ಗಂಗೊಳ್ಳಿ(ಮಾ .25): ಬೈಲುಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆಯ ಕಾರ್ಯಕ್ರಮವು ಮಾರ್ಚ್ 30 ರಂದು ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ಗಂಟೆ ಒಂಬತ್ತರಿಂದ ಸಾಮೂಹಿಕ ಪ್ರಾರ್ಥನೆ,ಶ್ರೀ ಗುರು ಗಣಪತಿ ಪೂಜೆ, ಪುಣ್ಯಾಹವಾಚನ, ಕಲಾಭಿವೃದ್ಧಿ ಹೋಮ, ತತ್ವ ಹೋಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಅನ್ನಸಂತರ್ಪಣೆ ಕೂಡ ನಡೆಯಲಿರುವುದು. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.
Day: March 24, 2025
ಬಿ.ಬಿ. ಹೆಗ್ಡೆ ಕಾಲೇಜು: ಗಣಕ ವಿಜ್ಞಾನ ವಿಭಾಗದ ವತಿಯಿಂದ ಕೆ.ಪಿ.ಎಸ್. ವಂಡ್ಸೆ, ನೆಂಪುವಿನಲ್ಲಿ ವಿಸ್ತರಣಾ ಚಟುವಟಿಕೆ
Views: 92
ಕುಂದಾಪುರ (ಮಾ.19): ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಾರ್ಚ್ 19 ರಂದು ಕೆ.ಪಿ.ಎಸ್. ವಿದ್ಯಾರ್ಥಿಗಳಿಗಾಗಿ ವಿಸ್ತರಣಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ಗಣಕಯಂತ್ರದಲ್ಲಿನ ಇತ್ತೀಚಿಗಿನ ಹೊಸ ಆವಿಷ್ಕಾರಗಳು, ಅವುಗಳ ಬೆಳವಣಿಗೆ, ಅದರ ಉಪಯೋಗ ಮುಂತಾದವುಗಳ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ಕಾಲೇಜಿನ ಬಿ.ಸಿ.ಎ. ವಿಭಾಗದ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಅಲ್ಲಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. […]










