ಕುಂದಾಪುರ (ನ.13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನವೆಂಬರ್ 13, 2024 ರಂದು ಎನ್ಪಿಟಿಎಲ್ ಸ್ವಯಂ ಕೋರ್ಸಿನ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು. ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಈ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ.ವಿ. ಮಟ್ಟದಅಂತರ್-ಕಾಲೇಜು ಕುಸ್ತಿ ಪಂದ್ಯಾಟ ಸಂಪನ್ನ
ಕುಂದಾಪುರ, (ನ.15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಕುಸ್ತಿ ಪಾರಂಪರಿಕ ಹಿನ್ನಲೆ ಇರುವ ಕ್ರೀಡೆ. ರಾಜಪ್ರಭುತ್ವ ಕಾಲಘಟ್ಟದಲ್ಲಿ ಅತ್ಯಂತ ಚಾಲ್ತಿಯಲ್ಲಿತ್ತು. ದೇಸಿ ಸೊಗಡು ಹೊಂದಿರುವ ಈ ಕ್ರೀಡೆ ಇಂದು ಜಾಗತಿಕ ಮನ್ನಣೆ ಪಡೆದು ವಿವಿಧ ಆಯಾಮಗಳಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಕ್ರೀಡೆಯಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜು : ಕಾನೂನಿನ ಅರಿವಿನ ವಿನೂತನ ಪ್ರಯೋಗ ‘ವಿಧಿಕ್ತ-2024’ ಸಂಪನ್ನ
ಕುಂದಾಪುರ (ನ.12): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2024’ ಕಾನೂನು ಅರಿವಿನ ಅಂತರ್ ತರಗತಿ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊoಡಿತು. ವಿದ್ಯಾರ್ಥಿಗಳಿಗೆ ಕಾನೂನಿನ ಪ್ರಾಯೋಗಿಕ ಅಂಶಗಳನ್ನು ಅರ್ಥ ಮಾಡಿಸುವ ಹಾಗೂ ಕಾನೂನಿನ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಹಕರಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಬಾರ್ ಅಸೋಸಿಯೇಷನ್ ಇದರ ಮಾಜಿ ಅಧ್ಯಕ್ಷರು ಹಾಗೂ ಹೆಸರಾಂತ […]
ಬಿ. ಬಿ. ಹೆಗ್ಡೆ ಕಾಲೇಜು : ‘ಉಗಮ-2024’ -ಸಮಾರೋಪ
ಕುಂದಾಪುರ (ನ.15): ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿoತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಇವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ & ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ […]
ಡಾ|ಬಿ.ಬಿ.ಹೆಗ್ಡೆ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು. ಇವರು […]
ಬಿ. ಬಿ. ಹೆಗ್ಡೆ ಕಾಲೇಜು : ನವೆಂಬರ್ 15 ರಂದು ‘ಉಗಮ’ – ಪದವಿ ಪೂರ್ವ ವಿದ್ಯಾರ್ಥಿಗಳ ಸ್ಪರ್ಧೆ
ಕುಂದಾಪುರ (ನವೆಂಬರ್ 12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ನವೆಂಬರ್ 15ರಂದು ನಡೆಯಲಿದೆ . ಉಡುಪಿ ಜಿಲ್ಲಾ ವ್ಯಾಪ್ತಿಯ ಪಿ ಯು ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ. ಬಿ. ಹೆಗ್ಡೆ ಕಾಲೇಜು- ಎನ್.ಸಿ.ಸಿ. ಘಟಕ : ಗೋಗ್ರೀನ್ – 2.0 ಜಾಗೃತಿ ಜಾಥಾ
ಕುಂದಾಪುರ (ನ.06): ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿ ಪೂರ್ವ […]
ಬಿ. ಬಿ. ಹೆಗ್ಡೆ ಕಾಲೇಜು: ನ.14 ಹಾಗೂ15 ರಂದು ಮಂಗಳೂರು ವಿ. ವಿ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾಟ
ಕುಂದಾಪುರ (ನವೆಂಬರ್ 04): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾಟ ನವೆಂಬರ್ 14 ಮತ್ತು 15ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳ ಸುಮಾರು 70 ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]
ಬಿ.ಬಿ. ಹೆಗ್ಡೆ ಕಾಲೇಜು : ವಿಸ್ತರಣಾ ಚಟುವಟಿಕೆ
ಕುಂದಾಪುರ (ಅ 31): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಹಿನ್ನಲೆಯಲ್ಲಿ ಕಲಾಕ್ಷೇತ್ರ ಕುಂದಾಪುರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡ ಹಬ್ಬ’ ಸಪ್ತಾಹದ ಪೂರ್ವಭಾವಿಯಾಗಿ ಅಕ್ಟೋಬರ್ 31ರಂದು ಕುಂದಾಪುರ ನಗರದಲ್ಲಿ ‘ಕನ್ನಡ ರಥೋತ್ಸವ’ ಪುರ ಮೆರವಣಿಗೆಯಲ್ಲಿ ಕಾಲೇಜಿನ ಕನ್ನಡ ಸಂಘದ ವಿದ್ಯಾರ್ಥಿಗಳು ಹಾಗೂ ಬೋಧಕೇತರರು ಭಾಗವಹಿಸಿದರು. ಕುಂದಾಪುರದ ಜ್ಯೂನಿಯರ್ ಕಾಲೇಜಿನಿಂದ ಪ್ರಾರಂಭವಾದ ಪುರಮೆರವಣಿಗೆ ಕುಂದಾಪುರ ನಗರದ ಒಳಗಡೆ […]
ಬಿ. ಬಿ. ಹೆಗ್ಡೆ ಕಾಲೇಜು :ಮಾನವ ಜೀವನದಲ್ಲಿ ನೈತಿಕತೆ–ಮಾಹಿತಿ ಕಾರ್ಯಾಗಾರ
ಕುಂದಾಪುರ (ಅ.30): ಮನುಷ್ಯನ ಮನಸ್ಸಿನಲ್ಲಿ ಅಹಂಕಾರವು ತುಂಬಿರಬಾರದು. ಅಹಂಕಾರ ತುಂಬಿದ ಮನುಷ್ಯನ ಜೀವನವು ಅವನನ್ನು ಅಧೋಗತಿಯತ್ತ ಕೊಂಡೊಯ್ಯುವುದು. ಹಿರಿಯರು ಹಾಕಿಕೊಟ್ಟಂತಹ ನೀತಿ-ನಿಯಮಗಳನ್ನು ಗೌರವಿಸಿ ಪಾಲಿಸಿಕೊಂಡು ಬಂದಲ್ಲಿ ಮನುಷ್ಯ ಜೀವನ ಸಾಫಲ್ಯತೆಯನ್ನು ಸಾಧಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಸುಣ್ಣಾರಿಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಕಿರಣ್ ಕುಮಾರ್ ಬಿ. ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವೀಯ ಮೌಲ್ಯಗಳು ಮತ್ತು ವೃತ್ತಿಪರ ನೀತಿ ಸಂಘ ಆಯೋಜಿಸಿದ […]










