ಕಾರ್ಕಳ (ಜೂ,22): ಯೋಗವು ನಮ್ಮ ಆತ್ಮಗಳನ್ನು ದೈವಿಕತೆಯೊಂದಿಗೆ ಒಟ್ಟುಗೂಡಿಸುತ್ತದೆ. ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗವು ಒಂದು ದಿನದ ಆಚರಣೆ ಆಗಿರದೆ ಜೀವನದ ಭಾಗವಾಗಿ ಸ್ವೀಕರಸೋಣ ಎಂದು ಸಹಜ ಯೋಗ ತರಬೇತುದಾರರಾದ ಶ್ರೀಮತಿ ಸವಿತಾ ಉಧ್ಭವ್ ಅವರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ […]
Month: June 2025
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ‘ಮನಃಶಾಂತಿಗೆ ಯೋಗ’ ಕಾರ್ಯಕ್ರಮ
ಕಾರ್ಕಳ (ಜೂ,22): ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 21 ಜೂನ್ 2025 ರಂದು ‘ಮನಃಶಾಂತಿಗೆ ಯೋಗ’ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ […]
ಗಂಗೊಳ್ಳಿ : ಸಾಧಕ ವಿದ್ಯಾರ್ಥಿನಿ ಮನಾಲಿಗೆ ಸನ್ಮಾನ
ಗಂಗೊಳ್ಳಿ(ಜೂ ,20) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರಾಂಕ್ ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮನಾಲಿ ಎಂ ಇವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ : ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮೂಡ್ಲಕಟ್ಟೆ ( ಜೂ,21): ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 20 ಜೂನ್ 2025 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಎಸ್ ಬಿಜೂರು ಇವರು ಉಪಸ್ಥಿತರಿದ್ದು ಯೋಗದಿಂದಾಗುವ ಉಪಯೋಗಗಳ ಬಗ್ಗೆ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ತಿಳಿಸಿದರು. ಯೋಗವು ಮನುಷ್ಯನ ಆಂತರಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಾಯ ಮಾಡುತ್ತದೆಂದು ತಿಳಿಸಿದರು. ಯೋಗದ […]
ಅಭಯಹಸ್ತ ಉಡುಪಿ ಸಂಸ್ಥೆಗೆ ಗೌರವದ ಸನ್ಮಾನ
ಮಣಿಪಾಲ್ (ಜು ,18): ಕಸ್ತೂರಬಾ ಆಸ್ಪತ್ರೆ ಮಣಿಪಾಲ ವತಿಯಿಂದ ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಸಹಕಾರದಲ್ಲಿ ಡಾ. ಟಿ.ಎಂ.ಪೈ ಹಾಲ್ ಕೆಎಂಸಿ ಮಣಿಪಾಲ್ ಇಲ್ಲಿ ಜೂನ್ 14 ರಂದು ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಸಭಾ ಕಾರ್ಯಕ್ರಮವನ್ನು ನಾಡೋಜ ಡಾ. ಜಿ.ಶಂಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ರಿ.ಉಡುಪಿ ಇದುವರೆಗೆ 1,30,000 ಯೂನಿಟ್ ರಕ್ತವನ್ನು ಸಂಗ್ರಹಿಸಿ ಉಡುಪಿ […]
ಶ್ರೀ ಮಹಾಲಿಂಗೇಶ್ವರ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನ ಕಾಳಾವರ: ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಬಾಲಚಂದ್ರ ಶೆಟ್ಟಿ ಆಯ್ಕೆ
ಕೋಟೇಶ್ವರ ( ಜೂ,20): ಶ್ರೀ ಮಹಾಲಿಂಗೇಶ್ವರ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನ ಕಾಳಾವರ ಇದರ ಜೀರ್ಣೋದ್ಧಾರ ಸಮಿತಿಯನ್ನು ಧಾರ್ಮಿಕ ದತ್ತಿ ಇಲಾಖೆ ಉಡುಪಿ 16 ಜನರನ್ನು ಆಯ್ಕೆ ಮಾಡಿ ಕಳುಹಿಸಿದೆ. ನೂತನ ಅಧ್ಯಕ್ಷರಾಗಿ ಉದ್ಯಮಿ ಬಾಲಚಂದ್ರ ಶೆಟ್ಟಿ ಕಾಳಾವರ ನಾಯ್ಕರಮನೆ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಶಾನಾಡಿ ಚಂದ್ರಶೇಖರ ಹೆಗ್ಡೆ ಕೋಶಾಧಿಕಾರಿಯಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎ ಅಜಿತ್ ಕುಮಾರ ಶೆಟ್ಟಿ ಉಪಾಧ್ಯಕ್ಷರುಗಳಾಗಿ ಎಂ ವಿಶ್ವನಾಥ ಶೆಟ್ಟಿ, ಕೆ ಸುಧಾಕರ ಶೆಟ್ಟಿ, ಕೆ […]
ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವುದು ಶ್ಲಾಘನೀಯ- ತುಮಕೂರಿನ ‘ಶ್ರೀ ಕೃಷ್ಣಾ ಸಭಾ’ ದಲ್ಲಿ ಮಕ್ಕಳ ಮೇಳದ ಸುವರ್ಣ ಪರ್ವ ಸರಣಿ
ಕೋಟ(ಜೂ,15 ): “ಯಕ್ಷಗಾನ ನಮ್ಮ ಕರ್ನಾಟಕದ ಶ್ರೇಷ್ಠ ಕಲೆ. ನಮ್ಮೆಲ್ಲರ ಭೌದ್ಧಿಕ ವಿಕಾಸಕ್ಕೆ ಕಾರಣವಾದ ಕಲೆ. ಬಾಲ್ಯದಲ್ಲಿ ಹೆಚ್ಚು ಹೆಚ್ಚು ಯಕ್ಷಗಾನವನ್ನು ಕಲಿಸಿ, ಪ್ರದರ್ಶಿಸಿದರೆ ನಮ್ಮ ಮಕ್ಕಳಲ್ಲಿ ಪುರಾಣ ಜ್ಞಾನ ಹೆಚ್ಚುತ್ತದೆ. ಬದುಕಿನಲ್ಲಿ ಸಂಸ್ಕಾರ ಮೂಡುತ್ತದೆ. ಸಾಲಿಗ್ರಾಮ ಮಕ್ಕಳ ಮೇಳವು ಐವತ್ತು ವರ್ಷಗಳಿಂದ ಯಕ್ಷ ಕಲಿಕೆಯ ಮೂಲಕ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಅಖಿಲ ಭಾರತೀಯ ಮಾಧ್ವ ಮಂಡಳದ ಅಧ್ಯಕ್ಷ ಜಿ. ಕೆ. ಶ್ರೀನಿವಾಸ ಹೇಳಿದರು. ಯಕ್ಷಗಾನ […]
ನೀಟ್-2025ರ ಫಲಿತಾಂಶ :ಜ್ಞಾನಸುಧಾದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ
ಕಾರ್ಕಳ (ಜೂ ,15): ರಾಷ್ಟ್ರ ಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್-2025ರ ಫಲಿತಾಂಶದಲ್ಲಿ ಪರೀಕ್ಷೆ ಬರೆದ 22ಲಕ್ಷದ 9 ಸಾವಿರದ 318 ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳಿಗೆ ರಾಷ್ಟ್ ಮಟ್ಟದಲ್ಲಿ ಹತ್ತು ಸಾವಿರದೊಳಗಿನ ರ್ಯಾಂಕ್ ಲಭಿಸಿದ್ದು, ಹರ್ಷ ಯು ಪೂಜಾರಿ 99.9360 ಪರ್ಸಂಟೈಲ್ನೊoದಿಗೆ 720ರಲ್ಲಿ 600 ಅಂಕ ಪಡೆದು ರಾಷ್ಟçಮಟ್ಟದಲ್ಲಿ 1411ನೇ ರ್ಯಾಂಕ್ ಪಡೆದಿರುತ್ತಾರೆ. ಹರ್ಷ […]
ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ ( ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್. ಡಿ 99.923686 ಪರ್ಸಂಟೈಲ್ ನೊಂದಿಗೆ 596 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ್ಯಾಂಕ್, ಪ್ರಜ್ವಲ್ ಎಸ್. ಎನ್ 99.686435 ಪರ್ಸಂಟೈಲ್ನೊಂದಿಗೆ […]
ನೀಟ್ ಫಲಿತಾಂಶ- 2025: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಹೆಮ್ಮಾಡಿ(ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ […]










