ಕುಂದಾಪುರ (ಅ,31 ): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್ನಿoದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
Tag: bbhc
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಹಸ್ರ ವಿದ್ಯಾರ್ಥಿಗಳ ಕಂಠ ಸಿರಿಯಲ್ಲಿ ಕೋಟಿ ಕಂಠ ಗಾಯನ
ಕುಂದಾಪುರ( ಅ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ‘ಕೋಟಿ ಕಂಠ ಗಾಯನ’ದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಕ್ಷಿತ್ ರಾವ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಹಾಗೂ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕನ್ನಡ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಕನ್ನಡ ಮಾತೆಗೆ […]
ಕುಂದಾಪುರ: ಡಾ | ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ಅ,27): ನೆಲದ ಸೊಗಡಿನ ಹಬ್ಬ ದೀಪಾವಳಿ. ಇದೊಂದು ಜನಪದ ಆಚರಣೆ, ಕೃಷಿ ಸಂಸ್ಕೃತಿಯನ್ನು ಬಿಂಬಿಸುದರ ಜೊತೆಗೆ ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಎಂದು ಹಿರಿಯ ಜಾನಪದ ಕಲಾವಿದರಾದ ಶ್ರೀ ನಾಗರಾಜ ಪಾಣ ಮೂಡುವಾಲ್ತೂರು ಅವರು ಹೇಳಿದರು. ಅವರು ಅಕ್ಟೊಬರ್25 ರಂದು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ “ದೀಪಾವಳಿ ಆಚರಣೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಅಂಬಿಗರ ಚೌಡಯ್ಯನ ವಚನಗಳ ವಿಚಾರ ಧಾರೆಗಳ ಕುರಿತು ಉಪನ್ಯಾಸ
ಕುಂದಾಪುರ (ಅ,22) : ಅಸ್ಪ್ರಶ್ಯತೆ, ಆಹಾರ ಪದ್ಧತಿ ಇವುಗಳಿಗೆ ಮಹತ್ವ ಕೊಡದೆ ಗುಣಕ್ಕೆ ಮಹತ್ವಕೊಡಬೇಕೆಂಬ ನಿಲುವುಗಳು ಮತ್ತು ಧಾರ್ಮಿಕ ಚಿಂತನೆಯನ್ನು ತನ್ನದೇ ಆದ ನೆಲೆಯಲ್ಲಿ ಪ್ರಶ್ನಿಸಿ ಹಲವು ಸಮಾಜ ಸುಧಾರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಅಂಬಿಗರ ಚೌಡಯ್ಯನವರ ವಚನಗಳ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ| ಎಚ್.ಕೆ. ವೆಂಕಟೇಶ್ ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾನಿಲಯ ಅಂಬಿಗರ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಅ,17):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳ ಜೊತೆಗೆ ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಗಣಕ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮವನ್ನು ಅ .15 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ […]
ಶಿಕ್ಷಣದಿಂದ ಜಗತ್ತನ್ನೇ ಬದಲಾಯಿಸಲು ಸಾಧ್ಯ: ಸುಪ್ರೀಯಾ ಕಾಮತ್ ಬ್ಯಾನರ್ಜಿ
ಕುಂದಾಪುರ (ಅ.15):ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಶಿಕ್ಷಣ ನಮ್ಮ ಬದುಕನ್ನು ಬದಲಾಯಿಸುವುದರ ಜೊತೆಗೆ ಇಡೀ ಜಗತ್ತನ್ನೇ ಬದಲಿಸುವ ಶಕ್ತಿಯನ್ನು ಹೊಂದಿದೆ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಇದರ ಮಾನವ ಸಂಪನ್ಮೂಲ ವಿಭಾಗದ ನಿವೃತ್ತ ಅಧಿಕಾರಿ ಕುಂದಾಪುರ ಮೂಲದ ಶ್ರೀಮತಿ ಸುಪ್ರೀಯಾ ಕಾಮತ್ ಬ್ಯಾನರ್ಜಿ ಹೇಳಿದರು. ಅವರು ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ವಲಯದ ವತಿಯಿಂದ ಹಮ್ಮಿಕೊಂಡ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ […]
ನಮ್ಮ ನಡಿಗೆ ಗ್ರಾಮದೆಡೆಗೆ-ಸ್ವಾತಂತ್ರ್ಯಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ “ಹೊಂಬೆಳಕು”
ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಗಾoಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು. […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]










