ಕುಂದಾಪುರ (ಸೆ.06): ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುವ ಶಿಕ್ಷಕನ ಪಾತ್ರ, ಶಿಕ್ಷಣ ಪದ್ಧತಿ ಬದಲಾದ ಈ ಕಾಲಘಟ್ಟದಲ್ಲಿ ಅತೀಮುಖ್ಯ. ತಂತ್ರಜ್ಞಾನಗಳು ಮಾಹಿತಿಯನ್ನಷ್ಟೇ ನೀಡುತ್ತವೆ. ಆದರೆ ಶಿಕ್ಷಕ ಸಂಸ್ಕಾರಯುತವಾದ ವಿದ್ಯೆಯನ್ನು ಕಲಿಸುವಾತ. ಈ ನಿಟ್ಟಿನಲ್ಲಿ ತಂದೆ ತಾಯಿಯನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟರಮಣ ಬಿ. ನಾಯಕ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
Day: September 11, 2025
ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ
ಕಾರ್ಕಳ (ಸೆ. 9): ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದೆ. ಈ ಸಂಘಟನೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರಂಭಗೊoಡು ಇದೀಗ ರಾಜ್ಯವ್ಯಾಪಿ ತನ್ನ ಸದಸ್ಯತ್ವವನ್ನು ವಿಸ್ತರಿಸಿಕೊಂಡಿದೆ. ಅಂತೆಯೇ ಬೇರೆ ಬೇರೆ ಕಾಲೇಜುಗಳ ಸಾರ್ವತ್ರಿಕ ಸಮಸ್ಯೆಗಳು ಎದುರಾದಾಗ ಕುಪ್ಮಾವು ಸರಕಾರದೊಂದಿಗೆ ಆರೋಗ್ಯಕರವಾದ ಚರ್ಚೆ, ಸಲಹೆ, ಸೂಚನೆಗಳೊಂದಿಗೆ ಆ ಸಮಸ್ಯೆಯನ್ನು ಬಗೆಹರಿಸುವಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜು :ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ( ಸೆ .10): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 03 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಕಾರ್ಯವೈಖರಿ ಕುರಿತು ಸಂಕ್ಷಿಪ್ತವಾಗಿ ವಿವರಿಸಿ ಕಾಲೇಜಿನ ರೆಡ್ ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ […]
ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ -ಜನತಾ ಕಾಲೇಜಿನ ಮಡಿಲಿಗೆ ಅವಳಿ ಪ್ರಶಸ್ತಿಗಳು
ಹೆಮ್ಮಾಡಿ(ಸೆ .11): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜು ಆಯೋಜಿಸಿದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ […]
ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ, 5) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆಯ ಸಹ ಶಿಕ್ಷಕರಾದ ಶ್ರೀ ವಸಂತರಾಜ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀ ವಸಂತರಾಜ ಶೆಟ್ಟಿ ಯುವ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಪ್ಟಂಬರ್ 05 ರಂದು ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಜಯಂತ ಶೆಟ್ಟಿ ದಂಪತಿಗಳನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು. ಸನ್ಮಾನವನ್ನು ಸ್ವೀಕರಿಸಿದ ಜಯಂತ ಶೆಟ್ಟಿ ಅವರು ಮಾತನಾಡುತ್ತಾ ನಾವು ಕಲಿಸಿದ ವಿದ್ಯಾರ್ಥಿಗಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಗುರುತಿಸಿಕೊಂಡಾಗ […]










