ಕಾರ್ಕಳ/ಉಡುಪಿ(ಏ,10): ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ […]
Month: April 2025
ಉಡುಪಿ ಜಿಲ್ಲಾ ಸಾಧಕರಿಗೆ ಪ್ರಾಂಶುಪಾಲರ ಸಂಘದ ಅಭಿನಂದನೆ
ಉಡುಪಿ(ಏ,10) : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊAದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ತ ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ […]
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]
ಪಿ ಯು ಫಲಿತಾಂಶ : ಜ್ಞಾನಸುಧಾದ ವಿದ್ಯಾರ್ಥಿಗಳಿಂದ ಉತ್ಕೃಷ್ಟ ಸಾಧನೆ
ಗಣಿತನಗರ( ಏ,9): : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29 ವಿದ್ಯಾರ್ಥಿಗಳು 10ರೊಳಗಿನ ರ್ಯಾಂಕ್ ಪಡೆದಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊoದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು, ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ […]
ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ-ಸತತ 3 ನೇ ವರ್ಷವೂ ಜನತಾ ಪಿಯು ಕಾಲೇಜಿಗೆ ದಾಖಲೆಯ 100 ಫಲಿತಾಂಶ,ರಾಜ್ಯ ಮಟ್ಟದ 7 ರ್ಯಾಂಕ್
ಕುoದಾಪುರ(ಏ,09) : 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಸತತ ಮೂರನೇ ವರ್ಷವೂ ಶೇಕಡಾ ನೂರು ಫಲಿತಾಂಶದೊoದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ . ವಿಜ್ಞಾನ ವಿಭಾಗದಲ್ಲಿ 204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 113 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ .ವಾಣಿಜ್ಯ ವಿಭಾಗದಲ್ಲಿ 88 ವಿದ್ಯಾರ್ಥಿಗಳು […]
ಏಪ್ರಿಲ್ 12 ರಂದು ಬಗ್ವಾಡಿ ಉತ್ಸವ – ರಾಜ್ಯ ಮಟ್ಟದ ನ್ರತ್ಯ ಸ್ಪರ್ಧೆ
ಬಗ್ವಾಡಿ (ಏ. 09): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಬ್ರಹ್ಮರಥೋತ್ಸವ ಇದೇ ಏಪ್ರಿಲ್ 12ರ ಶನಿವಾರದಂದು ನಡೆಯಲಿದ್ದು , ರಥೋತ್ಸವದ ಪ್ರಯುಕ್ತ ಸಂಜೆ 7 ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಖ್ಯಾತ ನೃತ್ಯ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
ಕುಂದಾಪುರ (ಏ,5): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆ:ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ – 3
ಕುಂದಾಪುರ(ಆ ,08): ಹಳ್ಳಿಯ ಜೀವನ ಜನರನ್ನು ಒಳ್ಳೆಯ ಆರೋಗ್ಯವಂತರನ್ನಾಗಿ ಮಾಡುತ್ತದೆ. ಮನುಷ್ಯ ಆರೋಗ್ಯವಂತನಾಗಿ ಬದುಕಬೇಕಾದರೆ ಹಳ್ಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಓಡಾಡಬೇಕು. ಇಂದಿನ ಮಕ್ಕಳಿಗೆ ಹಳ್ಳಿ ಜೀವನದ ಪರಿಚಯವಿಲ್ಲ. ಆದರೆ ಈ ರೀತಿಯ ಕ್ಯಾಂಪ್ಗಳನ್ನು ಶಾಲೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಿಗೆ ಹಳ್ಳಿ ಜನರ ಬದುಕಿನ ಪರಿಕಲ್ಪನೆಯನ್ನು ತಿಳಿಸಲು ಸಾಧ್ಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ವ್ಯಾಪಾರೀಕರಣವಾದರೆ ಯಾವುದೇ ದೇಶ ಪ್ರಗತಿ ಕಾಣಲು ಸಾಧ್ಯವಿಲ್ಲವೆಂದು ಕುಂದಾಪುರದ ಪ್ರಸಿದ್ಧ ನ್ಯಾಯವಾದಿ, ಉತ್ತಮ ವಾಗ್ಮಿಯೂ ಆಗಿರುವ ತಲ್ಲೂರು […]
ಬಗ್ವಾಡಿ: ಬ್ರಹ್ಮ ರಥೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತೆ ಕಾರ್ಯಕ್ರಮ
ಹೆಮ್ಮಾಡಿ (ಏ ,02): ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರ ಸ್ವಚ್ಛತೆ ಕಾರ್ಯಕ್ರಮವನ್ನು ಮಾರ್ಚ್ 30 ರಂದು ಹಮ್ಮಿಕೊಳ್ಳಲಾಯಿತು. ಮೊಗವೀರ ಮಹಾಜನಾ ಸೇವಾ ಸಂಘ(ರಿ.)ಮುಂಬೈ, ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ, ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ(ರಿ.)ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಸ್ತ್ರೀ ಶಕ್ತಿ ಬಗ್ವಾಡಿ ಹೋಬಳಿ, ಬಗ್ವಾಡಿ ಫ್ರೆಂಡ್ಸ್ ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ […]
ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ:ಶಿಲಾ ಧ್ವಜಸ್ತoಭಕ್ಕೆ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ
ಹೆಮ್ಮಾಡಿ (ಏ. 03): ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಮುಂಭಾಗದಲ್ಲಿರುವ ಶಿಲಾ ಧ್ವಜಸ್ತoಭಕ್ಕೆ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ ನೇತ್ರತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಅಂದಾಜು 5,50,000 ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆಯನ್ನು ಏಪ್ರಿಲ್ 1ರಿಂದ 4 – 2025 ರ ವರೆಗೆ ನಡೆದ ವರ್ಧಂತಿ ಉತ್ಸವದ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆಯೊಂದಿಗೆ […]










