ಕುಂದಾಪುರ (ಜೂನ್.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು […]
Tag: bbhc
ಕುಂದಾಪುರ: ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ
ಕುಂದಾಪುರ(ಜು,13): ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ ವಿದ್ಯಾರ್ಥಿಗಳು ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಾಗ ತಮ್ಮ ಸ್ಪರ್ಧೆಯಿರುವುದು ಬೇರೆಯವರೊಂದಿಗೆ ಅಲ್ಲ, ತನ್ನದೇ ಆದ ನಿನ್ನೆಯ ಸಾಮರ್ಥ್ಯದೊಂದಿಗೆ ಇಂದಿನ ಕೌಶಲ್ಯವನ್ನು ಸ್ಪರ್ಧೆಗೊಡ್ಡಿ, ನಿರಂತರತೆ, ಶಿಸ್ತು ಮತ್ತು ದೊಡ್ಡ ಕನಸು ಕಾಣುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಪ್ರತಿಶತವಾದರೂ ನಿನ್ನೆಗಿಂತ ಉತ್ತಮರಾಗಬೇಕೆಂದು ಮನಗಂಡು ಯಶಸ್ಸು ಸಾಧಿಸಬೇಕು” ಎಂದು ಕುವೈಟ್ ನ ಅಲ್ ಸಭಾ ಆಸ್ಪತ್ರೆಯ ಮಕ್ಕಳತಜ್ಞ, ಸೀನಿಯರ್ ರಿಜಿಸ್ಟ್ರಾರ್, ಡಾ. ಶಿಶಿರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಶಿಶಿರ್ ಶೆಟ್ಟಿಯವರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಸಹನಾ ಮತ್ತು ಮೇಘನಾ ಪ್ರಾರ್ಥನೆಗೈದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಶಾ ಡಿಸೋಜಾ ರವರು ನಿರೂಪಿಸಿ ವಂದನಾರ್ಪಣೆಗೈದರು.
ಬಿ.ಬಿ. ಹೆಗ್ಡೆ ಕಾಲೇಜು: ಟಿವಿಎಸ್ ಗ್ರೂಪ್ ಕ್ಯಾಂಪಸ್ ನೇಮಕಾತಿ
ಕುಂದಾಪುರ( ಎ,12): ಕುಂದಾಪುರದ ಡಾ .ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಟಿವಿಎಸ್ ಗ್ರೂಪ್ ಸಂಸ್ಥೆ ವತಿಯಿಂದ ಎಕ್ಸ್ ಫಿನೋ ಕನ್ಸಲ್ಟೆನ್ಸಿ ವತಿಯಿಂದ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಎಪ್ರಿಲ್ 11 ರಂದು ನಡೆಸಿತು. ಅಂತಿಮ ವರ್ಷದ B .Com.ಮತ್ತು BBA ವಿದ್ಯಾರ್ಥಿಗಳು ಭಾಗವಹಿಸಿದರು. ಎಕ್ಸ್ ಫಿನೋ ಕನ್ಸಲ್ಟೆನ್ಸಿ ಸಂಸ್ಥೆಯ HR ಅಧಿಕಾರಿ ಹಿತಾ ಶೆಟ್ಟಿ ಯವರು ವಿವಿಧ ಹುದ್ದೆಗಳು ಮತ್ತು ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಇತರೆ ಅಧಿಕಾರಿಗಳಾದ ಜ್ಯೋತಿ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ವಿಷಯದ ಕುರಿತು ವಿಶೇಷ ಉಪನ್ಯಾಸ
ಕುಂದಾಪುರ (ಮೇ 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಮಾನ ಅವಕಾಶ ಘಟಕದ ಆಶ್ರಯದಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 21ರಂದು ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ವಿದ್ಯಾರ್ಥಿವೇತನಗಳು […]
ಬಿ.ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದಿಂದ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ
ಕುಂದಾಪುರ (ಮೇ.07): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮೇ 7 ರಂದು ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ ಆಯೋಜಿಸಲಾಯಿತು. ಈ ಅಧ್ಯಯನ ಭೇಟಿಯಲ್ಲಿ 100 ಬಿಸಿಎ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳಾದ ಶ್ರೀಮತಿ ಜಯಲಕ್ಷ್ಮಿ ಕೆ., ಶ್ರೀಮತಿ ವಿಜಯಶ್ರೀ, ಶ್ರೀ ಮಹೇಶ್ ಪೂಜಾರಿ ಪಾಲ್ಗೊಂಡರು. ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮೀ ಆನಂದನ್ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ವಾಗತಿಸಿದರು. […]
ಬಿ. ಬಿ. ಹೆಗ್ಡೆ ಕಾಲೇಜು : ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
ಕುಂದಾಪುರ (ಮೇ.07): ಮಹಾಭಾರತ ಮತ್ತು ರಾಮಾಯಣದಲ್ಲಿ ಬರುವ ಉದಾತ್ತವಾದ ಮೌಲ್ಯಗಳು ಮತ್ತು ಪಾತ್ರಗಳ ಕುರಿತು ವಿದ್ಯಾರ್ಥಿಗಳು ತರ್ಕಬದ್ಧವಾಗಿ ಚಿಂತಿಸಬೇಕು. ವಿಕಾಸಶೀಲ ಮಹಾಕಾವ್ಯಗಳಾದ ಈ ಕೃತಿಗಳಲ್ಲಿ ಬರುವ ಪಾತ್ರಗಳ ಆದರ್ಶಗಳಲ್ಲಿ ಮೌಲ್ಯ ಅಡಗಿದೆ. ಈ ಮೌಲ್ಯಗಳೇ ಬದುಕಿಗೆ ದೀವಿಗೆ. ವಿದ್ಯಾರ್ಥಿಗಳು ಸಂವೇದನಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹೊಸಂಗಡಿ ಪದವಿ – ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಣಜಿತ್ ಶೆಟ್ಟಿ ಮೂಡುಬಗೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
ಮೌಲ್ಯ ಶಿಕ್ಷಣದ ಆಶಾಕಿರಣ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಕುಂದಾಪುರ : ಇತ್ತೀಚಿಗೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪಂಚಮುಖಿ ಶಿಕ್ಷಣದಡಿಯಲ್ಲಿ ಪ್ರಾಯೋಗಿಕ ಕಲಿಕೆ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಈ ಸಂಸ್ಥೆ ಪದವಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. 2022ರಲ್ಲಿ ನ್ಯಾಕ್ನಿಂದ ಅನುದಾನ ರಹಿತ ಕಾಲೇಜ್ ಆಗಿ ತನ್ನ […]
ಡಾl ಬಿ.ಬಿ ಹೆಗ್ಡೆ ಕಾಲೇಜು : ಪ್ರಾಕ್ತನ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ (ಮಾ. 20): ಇಲ್ಲಿನ ಡಾ ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ರ್ಯಾಂಕ್ ವಿಜೇತ ಪ್ರಾಕ್ತನ ವಿದ್ಯಾರ್ಥಿಗಳಾದ ಸುಹಾನಿ ಹಾಗೂ ಶ್ರದ್ದಾ ಯವರು ಕಾಲೇಜಿಗೆ ಆಗಮಿಸಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಿ. ಬಿ. ಎ ಪದವಿಯ ಪ್ರಯೋಜನಗಳು ಹಾಗೂ ಭವಿಷ್ಯದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾರೈ ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿ-ಗ್ರೋ 2026 ವಾಣಿಜ್ಯ ಹಬ್ಬ ಸಂಪನ್ನ
ಕುoದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಿ-ಗ್ರೋ 2026 ಬಿಸಿನೆಸ್ ಡೇ ವಾಣಿಜ್ಯ ಹಬ್ಬವು ಯಶಸ್ವಿಯಾಗಿ ಸಂಪನ್ನಗೊoಡಿತು. ಅಂತಿಮ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಅಂತರ್-ತರಗತಿ ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಯಿತು. ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಮೇಳದ ಭಾಗವಾಗಿ ವಿದ್ಯಾರ್ಥಿಗಳೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ, ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ
ಕುಂದಾಪುರ (ಮಾರ್ಚ್ 7): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಥೀಮ್ ಪಾರ್ಕ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ಕುರಿತು ಮಾಹಿತಿ ಪಡೆದರು. ಕಾರಂತರ ಸಾಹಿತ್ಯ ಕೃಷಿಯ ಕುರಿತು ಉಪನ್ಯಾಸಕರ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ […]










