ಕುಂದಾಪುರ (ನವೆಂಬರ್ 04): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾಟ ನವೆಂಬರ್ 14 ಮತ್ತು 15ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳ ಸುಮಾರು 70 ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]
Tag: bbhc
ಬಿ.ಬಿ. ಹೆಗ್ಡೆ ಕಾಲೇಜು : ವಿಸ್ತರಣಾ ಚಟುವಟಿಕೆ
ಕುಂದಾಪುರ (ಅ 31): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಹಿನ್ನಲೆಯಲ್ಲಿ ಕಲಾಕ್ಷೇತ್ರ ಕುಂದಾಪುರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡ ಹಬ್ಬ’ ಸಪ್ತಾಹದ ಪೂರ್ವಭಾವಿಯಾಗಿ ಅಕ್ಟೋಬರ್ 31ರಂದು ಕುಂದಾಪುರ ನಗರದಲ್ಲಿ ‘ಕನ್ನಡ ರಥೋತ್ಸವ’ ಪುರ ಮೆರವಣಿಗೆಯಲ್ಲಿ ಕಾಲೇಜಿನ ಕನ್ನಡ ಸಂಘದ ವಿದ್ಯಾರ್ಥಿಗಳು ಹಾಗೂ ಬೋಧಕೇತರರು ಭಾಗವಹಿಸಿದರು. ಕುಂದಾಪುರದ ಜ್ಯೂನಿಯರ್ ಕಾಲೇಜಿನಿಂದ ಪ್ರಾರಂಭವಾದ ಪುರಮೆರವಣಿಗೆ ಕುಂದಾಪುರ ನಗರದ ಒಳಗಡೆ […]
ಬಿ. ಬಿ. ಹೆಗ್ಡೆ ಕಾಲೇಜು :ಮಾನವ ಜೀವನದಲ್ಲಿ ನೈತಿಕತೆ–ಮಾಹಿತಿ ಕಾರ್ಯಾಗಾರ
ಕುಂದಾಪುರ (ಅ.30): ಮನುಷ್ಯನ ಮನಸ್ಸಿನಲ್ಲಿ ಅಹಂಕಾರವು ತುಂಬಿರಬಾರದು. ಅಹಂಕಾರ ತುಂಬಿದ ಮನುಷ್ಯನ ಜೀವನವು ಅವನನ್ನು ಅಧೋಗತಿಯತ್ತ ಕೊಂಡೊಯ್ಯುವುದು. ಹಿರಿಯರು ಹಾಕಿಕೊಟ್ಟಂತಹ ನೀತಿ-ನಿಯಮಗಳನ್ನು ಗೌರವಿಸಿ ಪಾಲಿಸಿಕೊಂಡು ಬಂದಲ್ಲಿ ಮನುಷ್ಯ ಜೀವನ ಸಾಫಲ್ಯತೆಯನ್ನು ಸಾಧಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಸುಣ್ಣಾರಿಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಕಿರಣ್ ಕುಮಾರ್ ಬಿ. ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವೀಯ ಮೌಲ್ಯಗಳು ಮತ್ತು ವೃತ್ತಿಪರ ನೀತಿ ಸಂಘ ಆಯೋಜಿಸಿದ […]
ಬಿ.ಬಿ. ಹೆಗ್ಡೆ ಕಾಲೇಜು: ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ನ, 01): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಹಾಗೂ ಶಿಕ್ಷಕ ಸತೀಶ್ ವಡ್ಡರ್ಸೆ ಕುಂದಾಪುರದಲ್ಲಿ ಭೂಮಿಯೊಂದಿಗೆ ಬೆಸೆದುಕೊಂಡ ಈ ದೀಪಾವಳಿ ಕೃಷಿ ಸಂಬoಧಿಯಾಗಿ ಬೆಳೆದು ಬಂದಿದ್ದು. ಹೀಗಾಗಿ ನರಕ ಚತುರ್ದಶಿ, ಬಲಿ ಪೂಜೆ ಮತ್ತು ಗೋಪೂಜೆಗಳು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ- ಶತಕಂಠ ಗಾಯನ
ಕುಂದಾಪುರ (ನ, 01): ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ, ಕನ್ನಡ ಗೀತ ಗಾಯನ ಹಾಗೂ ವಿದ್ಯಾರ್ಥಿಗಳಿಂದ ಶತಕಂಠ ಗಾಯನ ನಡೆಯಿತು. ಮುಖ್ಯ ಅತಿಥಿ ಮೂಡುಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ಕೃಷ್ಣರಾಜ ಕರಬ ಅವರು ಮಾತನಾಡಿ, ಅನೇಕ ಪ್ರಾದೇಶಿಕ ಭಾಷೆಗಳಿಂದ ಕೂಡಿದ ಕನ್ನಡ ಜಗತ್ತಿನ ಶ್ರೀಮಂತ […]
ಬಿ.ಬಿ. ಹೆಗ್ಡೆ ಕಾಲೇಜು : ಆರೋಗ್ಯವಿಮೆ -ಅರಿವು ಕಾರ್ಯಕ್ರಮ
ಕುಂದಾಪುರ (ಅ. 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸ್ಟಾರ್ ಹೆಲ್ತ್ ಸಂಸ್ಥೆಯ ವತಿಯಿಂದ ಆರೋಗ್ಯ ವಿಮೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಟಾರ್ ಹೆಲ್ತ್ನ ಟ್ರೈನಿಂಗ್ ಮ್ಯಾನೇಜರ್ ಆಗಿರುವ ಶ್ರೀ ಸಂತೋಷ್ರವರು ಆರೋಗ್ಯ ವಿಮೆ ಹಾಗೂ ಲಭ್ಯವಿರುವ ವಿವಿಧ ಪಾಲಿಸಿಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆಯನ್ನು […]
ಡಾl ಬಿ.ಬಿ ಹೆಗ್ಡೆ ಕಾಲೇಜು : ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಸಂಪನ್ನ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆದ ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ ಪ್ರಬಂಧಕರುಗಳಾದ ಶ್ರೀ ನಿಶಿತ್ ಪಾರ್ಮರ್ ಹಾಗೂ ಶ್ರೀ ರವಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ಡಾl ಬಿ.ಬಿ ಹೆಗ್ಡೆ ಕಾಲೇಜು :ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಉದ್ಘಾಟನೆ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆಯಲಿರುವ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ ಉಮೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಬಿ ಬಿ ಎ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಆಡಳಿತ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿಪುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು […]
ಬಿ. ಬಿ. ಹೆಗ್ಡೆ ಕಾಲೇಜು: ಟೆಕ್ಮಂಥನ್ 4.0’ ಸಮಾರೋಪ
ಕುಂದಾಪುರ, (ಅಕ್ಟೋಬರ್ 23): ‘ನಹೀ ಜ್ಞಾನೇನ ಸದೃಶಂ’ ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಹಾಗೂ ವಿದ್ಯಾರ್ಥಿಗಳು ಸೋತಾಗ ಹೆದರದೆ ನಾವೆಲ್ಲಿ ಎಡವಿದ್ದೇವೆ ಎನ್ನುವುದನ್ನು ಮನದಟ್ಟು ಮಾಡಿಕೊಳ್ಳುವುದರ ಮೂಲಕ ಗೆಲುವಿನ ಹಾದಿಯಲ್ಲಿ ಸಾಗಬೇಕು ಎಂದು ವಿವೇಕ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ಸಂತೋಷ್ ನೀಲಾವರ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ […]
ಬಿ. ಬಿ. ಹೆಗ್ಡೆಕಾಲೇಜು: ಟೆಕ್ಮಂಥನ್ 4.0 ಉದ್ಘಾಟನೆ
ಕುಂದಾಪುರ, (ಅಕ್ಟೋಬರ್ 23): ತಂತ್ರಜ್ಞಾನ ಮುಂದುವರಿದ ಈ ಕಾಲಘಟ್ಟದಲ್ಲಿ ಅವುಗಳ ಸದ್ಬಳಕೆಯನ್ನು ಅರಿತು-ಬಳಕೆ ಮಾಡಿದಾಗ ಮಾತ್ರ ಅದು ಒಳಿತು ಎಂಬುದನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದಾಗಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾಗರಾಜ ಶೆಟ್ಟಿ ಹೇಳಿದರು. ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ ವಿಭಾಗ ಆಯೋಜಿಸಿದ ‘ಟೆಕ್ಮಂಥನ್ 4.0’ವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]










