ಕುಂದಾಪುರ ( ಡಿ.8) : ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯ ಉದ್ಘಾಟನೆ ಡಿ.18. ರಂದು ನೆರವೇರಿತು. ಕುಂದಾಪುರ ಪೋಲಿಸ್ ಉಪನಿರೀಕ್ಷಕರಾದ ಶ್ರೀ ಸದಾಶಿವ್ ಆರ್. ಗೌರೋಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಈ ವಯೋಮಾನದ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾದ ತರಬೇತಿಯ ಅವಕಾಶ ಈ ಕಾಲೇಜಿನಲ್ಲಿ ದೊರಕಿದೆ, ಅದನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರಿ ಪಡೆಯಿರಿ. ಒಳ್ಳೆಯ ಗುರಿ ನಿಮ್ಮದಿರಲಿ, ಅದನ್ನು ಸಾಧಿಸುವ ಶ್ರದ್ಧೆಯಿರಲಿ, ಖಂಡಿತ […]
Tag: bbhc
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಎನ್.ಸಿ .ಸಿ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಡಿಸೆಂಬರ್ 15) : ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಸಿ .ಸಿ ಘಟಕದ 2021-22 ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಭಾರತೀಯ ಸೇನಾಪಡೆಯ ಯೋಧ ಪ್ರಶಾಂತ್ ದೇವಾಡಿಗ ಡಿ.15 ರಂದು ಉದ್ಘಾಟಿಸಿ ಶುಭಹಾರೈಸಿದರು .ಹಾಗೆಯೇ ಯುವ ಸಮುದಾಯಕ್ಕೆ ದೇಶ ಸೇವೆಗೈಯಲು ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಸೈನ್ಯ ಸೇರಲು ಯುವಕರು ಮಂದಾಗಬೇಕು. ನಮ್ಮ ಉಡುಪಿ- ಕುಂದಾಪುರ ಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುವಂತಾಗಬೇಕು ಎಂದು ಅವರು ಹೇಳಿದರು. ತನ್ನ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಯೋಧರಿಗೆ ನಮನ
ಕುಂದಾಪುರ ( ಡಿಸೆಂಬರ್ 15): ತಮಿಳುನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ದಂಪತಿ ಸೇರಿದಂತೆ, ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಡಿಸೆಂಬರ್ 15ರಂದು ದೀಪ ನಮನ ಸಲ್ಲಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಕೈಯಲ್ಲಿ ಮೇಣದ ದೀಪ ಬೆಳಗಿಸಿ, ದೇಶಭಕ್ತಿ ಗೀತೆ ಹಾಡುವುದರ ಮೂಲಕ ಹುತಾತ್ಮರ ಆತ್ಮಕ್ಕೆ ದೀಪ ಪ್ರಜ್ವಲನದ ಶ್ರದ್ಧಾಂಜಲಿ ಸಲ್ಲಿಸಿದ್ದರು. ಈ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಯೂತ್ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ( ಡಿ,10):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ 2021-22 ನೇ ಸಾಲಿನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ವೈ. ಸೀತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು : ಐವರಿಗೆ ಚಿನ್ನದ ಪದಕ
ಕುಂದಾಪುರ(ಡಿ,9): ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಪೂರೈಸಿದ ಐದು ವಿದ್ಯಾರ್ಥಿಗಳು ಪೈನಾನ್ಶಿಯಲ್ ಎಕೌಂಟಿಗ್ನಲ್ಲಿ ಮುನ್ನೂರಕ್ಕೆ ಮುನ್ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಜಿಲ್ಲೆಯಲ್ಲಿಯೇ ಇದೊಂದು ವಿಶಿಷ್ಠ ಸಾಧನೆಗೆ ಕಾಲೇಜು ಸಾಕ್ಷಿಯಾಗಿದೆ. ಕಾಲೇಜಿನ ಸಾಧನೆಯ ಕಿರೀಟಕ್ಕೆ ಐದು ಚಿನ್ನದ ಗರಿ ಎಂದು ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ. ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಹಾಗೂ ಅನನ್ಯ ಈ ಸಾಧನೆಗೈದ ವಿದ್ಯಾರ್ಥಿನಿಯರು. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಏಡ್ಸ್ ಕುರಿತು ಅರಿವು ಮೂಡಿಸುವ ಭಿತ್ತಿ ಚಿತ್ರ ಸ್ಪರ್ಧೆ
ಕುಂದಾಪುರ (ಡಿ,6): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಹಾಗೂ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ- 2021 ಮತ್ತು 75ನೇ ವರ್ಷದ ಸ್ವತಂತ್ರ ದಿನವನ್ನು ಆಚರಿಸುವ (New India @75) ಪ್ರಯುಕ್ತ ಹೆಚ್ಐವಿ / ಏಡ್ಸ್ ಬಗ್ಗೆ ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯನ್ನು […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ
ಕುಂದಾಪುರ (ಡಿ,06): ಅಪರಾಧಗಳು ಸಂಭವಿಸದಂತೆ ಎಚ್ಚರವಹಿಸುವುದು ನಮ್ಮ ಕರ್ತವ್ಯ.ಬದುಕಿನ ಭದ್ರತೆಗೆ ನೀವೆಲ್ಲರೂ ಪೋಲಿಸ್ನಂತೆಯೇ ಎಚ್ಚರದಲ್ಲಿ ಇರಬೇಕು. ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಬದಲಾಗಿ ಅದನ್ನು ದುರುಪಯೋಗ ಮಾಡಿಕೊಳ್ಳಬಾರದು. ಅಪರಾಧಗಳು ನಮ್ಮ ಬದುಕಿನ ಕನಸನ್ನು ಕಸಿದುಕೊಳ್ಳುತ್ತವೆ. ಹಾಗಾಗಿ ಕೆಟ್ಟದನ್ನು ನಾವು ಯೋಚಿಸಬಾರದು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಕುಂದಾಪುರ ಪೋಲಿಸ್ ಉಪಾಧೀಕ್ಷಕರಾದ ಶ್ರೀಕಾಂತ್ ಕೆ. ಕರೆ ನೀಡಿದರು. ಅವರು ಬಿ.ಬಿ. ಹೆಗ್ಡೆ ಕಾಲೇಜಿನವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜನೆಯ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿವಿಧ ವೇದಿಕೆಗಳ ಉದ್ಘಾಟನೆ
ಕುಂದಾಪುರ (ಡಿ, 02) : ವಿದ್ಯಾರ್ಥಿ ಬದುಕಿನಲ್ಲಿ ವೈವಿಧ್ಯಮಯ ವೇದಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇರುವ ಸಮಯವನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು. ಔದ್ಯೋಗಿಕವಾಗಿ ಎತ್ತರದ ಸ್ಥಾನವೇರಲು ಇದೆಲ್ಲ ಬಹುದೊಡ್ಡ ಮೆಟ್ಟಿಲಾಗುತ್ತದೆ. ಈ ಕಾಲೇಜು ಅಪರೂಪದ ಈ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವುದು ಶ್ಲಾಘನೀಯ, ಇದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್, ಉಡುಪಿ ಘಟಕದ ಅಧ್ಯಕ್ಷರಾದ ಡಾ.ಗಣೇಶ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಡಿಸೆಂಬರ್ 02ರಂದು ಉದ್ಘಾಟಿಸಿ […]
ಯುವ ಜನಾಂಗ ದಾರಿ ತಪ್ಪಬಾರದು : ಶ್ರೀಮತಿ ನಳಿನಾಕ್ಷಿ
ಕುಂದಾಪುರ (ಡಿ ,2): ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ ತಪ್ಪಬಾರದು. ಜೀವನದ ನಿರ್ಣಾಯಕ ಘಟ್ಟದಲ್ಲಿ ಲೈಂಗಿಕ ಆಸಕ್ತಿಗಳು ಬದುಕನ್ನು ಪ್ರಪಾತಕ್ಕೆ ತಳ್ಳುವಂತಾಬಾರದು ಎಂದು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆಯಂದು ಆಯೋಜಿಸಿದ ಏಡ್ಸ್ ಜಾಗೃತಿ […]
ಸಿಎಸ್ಇಇಟಿ ಪರೀಕ್ಷಾ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]










