ನಾಯಕವಾಡಿ(ಜ.15) : ಸಾಹಿತ್ಯ ಅಥವಾ ಇನ್ಯಾವುದೇ ವಿಚಾರಗಳಿರಲಿ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡು ಪ್ರಸ್ತುತ ಪಡಿಸಿದಾಗಲೇ ಅದು ಸೌಂಧರ್ಯವನ್ನು ಕಂಡುಕೊಳ್ಳುತ್ತದೆ. ನಿರಂತರ ಅಭ್ಯಾಸ ನಮ್ಮನ್ನು ಪರಿಪೂರ್ಣವಾಗಿಸುತ್ತದೆ ಎಂದು ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರು ಅಭಿಪ್ರಾಯಪಟ್ಟರು. ಅವರು ಗುಜ್ಜಾಡಿ ನಾಯಕವಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]
Day: January 15, 2025
ರಾಷ್ಟ್ರಮಟ್ಟದ ಅಬಾಕಸ್ ನಲ್ಲಿ ವೃಷಭ ಶೆಣೈ ಪ್ರಥಮ ಸ್ಥಾನ
ಕುಂದಾಪುರ (ಜ .15): ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ವೃಷಭ ಶೆಣೈ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಉದ್ಯಮಿ ವಿಠ್ಠಲ್ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ
ಕುಂದಾಪುರ : ಟೀಚರ್ ಟ್ರೈನಿಂಗ್ ಗೆ ಅರ್ಜಿ ಆಹ್ವಾನ
ಕುಂದಾಪುರ( ಜ.15): ಇಲ್ಲಿನ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಟೀಚರ್ ಎಜುಕೇಶನ್ ವಿಭಾಗದಲ್ಲಿ ಎರಡನೇ ಬ್ಯಾಚ್ ಗೆ ಒಂದು ವರ್ಷದ ಅವಧಿಯ ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ಹಾಗೂ ಕೌನ್ಸ್ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಎರಡನೇ ವರ್ಷಕ್ಕೆ ಪ್ರವೇಶಾತಿ ಆರಂಭವಾಗಿದ್ದು, ಟೀಚರ್ ಟ್ರೈನಿಂಗ್ ತರಬೇತಿಗೆ ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ […]
ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ
ಕುಂದಾಪುರ(ಜ.11): ಸೇವಾ ಚೇತನ ಟ್ರಸ್ಟ್ (ರಿ.), ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ| ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀ ಆನಗಳ್ಳಿ ಕರುಣಾಕರ ಹೆಗ್ಡೆ […]
ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆ: ಛಾಯಾ ವಿ . ಅರ್. ದ್ವಿತೀಯ ಸ್ಥಾನ
ಕುಂದಾಪುರ( ಜ .15): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ವೇಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆಯ 4ನೇ ವಿಭಾಗದಲ್ಲಿ ಕುಂದಾಪುರದ ಛಾಯಾ ವಿ . ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕುಂದಾಪುರದ ಎಚ್ಎ.ಮ್ .ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಇವರು ಕುಂದಾಪುರದ ಪ್ರಸಿದ್ದ ಛಾಯಾ ಚಿತ್ರ ಗ್ರಾಹಕ ವಿಶ್ವನಾಥ ಮುನ್ನಾ ಹಾಗೂ ರಜನಿ ದಂಪತಿಯ ಪುತ್ರಿ.
ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆ: ಗಂಗೊಳ್ಳಿಯ ನಮ್ರತಾ .ಎಸ್ ಪೂಜಾರಿ ತ್ರತಿಯ ಸ್ಥಾನ
ಗಂಗೊಳ್ಳಿ( ಜ.15): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ವೇಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ನಮ್ರತಾ ಎಸ್ ಪೂಜಾರಿ ತ್ರತಿಯ ಸ್ಥಾನ ಪಡೆದಿದ್ದಾರೆ. ಇವರು ಗಂಗೊಳ್ಳಿಯ ಶ್ರೀಮತಿ ಜ್ಯೋತಿ ಮತ್ತು ಸುರೇಶ್ ಪೂಜಾರಿ ದಂಪತಿಯ ಪುತ್ರಿ. ಗುಜ್ಜಾಡಿ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ 3 ನೇ ತರಗತಿಯ ವಿದ್ಯಾರ್ಥಿನಿ . ಇವರಿಗೆ ಶಿಕ್ಷಕರಾದ […]
ಸಿ.ಎಮ್.ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಜ.10): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ CMA ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ ಸಾಧನೆಗೈದಿದ್ದಾರೆ. ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಇವರು ಸಿ.ಎಂ.ಎ. ಇಂಟರ್ಮೀಡಿಯೇಟ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ […]
ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ : ಅರಿವಿನ ಬೆಳಕು- ಉಪನ್ಯಾಸ ಮಾಲೆ ಕಾರ್ಯಕ್ರಮ
ಕುಂದಾಪುರ(ಜ.15): ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಜನವರಿ 10 ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ‘ಅರಿವಿನ ಬೆಳಕು -ಉಪನ್ಯಾಸ ಮಾಲೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮ ಉದ್ಘಾಟಿಸಿದರು.ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ರವರು ಕಾರ್ಯಕ್ರಮದ ಅಧ್ಯಕ್ಷತೆ […]
ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆ: ಶ್ರದ್ಧಾ. ಎಸ್ ದ್ವಿತೀಯ ಸ್ಥಾನ
ಕುಂದಾಪುರ ( ಜ,14): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವಿಟ್ ಲಿಮಿಟೆಡ್ ಕಂಪನಿ ಬೆಂಗಳೂರಿನಲ್ಲಿ ಜನವರಿ 12ರಂದು ಆಯೋಜಿಸಿದ್ದ 20 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯ ನಾಲ್ಕನೇ ವಿಭಾಗದಲ್ಲಿ ಶ್ರದ್ಧಾ.ಎಸ್ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಇಕೆ ಶ್ರೀಮತಿ ಚಂದ್ರಿಕಾ ಹಾಗೂ ಶ್ರೀ ಸತೀಶ್. ಬಿ. ದಂಪತಿಯ ಪುತ್ರಿ ಹಾಗೂ ತೆಕ್ಕಟ್ಟೆಯ ವಿಶ್ವ ವಿನಾಯಕ ನ್ಯಾಷನಲ್ ಸ್ಕೂಲ್ ನ 6ನೇ ತರಗತಿಯ ವಿದ್ಯಾರ್ಥಿ.
ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ
ಕುಂದಾಪುರ (ಜ,11): ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನವನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರೂ ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ […]










