ಕುಂದಾಪುರ ( ನ ,25): ಉಡುಪಿಯ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಕಟಾ ವಿಭಾಗದಲ್ಲಿ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನಗಳಿಸಿದ್ದಾರೆ. ಇವನರಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ […]
Year: 2025
ಯುವ ಬಂಟರ ಸಂಘದ ವತಿಯಿಂದ ರಕ್ತದಾನ ಶಿಬಿರ
ಕುಂದಾಪುರ (ನ, 25): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]
ಗಂಗೊಳ್ಳಿಯಲ್ಲಿ ನ .16 ರಂದು ಮಾತೃ ದೇವೋ ಭವ ಕಾರ್ಯಕ್ರಮ
ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ […]
ಹೆಮ್ಮಾಡಿ ಜನತಾ ಸಮೂಹ ವಿದ್ಯಾಸಂಸ್ಥೆ: ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ
ಹೆಮ್ಮಾಡಿ(ನ ,13): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ : ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ ಮೀ […]
ಸಿಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ನ,1೦): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್ ನಲ್ಲಿ, ವಿಶ್ಮಿತಾ ಆಚಾರಿ ಸಿಎ ಇಂಟರ್ಮೀಡಿಯಟ್ […]
ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ : ಚೆಸ್ ನಲ್ಲಿ ಸಾಧನೆ
ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ […]
ನವೆಂಬರ್ 15 ರಂದು ಉಡುಪಿ- ದ.ಕ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ಸ್ಪರ್ಧೆ”
ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.










