ಕುಂದಾಪುರ(ಜ.21): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ […]
Day: January 21, 2025
ಗಂಗೊಳ್ಳಿ : ಅಜಿತ್ ಕುಮಾರ ಅವರ ಪುಣ್ಯತಿಥಿ -‘ಸೇವಾ ದಿನಾಚರಣೆ’
ಗಂಗೊಳ್ಳಿ(ಜ.21): ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು. ಸೇವಾ ಸಂಗಮ ನಿವೇದಿತಾ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಇಂಟರ್ನ್ಶಿಪ್ ಡ್ರೈವ್
ಕುಂದಾಪುರ(ಜ,21): ಬಿ.ಬಿ.ಹೆಗ್ಡೆ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಯಕ್ಷಿ ಟೆಕ್ ಸೊಲ್ಯೂಶನಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಜೊತೆಗಿನ ಸಹಯೋಗದಲ್ಲಿ ಜನವರಿ 17 ರಂದು ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಇಂಟರ್ನ್ಶಿಪ್ ಡ್ರೈವ್ನ್ನು ಆಯೋಜಿಸಿತು. ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥ ಶ್ರೀ ಮಹೇಶ್ ಕುಮಾರ್ ಸ್ವಾಗತಿಸಿ, ಇಂಟರ್ನ್ಶಿಪ್ ಮೂಲಕ ತರಬೇತಿ ಪಡೆಯುವ ಮಹತ್ವವನ್ನು ವಿವರಿಸುವ ಮೂಲಕ ಪ್ರಾರಂಭಿಸಿದರು. ಯಕ್ಷಿ ಟೆಕ್ ಸೊಲ್ಯೂಶನಸ್ ಸಂಸ್ಥೆಯ ಪ್ರತಿನಿಧಿ ಶ್ರೀ […]
ಈಜು ಸ್ಪರ್ಧೆ : ನಾಗರಾಜ ಖಾರ್ವಿಯವರಿಗೆ ಚಿನ್ನದ ಪದಕ
ಕುಂದಾಪುರ (ಜ.19):ವಿ ಒನ್ ಅಕ್ವಾಸೆಂಟರ್ ಕಾರ್ಕಳವತಿಯಿಂದ ಯುವ, ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜುಕೊಳದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಎರಡು ಚಿನ್ನದ ಪದಕ ವಿಜೇತರಾಗಿದ್ದಾರೆ. ಮಂಗಳೂರು ಈಜುಗಾರರ ಸಮುದ್ರ ತಂಡದ ಸಕ್ರಿಯ ಸದಸ್ಯರಾಗಿರುವ ಅವರು 50 ಮೀ. ಬ್ಯಾಕ್’ ಸ್ಟೋಕ್ನಲ್ಲಿ ಪ್ರಥಮ ಮತ್ತು 50 ಮೀ. ಬ್ರೆಸ್ಟ್ ಸ್ಪೋಕ್ನಲ್ಲಿ ಪ್ರಥಮ […]
ಕೆ. ಡಿ. ಎಫ್ ಕಪ್ -2025: ಅನ್ವೇಶ್ ಎ. ಮೊಗವೀರ ದ್ವಿತೀಯ
ಕುಂದಾಪುರ(ಜ.21): ಇಲ್ಲಿನ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಅಂಡ್ ರೆಸಾರ್ಟ್ ನಲ್ಲಿ ಇತ್ತೀಚೆಗೆ ನೆಡೆದ ಡ್ರಾಗನ್ ಫೀಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ಆಯೋಜಿತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಾದ ಕೆ. ಡಿ. ಫ್ 2025 ಕಪ್ ನಲ್ಲಿ ಅನ್ವೇಶ್ , ಎ ಮೊಗವೀರ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈತ ಕಿರಿ ಮಂಜೇಶ್ವರ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇಲ್ಲಿ 6ನೇ ತರಗತಿಯ ವಿದ್ಯಾರ್ಥಿ ಹಾಗೂ ನಾವುಂದದ ಗಣೇಶ್ ನಗರ […]










