ಕುಂದಾಪುರ, (ಮೇ, 29): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಸಂಚಿಕೆಯನ್ನು ಕಾಲೇಜಿನ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್.ಎ. ಪ್ರಭಾಕರ್ ಶರ್ಮ ರವರು ಅನಾವರಣಗೊಳಿಸಿ ಶುಭ ಹಾರೈಸಿದರು . ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು-ಅಖಿಲ ಭಾರತ ಸಾಫ್ಟ್ ಬಾಲ್ ಪಂದ್ಯಾಟ: ಮಂಗಳೂರು ವಿ.ವಿ. ತಂಡ ಪ್ರಕಟ
ಕುಂದಾಪುರ (ಮೇ 10): ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 05 ರಿಂದ 10ರ ತನಕ ನಡೆದ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳ ಕ್ರೀಡಾಪಟುಗಾಗಿ ಆಯೋಜಿಸಿದ ಸಾಫ್ಟ್ ಬಾಲ್ ಆಯ್ಕೆ ಶಿಬಿರದಲ್ಲಿ 14 ಕ್ರೀಡಾಪಟುಗಳು ಆಯ್ಕೆಯಾಗಿ ಮಂಗಳೂರು ವಿ.ವಿ. ತಂಡವನ್ನು ಪ್ರತಿನಿಧಿಸಲಿದ್ದಾರೆ. ಮೂಡುಬಿದಿರೆಯ ಮಹಾವೀರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಅಕ್ಷಿತ್ ರೈ ಈ ಸಾಫ್ಟ್ ಬಾಲ್ ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಲ್ಲಿದ್ದು, […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಸಮಾರೋಪ
ಕುಂದಾಪುರ (ಮೇ 09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತ ನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಶ್ರೀ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದು, ಅನಿಸಿಕೆಯ ಮಾತುಗಳನ್ನಾಡಿದರು. […]
ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು
ಕುಂದಾಪುರ (ಏಪ್ರಿಲ್ 30): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಮನಿಷ್ ಆಸ್ಪತ್ರೆಯ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ| ಪ್ರಮೀಳಾ ನಾಯಕ್ರವರು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ಮಾತನಾಡಿ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ. 26): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶೇಷ ಉಪನ್ಯಾಸ
ಕುಂದಾಪುರ (ಏಪ್ರಿಲ್ 24): ಬದುಕು ಭಾವನೆಗಳಿಂದ ಹೊರತಾದಾಗ ಅದು ಬಂಡೆಗಲ್ಲಿನoತಾಗುತ್ತದೆ ಹಾಗಾಗಿ ಬದುಕಿಗೆ ಭಾವನೆಗಳ ಆವರಣ-ಹೂರಣಗಳಿರಬೇಕು. ಆ ಭಾವನಾತ್ಮಕ ಬಂಧುಗಳಾದ ಹೆತ್ತ ತಾಯಿ, ಜನ್ಮಕೊಟ್ಟ ತಂದೆ, ವಿದ್ಯೆ ನೀಡಿದ ಗುರುವಿನ ನಡುವೆ ಭಾವನೆಗಳು ಬೆಸೆಯುವಂತಾದಾಗ ಜೀವನದ ಮೌಲ್ಯ ತಿಳಿಯುತ್ತದೆ ಎಂದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತಕ ಶ್ರೀ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: CA,CS,CMA ಕೋರ್ಸ್ ಗಳ ಆರಂಭ
ಕುಂದಾಪುರ( ಏ.18): ವಾಣಿಜ್ಯ ವಿಭಾಗದ ಉನ್ನತ ಶ್ರೇಣಿ ಪದವಿಗಳಾದ CA,CS,CMA ಕೋರ್ಸುಗಳನ್ನು ಮಾಡಲು ಸುವರ್ಣ ಅವಕಾಶವನ್ನು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ನೀಡುತ್ತಿದೆ. ಇಲ್ಲಿನ ಪ್ರೊಫೆಷನಲ್ ಕೋರ್ಸ್ ವಿಭಾಗವು ದಿನಾಂಕ 02 ಮೇ 2024 ರಿಂದ ತಮ್ಮ ನೂತನ ಬ್ಯಾಚ್ಗಳನ್ನು ಪ್ರಾರಂಭಿಸಿ, ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಬಗೆಗಿನ ವಿಶೇಷ ತರಬೇತಿಗಳನ್ನು ನಿರಂತರವಾಗಿ ಕೊಡಲು ನಿರ್ಧರಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳಿಂದ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷೀನ್ ಕೊಡುಗೆ
ಕುಂದಾಪುರ (ಏಪ್ರಿಲ್ 01): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ಕಾಲೇಜಿಗೆ ಕೊಡಮಾಡಿದ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷೀನ್ನನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ವೀಣಾ ಭಟ್ ಹಾಗೂ ಡಾ| ದೀಪಾ, ಪ್ರಾಕ್ತನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ವಿದ್ಯಾವತಿ […]
ಡಾI ಬಿ. ಬಿ ಹೆಗ್ಡೆ ಕಾಲೇಜು : ಮತದಾನ ಜಾಗೃತಿ ಅಭಿಯಾನ
ಕುಂದಾಪುರ(ಏ.04):ಇಲ್ಲಿನ ಡಾI ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 04 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ್ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ […]
ಬಿ. ಬಿ. ಹೆಗ್ಡೆ ಕಾಲೇಜು: “ಜಲ ಜಾಗೃತಿ ತೇರು”
ಕುಂದಾಪುರ (ಮಾರ್ಚ್ 28) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಜಲ ಜಾಗೃತಿ ಅಭಿಯಾನದ ಅಂಗವಾಗಿ “ಜಲ ಜಾಗೃತಿ ತೇರು” ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಜಲ ಜಾಗೃತಿ ರಥವನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ಉದ್ಘಾಟಿಸಿ, ಸಮಸ್ತ ಜೀವ ಜಗತ್ತಿನ ಜೀವಾಮೃತ ನೀರು, […]










