ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.
Tag: bbhc
ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕ ಬಿಡುಗಡೆ
ಕುಂದಾಪುರ (ಜು,8):ಮಂಗಳೂರು ವಿ.ವಿ ಬಿ.ಕಾಂ ದ್ವೀತಿಯ ಸೆಮೆಸ್ಟರ್ ಹೊಸ ಶಿಕ್ಷಣ ನೀತಿಗೆ ಅನುಗುಣವಾದ ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕವನ್ನು ಬೈಂದೂರು ಶಾಸಕ & ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿ ತಮ್ಮ ಗ್ರಹ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ತ್ರಿಶಾ ಕಾಲೇಜು ಉಡುಪಿ ಇದರ ಉಪನ್ಯಾಸಕರಾದ ಶ್ರೀ ಸಂತೋಷ ಶೆಟ್ಟಿಯವರು ಈ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ): ರಕ್ತದಾನ ಶಿಬಿರದ ಸಂಚಾಲಕರಾಗಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
ಕುಂದಾಪುರ (ಜು,8); ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.), ಇದರ ದಶಮಾನೋತ್ಸವ ವರ್ಷದ ಮೊದಲ ಕಾರ್ಯಕ್ರಮವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದ ಸಂಚಾಲಕರಾಗಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು, ಸಂಸ್ಕೃತಿ ಚಿಂತಕರು, ಯುವ ಸಂಶೋಧಕ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆಸ ಸಂಘದ ಸಭೆಯಲ್ಲಿ ಸರ್ವಾನು ಮತದಿಂದ ಇವರನ್ನು ಆಯ್ಕೆಮಾಡಲಾಗಿದ್ದು, ಇವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘ ಅಭಿನಂದನೆ ಸಲ್ಲಿಸಿದೆ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1200 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಆರಂಭಗೊಂಡ ಕಿರು ಅವಧಿಯಲ್ಲಿ ಶೈಕ್ಷಣಿಕವಾಗಿ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿ.ಸಿ.ಎ. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಕುಂದಾಪುರ (ಜೂ,10): ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ,ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶೈಕ್ಷಣಿಕ ,ಸಾಹಿತ್ಯ ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತಿದ್ದು ,ವಿದ್ಯಾರ್ಥಿಗಳ ಕಲಿಕಾ ಆಸಕ್ತಿಗೆ ಪೂರಕವಾದ ಅವಕಾಶವನ್ನು ಸಂಸ್ಥೆ ಕಲ್ಪಿಸುತ್ತಿದೆ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ (ಜೂ,10):. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾರ್ಷಿಕ ಕ್ರೀಡಾಕೂಟದಲ್ಲಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರದ ನಿರ್ದೇಶಕರಾದ ಶ್ರೀ ಕುಸುಮಾಕರ ಶೆಟ್ಟಿ ,ಸಂಚಲನ ಗ್ರೂಪ್ ಕುಂದಾಪುರದ ಅಧ್ಯಕರಾದ ಅಕ್ಷತ್ ಶೆಟ್ಟಿ ,ಕಾಲೇಜಿನ ದೈಹಿಕ ಶಿಕ್ಷಣ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಮೆಗಾ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ
ಕುಂದಾಪುರ(ಜೂ,08): ಸಿ.ಎ. ಸಿ ಎಸ್ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು.ನಿರಂತರ ಪರಿಶ್ರಮ ಹಾಗೂ ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ ಸಿ.ಎಸ್ ಕನಸ್ಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ ಸಿ ಎ ಐ ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ ಕೋತಾ ಎಸ್ ಶ್ರೀನಿವಾಸ ಹೇಳಿದರು. ಅವರು ಐ ಸಿ ಎ ಐ ಉಡುಪಿ ಶಾಖೆಯ ಎಸ್ ಐ ಆರ್ ಸಿ ಹಾಗೂ ಕಾಲೇಜಿನ ವಾಣಿಜ್ಯ ವಿಭಾಗ ಜೂ,8 […]
ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಜೂ,5): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನ ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 14 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಮಯ ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು : ಪ್ರತಿಭಾ ಪ್ರದರ್ಶನ – ನೆಲದ ಕಲೆ & ಸಂಸ್ಕೃತಿಯನ್ನುಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಮೇಲಿದೆ -ಶ್ರೀ ಭಾಸ್ಕರ ಕೊಗ್ಗ ಕಾಮತ್
ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು. ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. […]










