ಕುಂದಾಪುರ(ಸೆ,21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ ಆಶ್ರಯದಲ್ಲಿ ಸೆ .21 ರಂದು ನಡೆದ ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ (Faculty Development Programme) ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಸ್.ಎಮ್.ಎಸ್. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್, ಶಿಕ್ಷಕರಿಗೆ ಬೇಕಾದ ಗುಣಗಳು ಮತ್ತು ತರಗತಿಯ ಒಳಗೆ ಮತ್ತು ಹೊರಗೆ ಶಿಕ್ಷಕರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಬೇರೆ-ಬೇರೆ ಚಟುವಟಿಕೆಗಳ ಮೂಲಕ […]
Tag: bbhc
ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
ಕುಂದಾಪುರ(ಸೆ,20): ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಸತತ 4 ಬಾರಿ ಪ್ರಥಮ ಸ್ಥಾನವನ್ನು ಪಡೆದಿರುವ ಕುಂದಾಪುರದ ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ -ಶಿಖರ ಇದರ 2020-21 ನೆ ಸಾಲಿನ ಸಂಚಿಕೆ ಯನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಇತ್ತೀಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವದ ಸಭಾ ಕಾರ್ಯಕ್ರದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮoಗಳೂರಿನ ಡಾ| […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಓಣo ಸಂಭ್ರಮಾಚರಣೆ
ಕುoದಾಪುರ : (ಸೆ,16) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ಓಣಂ ಹಬ್ಬವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ, ಶ್ರೀಮತಿ ರೇವತಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ
ಕುಂದಾಪುರ (ಸೆ. 14) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಅಭಿಜ್ಞಾ ವಿಸ್ಡಮ್ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿ ಲಭಿಸಿದೆ. ಮಂಗಳೂರಿನ ಅಭಿಜ್ಞಾ ಎಜುಕೇಷನ್ ಸಂಸ್ಥೆ ಈ ಪ್ರಶಸ್ತಿಯನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ. 05, 2022ರಂದು ಮಂಗಳೂರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.
ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ನ್ಯಾಕ್ “B++’’ಗ್ರೇಡ್ ಮಾನ್ಯತೆ
ಕುಂದಾಪುರ (ಆ,24):ಕುಂದಾಪುರ ಎಜುಕೇಶನ್ ಸೊಸೈಟಿ(ರಿ.), ಪ್ರವರ್ತಿತ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ಯುಜಿಸಿ “ನ್ಯಾಕ್’ ಸಂಸ್ಥೆಯು “B++’ ಗ್ರೇಡ್ ಮಾನ್ಯತೆ ನೀಡಿದೆ. ಹೊಸ ಮಾನ್ಯತಾ ಕ್ರಮದಲ್ಲಿ ಸಿಜಿಪಿಎ 2.92/4. ಸಂಸ್ಥೆ ಪಡೆದಿದ್ದು ಮಂಗಳೂರು ವಿ ವಿ ವ್ಯಾಪ್ತಿಗೆ ಒಳಪಟ್ಟಿರುವ ಅನುದಾನ ರಹಿತ ಶಿಕ್ಷಣ ಸಂಸ್ಥೆಯೊಂದು ಕೇವಲ 11 ವರ್ಷಗಳಲ್ಲಿ ಮಾಡಿದ ಸಾಧನೆಗೆ ಮೊಟ್ಟ ಮೊದಲ ಬಾರಿಗೆ B++ Grade ಬಂದಿರುವುದು ಬಹಳ ವಿಶೇಷವಾಗಿದೆ ಎಂಬುದಾಗಿ ಕಾಲೇಜು ಪ್ರಕಟಣೆಯಲ್ಲಿ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕುಂದಾಪುರ(ಜು,27): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಬಸ್ರೂರಿನ ಶ್ರೀ ದೀಪಕ್ ಕುಮಾರ್ರವರು ವಿದ್ಯಾರ್ಥಿಗಳಿಗೆ ಸೈನ್ಯದ ಸೇವೆಯ ಕುರಿತು ತಿಳಿಸುವುದರ ಜೊತೆಗೆ ಸೈನ್ಯಕ್ಕೆ ಸೇರಲು ಬೇಕಾದ ಸಲಹೆಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಅಧ್ಯಕ್ಷರಾಗಿ ಉಪಸ್ಥಿತರಿದ್ದರು,.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಪ್ರಾಸ್ತಾವಿಕ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ರಕ್ಷಕ -ಶಿಕ್ಷಕ ಸಭೆ
ಕುಂದಾಪುರ(ಜು,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಕ್ಷಕ – ಶಿಕ್ಷಕ ಸಂಘದ ಸದಸ್ಯರಿಗೆ ನ್ಯಾಕ್ ಪೂರ್ವಭಾವಿ ಸಭೆ ಜು,26 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ‘ ಈ ಕಾರ್ಯಕ್ರಮದಲ್ಲಿ ನ್ಯಾಕ್ ಟೀಮ್ ಭೇಟಿಯ ಕುರಿತು ಚರ್ಚಿಸಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಶೀಘ್ರವೇ ಕಾಲೇಜಿಗೆ ನ್ಯಾಕ್ ಟೀಮ್ ಭೇಟಿ ನೀಡಲಿದ್ದು .ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಗದ್ದೆ ನಾಟಿ ಪ್ರಾತ್ಯಕ್ಷಿಕೆ
ಕುಂದಾಪುರ : ಜುಲೈ (27): : ಕಾಲೇಜಿನ ವಾಣಿಜ್ಯ ವಿಭಾಗ, ಸಮುದಾಯ ಸೇವಾ ಕೇಂದ್ರ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಗದ್ದೆ ನಾಟಿ ಕಾರ್ಯಕ್ರಮವನ್ನು ಜು,24 ರ ಭಾನುವಾರದಂದು ಹಮ್ಮಿಕೊಳ್ಳಲಾಯಿತು. ಶ್ರೀ ಶಂಕರ ಪೂಜಾರಿ ಆನಗಳ್ಳಿ ಇವರ ಮಾರ್ಗದರ್ಶನದಲ್ಲಿ ಆನಗಳ್ಳಿಯ ಗುಮ್ಮನಕಟ್ಟೆ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ನಾಟಿ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಫುಡ್ ಆರ್ಟ್ -2K22
ಕುಂದಾಪುರ (ಜು,25): ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕಾಲೇಜು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ಗಮನ ಸೆಳೆದಿದೆ. ಈ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿರುವುದು ಹಾಗೂ 4೦೦ ಕ್ಕೂ ಮಿಕ್ಕಿ ವಿವಿಧ ಬಗೆಯ ಖಾದ್ಯಗಳನ್ನು ವಿದ್ಯಾರ್ಥಿಗಳು ಸೀಮಿತ ಅವಧಿಯಲ್ಲಿ ತಯಾರಿಸಿರುವುದು ಶ್ಲಾಘನೀಯ ಎಂದು ಬಸ್ರೂರಿನ ಪ್ರತಿಭಾ ಟುಟೋರಿಯಲ್ ನ ಸಂಚಾಲಕ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುoದಾಪುರ 🙁 ಜು,21) : ಕಾಲೇಜಿಗೆ ಸ್ಥಳದಾನ ಮಾಡಿದ ಸಂಸ್ಥೆಯ ಮಹಾಪೋಷಕರಾದ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ-ಪುಷ್ಪಾರ್ಚನೆ ಗೈದು, ಸಂಸ್ಮರಣಾ ನುಡಿಗಳನ್ನಾಡಿದರು. ವಿಭಾಗದ ಮುಖ್ಯಸ್ಥರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ […]










