೆಗ್ಡೆ ಕಾಲೇಜು : ‘ಉಗಮ-2024’ -ಸಮಾರೋಪ
ಕುಂದಾಪುರ (ನ.15): ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿoತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಇವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ & ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ […]
ಬ್ಯಾರೀಸ್ ಪದವಿ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಭೆ
ಕೋಡಿ( ನ,16): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಇಲ್ಲಿ 2024-25 ನೇ ಸಾಲಿನ ರಕ್ಷಕ-ಶಿಕ್ಷಕ ಸಭೆ ನವೆಂಬರ್ ,16 ರಂದು ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರೊ. ಪ್ರಕಾಶ್ಚಂದ್ರ ಶೆಟ್ಟಿ ಇವರು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿ ಪೋಷಕರನ್ನುದ್ದೇಶಿಸಿ “ಮಾನವ ಜನ್ಮ ಶ್ರೇಷ್ಠತಮವಾದುದು ವಿಜ್ಞಾನವನ್ನು ವರವಾಗಿ ಬಳಸಿ ದೇಶದ ಆಸ್ತಿಯಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ […]
ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ
ಗಂಗೊಳ್ಳಿ(ನ,16) : ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ನಡೆದ ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ […]
ಎಚ್ ಎಮ್ ಎಮ್ ಶಾಲೆಯಲ್ಲಿ “ನನ್ನ ಸುರಕ್ಷತೆ ನನ್ನ ಧ್ವನಿ” ಕಾರ್ಯಾಗಾರ
ಕುಂದಾಪುರ (ನ. 11) : ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 7ರಂದು ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆಯ ಬಗ್ಗೆ ಎರವೆಯಲ್ಲಿಯೇ ಅರಿವು ಇರಬೇಕೆಂಬ ಕಾಳಜಿಯಿಂದ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಆಗಿರುವ ಶ್ರೀಮತಿ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು […]










