ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು […]
Tag: bbhc
ಸಿಎ .ಸಿ.ಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಡಿ, 09): ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್, ಹಾಗೂ ರಚನಾ […]
ಬಿ. ಬಿ. ಹೆಗ್ಡೆ ಕಾಲೇಜು : ವೃಕ್ಷ ಮಾತೆತಿಮ್ಮಕ್ಕ – ಒಂದುಸಮರ್ಪಣೆ
ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]
ಯುವ ಬಂಟರ ಸಂಘದ ವತಿಯಿಂದ ರಕ್ತದಾನ ಶಿಬಿರ
ಕುಂದಾಪುರ (ನ, 25): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]
ಸಿಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ನ,1೦): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್ ನಲ್ಲಿ, ವಿಶ್ಮಿತಾ ಆಚಾರಿ ಸಿಎ ಇಂಟರ್ಮೀಡಿಯಟ್ […]
ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ […]
ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2025’ ಸಂಪನ್ನ
ಕುಂದಾಪುರ (ಅ.31): ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ […]
ಬಿ. ಬಿ. ಹೆಗ್ಡೆ ಕಾಲೇಜು : ಸರ್ದಾರ್ ವಲ್ಲಭಭಾಯಿ ಪಟೇಲ್ 150 ನೇ ಜನ್ಮ ದಿನಾಚರಣೆ
ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ‘ಉಗಮ- 2025’ ಅಂತರ್ ಕಾಲೇಜು ಸ್ಪರ್ಧೆ
ಕುಂದಾಪುರ ( ಆ ,29): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಗಮ 2025’- ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳು ಅಕ್ಟೋಬರ್ 31 ರಂದು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ ( ಆ ,27): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರವರು ಮೂಡಬಿದ್ರೆಯ ಆಳ್ವಾಸ್ ಪಿ ಯು ಕ್ಯಾಂಪಸ್ ನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಿದ್ದ 20 ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇನ್ ಲೂವಿಸ್ A-K ಲೆವೆಲ್ ಓಪನ್ ಕೆಟಗರಿನಲ್ಲಿ 5 ನೇ […]










