ತ್ರಾಸಿ(ಜು,07): ಸ್ವರಾಜ್ಯ ೭೫” ಇದರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆಯ ಅಭಿಯಾನದ 14ನೇ ಕಾಯ೯ಕ್ರಮ ಬೈಂದೂರು ತಾಲೂಕು ವ್ಯಾಪ್ತಿಯ ತ್ರಾಸಿಯ ಸ್ವಾತಂತ್ರ್ಯ ಹೋರಾಟಗಾರ ಪರಮೇಶ್ವರ ಹೆಬ್ಬಾರ್ ಮನೆಯಲ್ಲಿ ಜುಲೈ,03 ರಂದು ನಡೆಯಿತು. ನಾಮ ಫಲಕ ಅನಾವರಣವನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿರುವ ಶ್ರೀಯುತ ನೀಲಾವರ ಸುರೇಂದ್ರ ಅಡಿಗರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೆಯ ಮಿತ್ರರಾದ ಶ್ರೀ ಜನಾರ್ದನ ಮರವಂತೆ ಇವರು ವಹಿಸಿದ್ದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಶ್ರೀಧರ್ […]
Tag: basrur
ಬಸ್ರೂರು: ಶೈವ ಪಂಥದ ಕಂಚಿನ ಕಂಬದಲ್ಲಿ ಶಾಸನ ಪತ್ತೆ
ಬಸ್ರೂರು(ಜೂ,20): ಇಲ್ಲಿನ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ದೇವಸ್ಥಾನದ “ಶೈವ ಪಂಥದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿದೆ. ಕುಂದಾಪುರ ತಾಲೂಕು ಬಸ್ರೂರು ಗ್ರಾಮ ಬಹಳ ಇತಿಹಾಸ ಪ್ರಸಿದ್ಧ ಸ್ಥಳ. ಇಲ್ಲಿ ವಿಜಯನಗರ,ಆಳುಪ,ಕೆಳದಿ ಸಂಸ್ಥಾನಗಳು ಆಳ್ವಿಕೆ ನಡೆಸಿದ ಸ್ಥಳ ಕೂಡಾ ಆಗಿದೆ.ಬಸ್ರೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ದೇವಸ್ಥಾನದ ಹೊರ ಸುತ್ತಿನ ಎದುರು ಭಾಗದಲ್ಲಿ ಕ್ರಿ.ಶ 15-16ನೇ ಶತಮಾನದ ಅಂದರೆ ಸರಿಸುಮಾರು 500 ವಷ೯ಗಳ ಹಳೆಯದಾದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿರುವುದು […]
ಬೈಂದೂರು :ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಬೈಂದೂರು (ಏ,10): ಸ್ವಾತಂತ್ರ್ಯ ಹೋರಾಟಗಾರ ಬಾಡಾ ದಿ.ಮಂಜುನಾಥ ಜೋಶಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ಬೈಂದೂರು ತಾಲೂಕು ವ್ಯಾಪ್ತಿಯ ಬಾಡಾದಲ್ಲಿ ನಡೆಯಿತು. ನಾಮ ಫಲಕ ಅನಾವರಣವನ್ನು ಉದ್ಯಮಿ ಶ್ರೀ ಸುಜೀತ್ ಶೆಟ್ಟಿ ಹಿಲಿಯಾಣ ರವರು ನೆರವೇರಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಜಯಾನಂದ ಹೋಬಳಿದಾರ್, ನಾಗರತ್ನ ಹೇರಳೆ,ಶ್ರೀ ಜಯದೇವಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ ಶಿರೂರು ರವರು ವಹಿಸಿದ್ದರು.ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ […]
ಕುಂದಾಪುರ :ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಸೌಕೂರು(ಮಾ,13): ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ಮಾ.13ರಂದು ಕುಂದಾಪುರದ ಗುಳ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಕೂರು ಬೋಳ್ ಕಟ್ಟೆನಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಠಾಣಾಧಿಕಾರಿ ಶ್ರೀ ನಿರಂಜನ್ ಗೌಡ ರವರು ನಾಮ ಫಲಕ ಅನಾವರಣಗೈದರು. ಕೊಳ್ಕೈಬೈಲು ಮಹಾಬಲ ಶೆಟ್ಟಿ ಯವರ ಕೊಡುಗೆಯಕುರಿತು ಅಂತರಾಷ್ಟ್ರೀಯ ಚಿತ್ರ ಕಲಾವಿದ ಮಹೇಂದ್ರ ವಕ್ವಾಡಿ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಘವೇಂದ್ರ ಮೊಗವೀರ ದುರ್ಗಾ ನಗರ ಸೌಕೂರು […]
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.
ಬಸ್ರೂರು: ಕೋಟೆ ಆಂಜನೇಯ ದೇವಸ್ಥಾನ ಕ್ಕೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕರು ಭೇಟಿ
ಬಸ್ರೂರು(ಫೆ.6): ಖ್ಯಾತ ಸ್ಯಾಂಡಲ್ ವುಡ್ ನಟ ಯಶ್ ಹಾಗೂ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಕೋಟೆ ಆಂಜನೇಯ ದೇವಸ್ಥಾನಕ್ಕೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀಕಾಂತ್ ಕೆರೆಕಟ್ಟೆ, ಸುಬ್ರಹ್ಮಣ್ಯ ಭಟ್,ಸದಾನಂದ ಮಾರ್ಗೋಳಿ, ಕೃಷ್ಣ ಪೈಂಟರ್, ಸಂಜೀವ ಮೇಸ್ತ್ರಿ, ಸುಬ್ರಹ್ಮಣ್ಯಕಾಂತ್ ಕೆರೆಕಟ್ಟೆ, ಬಾಲಕೃಷ್ಣ ಶೇರೆಗಾರ್,ಪ್ರದೀಪ ಕುಮಾರ್ ಬಸ್ರೂರು,ಗುರುಪ್ರಸಾದ್ ದೇವಾಡಿಗ,ಶಿವಪ್ರಸಾದ್ ಭಟ್,ಮಹೇಶ್ ಕಿಣಿ ಹಾಗೂ ಸಂತೋಷ್ ಬಳ್ಕೂರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಮನೆಯಲ್ಲಿ ನಾಮಫಲಕ ಅನಾವರಣ
ತೆಕ್ಕಟ್ಟೆ(ಜ.3): ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆಯ ಹಿನ್ನೆಲೆಯಲ್ಲಿ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಇವರ ಸೇವೆಯ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಉಸಿರು ಕೋಟ,ಅರಿವು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕವನ್ನು ಶ್ರೀಯುತ ಹರೀಶ್ ಕುಮಾರ್ ಶೆಟ್ಟಿ ಯವರು ಅನಾವರಣಗೊಳಿಸಿದರು . […]
ಸಾಲಿಗ್ರಾಮ: ಸ್ವಾತಂತ್ರ್ಯ ಹೋರಾಟಗಾರರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ
ಸಾಲಿಗ್ರಾಮ (ಡಿ.28): ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ಆಯೋಜಿಸಿದ ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕವನ್ನು ಶ್ರೀ ಎ.ಎಸ್.ಎನ್.ಹೆಬ್ಬಾರ್ ರವರು ಡಿ.25ರಂದು ಅನಾವರಣಗೊಳಿಸಿದರು . ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಈ ವಿಚಾರಕ್ಕೆ ಸಂಭಂಧಿಸಿದಂತೆ ಕುಂದಾಪುರದ ಹಿರಿಯ ಪತ್ರಕರ್ತ ಶ್ರೀ ಜಾನ್ ಡಿಸೋಜಾ ಮಾತನಾಡಿದರು. ಪಾರಂಪಳ್ಳಿ ದಿ.ಜನಾಧ೯ನ ಮಧ್ಯಸ್ಥ ರ […]
ವಕ್ವಾಡಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮ ಫಲಕ ಅಳವಡಿಕೆ
ಕುಂದಾಪುರ(ಡಿ, 12): ಕುಂಭಾಶಿ ಸಮೀಪದ ವಕ್ವಾಡಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೃಷ್ಣ ಐತಾಳ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎಂಬ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಸ್ವರಾಜ್ಯ 75 ತಂಡ ಹಾಗೂ ವಿವಿಧ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಯಿತು. ಶ್ರೀ ಪ್ರೇಮಾನಂದ ಶೆಟ್ಟಿ ಕಟ್ಕೇರಿ ಯವರು ನಾಮಫಲಕ ಅನಾವರಣಗೊಳಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ದೇಶಪ್ರೇಮ ನಾವು ಪ್ರತಿದಿನ ಸ್ಮರಿಸಬೇಕು ಹಾಗೂ ಸರಕಾರ ಸ್ವಾತಂತ್ರ್ಯ ಹೋರಾಟಗಾರರ ಮನೆಯ ಬಗ್ಗೆ ಕಳಕಳಿಯನ್ನು […]
ಶಾರದಾ ಆಂಗ್ಲ ಮಾಧ್ಯಮ ಶಾಲೆ ಬಸ್ರೂರು : ಕನ್ನಡ ರಾಜ್ಯೋತ್ಸವ
ಬಸ್ರೂರು (ನ, 01) : ಇಲ್ಲಿನ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅರ್ಥಶಾಸ್ತ್ರ ಉಪನ್ಯಾಸಕ ,ಪ್ರಸಿದ್ಧ ನಿರೂಪಕ, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಧ್ವಜರೋಹಣಗೈದು ಕನ್ನಡ ನಾಡು, ನುಡಿ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ , ಆಡಳಿತ ಮಂಡಳಿಯ ಮೊಸೆಸ್ ಮನೋಹರ್, ಜುನೈದ್, […]