ಹೆಮ್ಮಾಡಿ(ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ […]
Year: 2025
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ : ಸಂದೀಪ್ ಪೂಜಾರಿ ಪ್ರಥಮ
ಮoಗಳೂರು(ಜೂ .16): ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್(ರಿ), ಮಂಗಳೂರು,ತಪಸ್ವಿ ಯೋಗ ಕೇಂದ್ರ, ಬಿಕರ್ನ ಕಟ್ಟೆ, ಮಂಗಳೂರುಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಷನ್ (ರಿ), ಮಂಗಳೂರು. ಇದರ ಸಹಯೋಗದೊಂದಿಗೆಯೋಗ ವಿಜ್ಞಾನದ ಹರಿಕಾರ, ಭಾರತದ ಪ್ರಥಮ ಯೋಗ ಪ್ರೊಫೆಸರ್ ದಿ. ಡಾ. ಕೆ. ಕೃಷ್ಣ ಭಟ್ ಇವರ ಸ್ಮರಣಾರ್ಥ ಜೂನ್ 15 ರಂದು ಕೆನರಾ ಪ್ರೌಡ ಶಾಲೆ ಊರ್ವ ಮಂಗಳೂರಿನಲ್ಲಿ ನಡೆದ ತುಳುನಾಡ ಯೋಗ ಕುಮಾರ-2025 ತುಳುನಾಡ ಯೋಗ ಕುಮಾರಿ-2025 ನಡೆದ ದಕ್ಷಿಣ ಕನ್ನಡ […]
ಗಂಗೊಳ್ಳಿ : ನಿವೃತ್ತ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ್ ಭಟ್ ಅವರಿಗೆ ಸನ್ಮಾನ
ಗಂಗೊಳ್ಳಿ(ಜು ,16) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯೋಪಾಧ್ಯಾಯರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ […]
ಹೆಸಕುತ್ತೂರು: ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ತೆಕ್ಕಟ್ಟೆ ( ಜೂ ,10): “ಗಿಡಗಳನ್ನು ನೆಟ್ಟು, ಪೋಷಿಸಿ ಬೆಳೆಸುವುದರ ಮೂಲಕ ನಾವೆಲ್ಲರೂ ನಮ್ಮ ಸುತ್ತಲಿನ ಪರಿಸವನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಬೇಕು. ಪ್ರಕೃತಿ ರಕ್ಷಣೆ ಎಂದರೆ ನಮ್ಮನ್ನು ನಾವೇ ರಕ್ಷಿಸಿಕೊಂಡಂತೆ.” ಎಂದು ಗೀತಾನಂದಫೌಂಡೇಶನ್ (ರಿ) ಮಣೂರು ಪಡುಕರೆ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ನುಡಿದರು. ಅವರು ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಶಾಲಾ […]
ಮಂಗಳೂರು ವಿ. ವಿ ಸಿಬ್ಬಂದಿ ಪಂದ್ಯಾಕೂಟ: ವಿವಿಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ. ರನ್ನರ್ಅಪ್
ಕುಂದಾಪುರ (ಜೂನ್ 8): ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ […]
ಮಕ್ಕಳ ಮೇಳದ ಹಂದೆ- ಉಡುಪ ಯುಗ ಪ್ರವರ್ತಕರು
ಕೋಟ( ಜೂ, 9): “ಸಂಘಟನೆ ಮತ್ತು ನಿರಂತರತೆ ಎರಡೂ ಸುಲಭದ್ದಲ್ಲ. ಎಪ್ಪತ್ತರ ದಶಕದಲ್ಲಿ ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ, ಸುಮಾರು ಐವತ್ತು ವರ್ಷಗಳ ಸಾರ್ಥಕ ದಿಗ್ವಿಜಯವನ್ನು ಸಾಧಿಸಿದ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರು ಯಕ್ಷ ಯುಗ ಪ್ರವರ್ತಕರು. ಅನೇಕ ಮಕ್ಕಳ ಮೇಳಗಳು ಇವತ್ತು ಹುಟ್ಟಿ, ಪ್ರದರ್ಶನಗೊಳ್ಳುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಶಸ್ಸಿನ ಗಾಥೆಯೇ ಮೂಲ ಪ್ರೇರಣೆ. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಪರಂಪರೆಯ ಯಕ್ಷಗಾನದ ಅಭಿರುಚಿಯನ್ನು ಮೂಡಿಸಿ, ಯಕ್ಷಗಾನ ಪ್ರೇಕ್ಷಕರ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ(ಜೂ ,8): “ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ” ಎಂದು ಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ […]
ಬಿ.ಬಿ. ಹೆಗ್ಡೆ ಕಾಲೇಜು : ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ(ಜೂ ,09): “ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ” ಎಂದು ಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ […]
ಬಿ.ಬಿ. ಹೆಗ್ಡೆ ಕಾಲೇಜು : ರಾಣಿ ಅಬ್ಬಕ್ಕ @ 500 –ಉಪನ್ಯಾಸ
ಕುಂದಾಪುರ (ಜೂ,06): ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕ ಕರಾವಳಿ ಕರ್ನಾಟಕದ ಧೀಮಂತ ಶಕ್ತಿ. ವಸಾಹತುಶಾಹಿ ಆಳ್ವಿಕೆಗೆ ಅಬ್ಬಕ್ಕ ನೀಡಿದ ಪ್ರತಿಕ್ರಿಯೆ ಸ್ತುತ್ಯಾರ್ಹ. ಅಂತವರ ವ್ಯಕ್ತಿತ್ವವನ್ನು ಇಂದಿನ ಯುವ ಜನತೆಗೆ ಪರಿಚಯಿಸುವುದು ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ| ವಿ.ಕೆ. ಯಾದವ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು […]










