ಕುಂದಾಪುರ : ಜುಲೈ (27): : ಕಾಲೇಜಿನ ವಾಣಿಜ್ಯ ವಿಭಾಗ, ಸಮುದಾಯ ಸೇವಾ ಕೇಂದ್ರ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಗದ್ದೆ ನಾಟಿ ಕಾರ್ಯಕ್ರಮವನ್ನು ಜು,24 ರ ಭಾನುವಾರದಂದು ಹಮ್ಮಿಕೊಳ್ಳಲಾಯಿತು. ಶ್ರೀ ಶಂಕರ ಪೂಜಾರಿ ಆನಗಳ್ಳಿ ಇವರ ಮಾರ್ಗದರ್ಶನದಲ್ಲಿ ಆನಗಳ್ಳಿಯ ಗುಮ್ಮನಕಟ್ಟೆ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ನಾಟಿ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ […]
Tag: bbhc
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಫುಡ್ ಆರ್ಟ್ -2K22
ಕುಂದಾಪುರ (ಜು,25): ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕಾಲೇಜು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ಗಮನ ಸೆಳೆದಿದೆ. ಈ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿರುವುದು ಹಾಗೂ 4೦೦ ಕ್ಕೂ ಮಿಕ್ಕಿ ವಿವಿಧ ಬಗೆಯ ಖಾದ್ಯಗಳನ್ನು ವಿದ್ಯಾರ್ಥಿಗಳು ಸೀಮಿತ ಅವಧಿಯಲ್ಲಿ ತಯಾರಿಸಿರುವುದು ಶ್ಲಾಘನೀಯ ಎಂದು ಬಸ್ರೂರಿನ ಪ್ರತಿಭಾ ಟುಟೋರಿಯಲ್ ನ ಸಂಚಾಲಕ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುoದಾಪುರ 🙁 ಜು,21) : ಕಾಲೇಜಿಗೆ ಸ್ಥಳದಾನ ಮಾಡಿದ ಸಂಸ್ಥೆಯ ಮಹಾಪೋಷಕರಾದ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ-ಪುಷ್ಪಾರ್ಚನೆ ಗೈದು, ಸಂಸ್ಮರಣಾ ನುಡಿಗಳನ್ನಾಡಿದರು. ವಿಭಾಗದ ಮುಖ್ಯಸ್ಥರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ […]
ಸಿ.ಎ ಪರೀಕ್ಷೆಯಲ್ಲಿ ತನುಷಾ ಡಿ.ರಾವ್ ಉತ್ತೀರ್ಣ
ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.
ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕ ಬಿಡುಗಡೆ
ಕುಂದಾಪುರ (ಜು,8):ಮಂಗಳೂರು ವಿ.ವಿ ಬಿ.ಕಾಂ ದ್ವೀತಿಯ ಸೆಮೆಸ್ಟರ್ ಹೊಸ ಶಿಕ್ಷಣ ನೀತಿಗೆ ಅನುಗುಣವಾದ ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕವನ್ನು ಬೈಂದೂರು ಶಾಸಕ & ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿ ತಮ್ಮ ಗ್ರಹ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ತ್ರಿಶಾ ಕಾಲೇಜು ಉಡುಪಿ ಇದರ ಉಪನ್ಯಾಸಕರಾದ ಶ್ರೀ ಸಂತೋಷ ಶೆಟ್ಟಿಯವರು ಈ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ): ರಕ್ತದಾನ ಶಿಬಿರದ ಸಂಚಾಲಕರಾಗಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
ಕುಂದಾಪುರ (ಜು,8); ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.), ಇದರ ದಶಮಾನೋತ್ಸವ ವರ್ಷದ ಮೊದಲ ಕಾರ್ಯಕ್ರಮವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದ ಸಂಚಾಲಕರಾಗಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು, ಸಂಸ್ಕೃತಿ ಚಿಂತಕರು, ಯುವ ಸಂಶೋಧಕ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆಸ ಸಂಘದ ಸಭೆಯಲ್ಲಿ ಸರ್ವಾನು ಮತದಿಂದ ಇವರನ್ನು ಆಯ್ಕೆಮಾಡಲಾಗಿದ್ದು, ಇವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘ ಅಭಿನಂದನೆ ಸಲ್ಲಿಸಿದೆ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1200 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಆರಂಭಗೊಂಡ ಕಿರು ಅವಧಿಯಲ್ಲಿ ಶೈಕ್ಷಣಿಕವಾಗಿ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿ.ಸಿ.ಎ. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಕುಂದಾಪುರ (ಜೂ,10): ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ,ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶೈಕ್ಷಣಿಕ ,ಸಾಹಿತ್ಯ ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತಿದ್ದು ,ವಿದ್ಯಾರ್ಥಿಗಳ ಕಲಿಕಾ ಆಸಕ್ತಿಗೆ ಪೂರಕವಾದ ಅವಕಾಶವನ್ನು ಸಂಸ್ಥೆ ಕಲ್ಪಿಸುತ್ತಿದೆ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ (ಜೂ,10):. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾರ್ಷಿಕ ಕ್ರೀಡಾಕೂಟದಲ್ಲಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರದ ನಿರ್ದೇಶಕರಾದ ಶ್ರೀ ಕುಸುಮಾಕರ ಶೆಟ್ಟಿ ,ಸಂಚಲನ ಗ್ರೂಪ್ ಕುಂದಾಪುರದ ಅಧ್ಯಕರಾದ ಅಕ್ಷತ್ ಶೆಟ್ಟಿ ,ಕಾಲೇಜಿನ ದೈಹಿಕ ಶಿಕ್ಷಣ […]










