ಕುಂದಾಪುರ (ಜು.30): ಪದವಿ ಶಿಕ್ಷಣದ ಜೊತೆಗೆ ನಾಯಕತ್ವ, ಸಹಾಯ, ಸಹಕಾರ ಮನೋಭಾವದೊಂದಿಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಿ. ಆ ಮೂಲಕ ಮುಂದೆ ದೇಶದ ಒಳ್ಳೆಯ ಪ್ರಜೆಗಳಾಗುವುದರೊಂದಿಗೆ ಭವಿಷ್ಯದ ನಾಯಕರಾಗಿ ಎಂದು ಉಡುಪಿ ಜಿಲ್ಲೆಯ ಅಥ್ಲೇಟಿಕ್ ಅಸೋಸಿಯೇಶನ್ಸ್ ಅಧ್ಯಕ್ಷರಾದ ಲಯನ್ ಹರಿಪ್ರಸಾದ್ ರೈ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಅವರು […]
Year: 2026
ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ್ಯಾಂಕ್ನೊಳಗೆ ಸ್ಥಾನ
ಕಾರ್ಕಳ( ಜು ,30): ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38 ನೇ ಸ್ಥಾನ ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಉಳಿದಂತೆ ಕ್ರಮವಾಗಿ ವಿದ್ಯಾರ್ಥಿಗಳಾದ, ಪ್ರಣವ್ ಕುಲಕರ್ಣಿ 79, ಸಮೃದ್ ಪಿ .ಶೆಟ್ಟಿ 91, ಪ್ರಾರ್ಥನಾ […]
ಚೆಸ್ ಪಂದ್ಯಾಟ : ಸಾಧನೆ ಮೆರೆದ ಎಚ್ಎಮ್ಎಮ್ ಹಾಗೂ ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳು
ಕುಂದಾಪುರ ( ಜು ,31): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳು ಸಿದ್ದಾಪುರದ ಜ್ಞಾನ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕೃತಿ ಜಿ. ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅದ್ಯಾನ ಜಾವೇದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 17 […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ -‘ನಡವಳಿಕೆ ಹಾಗೂ ಶಿಸ್ತು’ ಕುರಿತು ವಿಶೇಷ ಉಪನ್ಯಾಸ
ಕುಂದಾಪುರ (ಜು.17): ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ದೃಢ ಸಂಕಲ್ಪವನ್ನು ಹೊಂದಬೇಕು, ಉತ್ತಮ ನಡವಳಿಕೆ ಹಾಗೂ ಶಿಸ್ತನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ಹೆತ್ತವರಿಗೆ, ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಿದ್ದಾಪುರದ ಜ್ಞಾನ ಸರಸ್ವತಿ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ […]
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಚೆಸ್ ನಲ್ಲಿ ಮಿಂಚಿದ ಪುಟಾಣಿ ಪ್ರತಿಭೆ ಶ್ರೀನಿತ್
ಕುಂದಾಪುರ( ಜು ,24): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಾರ್ಕಳದಲ್ಲಿ ನಡೆದ ಕರ್ನಾಟಕ ಚೆಸ್ ಅಸೋಸಿಯೇಷನ್ (KCA) ವತಿಯಿಂದ ಆಯೋಜಿಸಲಾದ 12ನೇ ಅಂತರಜಿಲ್ಲಾ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯ ಅಂಡರ್-9 ವಯೋಮಾನದ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ರಾಪಿಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬ್ಲಿಟ್ಜ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ . […]
ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ
ಗಂಗೊಳ್ಳಿ(ಜು,24) : ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ […]
ಸರ್ಕಾರಿ ಪಿ ಯು ಕಾಲೇಜು ಕುಂದಾಪುರ : ಜ್ಯೂನಿಯರ್ ರೆಡ್ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ ( ಜು,24): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ 2026-27 ನೇ ಸಾಲಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ರೆಡ್ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಜ್ಯೂನಿಯರ್ ರೆಡ್ಕ್ರಾಸ್ನ ಉದ್ದೇಶ ಮತ್ತು ಕಾರ್ಯಗಳನ್ನು ಜ್ಯೂನಿಯರ್ ರೆಡ್ಕ್ರಾಸ್ ಸದಸ್ಯರಿಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ರವರು ವಹಿಸಿದ್ದರು. ರೆಡ್ಕ್ರಾಸ್ ಘಟಕದ ಸದಸ್ಯರು ಜ್ಯೂನಿಯರ್ ರೆಡ್ಕ್ರಾಸ್ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ .ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜುಲೈ 18): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ […]
ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಶ್ರೀ ಅಜಿತ್ ಹನುಮಕ್ಕನವರ್ ಭಾಗಿ
ಕಾರ್ಕಳ( ಜು,20): ಸಾಹಿತ್ಯ, ಓದು, ಯುವ ಮನಸುಗಳನ್ನು ಪುಸ್ತಕದೆಡೆಗೆ ಸೆಳೆಯಬೇಕೆನ್ನುವ ಸದುದ್ದೇಶದಿಂದ ಕ್ರಿಯೇಟಿವ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪುಸ್ತಕ ಮನೆ ವತಿಯಿಂದ ಕ್ರಿಯೇಟಿವ್ ಪುಸ್ತಕ ಧಾರೆ 2026 ಮೂರನೆಯ ಆವೃತ್ತಿಯ ಕಾರ್ಯಕ್ರಮ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸಂಪನ್ನಗೊಂಡಿತ್ತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವಿ.ಸುನಿಲ್ ಕುಮಾರ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತುಗಳನ್ನಾಡುತ್ತಾ, ಪುಸ್ತಕ ಬೆಳೆಸುವ ಕಾರ್ಯವನ್ನು ಪುಸ್ತಕ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು ಕೊಲ್ಲೂರು: ಪ್ರತಿಭಾ ಪುರಸ್ಕಾರ -2026
ಕೊಲ್ಲೂರು ( ಜು 15): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜಿನ 2025-26 ನೇ ಶೈಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 44 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಕಾಲೇಜಿನ ಮೇಲುಸ್ತುವಾರಿಗಳು ಆಗಿರುವ ಸುರೇಂದ್ರ ಶೆಟ್ಟಿ ಯವರು ಎಲ್ಲಾ ವಿದ್ಯಾರ್ಥಿಗಳಿಗೆ ಮೂಕಾಂಬಿಕೆಯ ನಾಣ್ಯ ನೀಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದಿನ ದಿನಗಳಲ್ಲಿಯೂ ಇದೆ ರೀತಿ ಸಾಧನೆ ಮಾಡಬೇಕು ನಿಮಗೆ […]










