ಕುಂದಾಪುರ (ಡಿ, 02) : ವಿದ್ಯಾರ್ಥಿ ಬದುಕಿನಲ್ಲಿ ವೈವಿಧ್ಯಮಯ ವೇದಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇರುವ ಸಮಯವನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು. ಔದ್ಯೋಗಿಕವಾಗಿ ಎತ್ತರದ ಸ್ಥಾನವೇರಲು ಇದೆಲ್ಲ ಬಹುದೊಡ್ಡ ಮೆಟ್ಟಿಲಾಗುತ್ತದೆ. ಈ ಕಾಲೇಜು ಅಪರೂಪದ ಈ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವುದು ಶ್ಲಾಘನೀಯ, ಇದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್, ಉಡುಪಿ ಘಟಕದ ಅಧ್ಯಕ್ಷರಾದ ಡಾ.ಗಣೇಶ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಡಿಸೆಂಬರ್ 02ರಂದು ಉದ್ಘಾಟಿಸಿ […]
Tag: bbhc
ಯುವ ಜನಾಂಗ ದಾರಿ ತಪ್ಪಬಾರದು : ಶ್ರೀಮತಿ ನಳಿನಾಕ್ಷಿ
ಕುಂದಾಪುರ (ಡಿ ,2): ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ ತಪ್ಪಬಾರದು. ಜೀವನದ ನಿರ್ಣಾಯಕ ಘಟ್ಟದಲ್ಲಿ ಲೈಂಗಿಕ ಆಸಕ್ತಿಗಳು ಬದುಕನ್ನು ಪ್ರಪಾತಕ್ಕೆ ತಳ್ಳುವಂತಾಬಾರದು ಎಂದು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆಯಂದು ಆಯೋಜಿಸಿದ ಏಡ್ಸ್ ಜಾಗೃತಿ […]
ಸಿಎಸ್ಇಇಟಿ ಪರೀಕ್ಷಾ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]
ಡಾ|ಬಸ್ರೂರು ಭುಜಂಗ ಹೆಗ್ಡೆ ಸಂಸ್ಮರಣೆ
ಕುಂದಾಪುರ(ನ,11):ಉದ್ಯಮಿಗಳಾಗಿ ಅನೇಕರಿಗೆ ಉದ್ಯೋಗವನ್ನು ನೀಡಿದ ಡಾ.ಬಿ.ಬಿ. ಹೆಗ್ಡೆಯವರು ವೈದ್ಯರಾಗಿ ಕೂಡ ಸೇವೆ ಸಲ್ಲಿಸಿದವರು. ಸಮಾಜದ ಸಮಸ್ಯೆಗಳಿಗೆ ಶಿಕ್ಷಣದ ಮೂಲಕ ಚಿಕಿತ್ಸೆ ನೀಡುವ ಕಾರ್ಯ ಆರಂಭಿಸಿದ ಡಾ.ಬಿ.ಬಿ. ಹೆಗ್ಡೆಯವರ ಸಂಸ್ಮರಣೆಯನ್ನು ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಗಿತ್ತು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಬೋಧಕ ಬೋಧಕೇತರರು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿದರು. ಉಪನ್ಯಾಸಕಿ ರೇಷ್ಮಾ ಶೆಟ್ಟಿ […]
ಡಾ.ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರ: ಶ್ರೀ ಆರ್. ಉಪೇಂದ್ರ ಶೆಟ್ಟಿ ಯವರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಪುಸ್ತಕಗಳ ಹಸ್ತಾಂತರ
ಕುಂದಾಪುರ (ನ,10): ಕರ್ನಾಟಕದ ಪ್ರಸಿದ್ಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ಬೆಂಗಳೂರಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಇದರ ನಿರ್ದೇಶಕರಾದ ಶ್ರೀ ಉಪೇಂದ್ರ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಉಪಯುಕ್ತ ಮಾಹಿತಿಯುಳ್ಳ ಸರಿಸುಮಾರು ಮೂವತ್ತು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ (ಮರೆಯಾಗುತ್ತಿರುವ ಸಂಪ್ರದಾಯದ ಮೆಲುಕು : ಪ್ರೊ.ಕೆ .ಉಮೇಶ್ ಶೆಟ್ಟಿ)
ಕುಂದಾಪುರ (ನ,07): ನಮ್ಮ ಹಿರಿಯರ ಆಚರಣೆಗಳಲ್ಲಿ ವೈಜ್ಞಾನಿಕ ಅರ್ಥ ಇರುತ್ತದೆ. ಅದನ್ನೆಲ್ಲ ಅನುಸರಿಸಿದ ಕಾರಣಕ್ಕೆಅವರು ಆಯುಷ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಂಡರು. ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕು. ಆ ನಿಟ್ಟಿನಲ್ಲಿ ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಎಲ್ಲಾ ಹಬ್ಬದ ಆಚರಣೆಯ ಮಹತ್ವವನ್ನು ನಮ್ಮ ವಿದ್ಯಾರ್ಥಿಗಳಿಗೆ ತಿಳಿಸುವ ಪ್ರಯತ್ನ ಮಾಡುತಿದ್ದೇವೆ ಎಂದು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ತಿಳಿಸಿದರು. ಅವರು […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ(ನ,2): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ನ,2 ರಂದು ಸಂಗಮ್ ಬಸ್ ನಿಲ್ದಾಣದಿಂದ ಕಾಲೇಜ್ ಕ್ಯಾಂಪಸ್ ತನಕ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್.ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್.ಟಿ.ಎನ್, ಉಪನ್ಯಾಸಕರಾದ ಸುಧಾಕರ್ ಪಾರಂಪಳ್ಳಿ, ಸುಕುಮಾರ […]
ಭಾಷಾಭಿಮಾನದ ಜೊತೆಗೆ ದೇಶಾಭಿಮಾನ ಬೆಳೆಸಿಕೊಳ್ಳಿ: ಬೈಂದೂರು ಚಂದ್ರಶೇಖರ ನಾವಡ (ಬಿ.ಬಿ ಹೆಗ್ಡೆ ಕಾಲೇಜಿನ ಕನ್ನಡಕ್ಕಾಗಿ ನಾವು ಕಾರ್ಯಕ್ರಮ)
ಕುಂದಾಪುರ (ಅ,30): ಪ್ರತಿಯೊಂದು ಭಾಷೆಗೆ ಅದರದ್ದೆ ಆದ ಅಸ್ತಿತ್ವ ಹಾಗೂ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಆ ನೆಲೆಯಲ್ಲಿ ಕನ್ನಡ ಭಾಷಿಕರಾದ ನಾವು ಪುಣ್ಯವಂತರು. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ನಾವು ಉಳಿಸಿ ಬೆಳೆಸಬೇಕು.ಜೊತೆಗೆ ದೇಶಾಭಿಮಾನ, ದೇಶ ಭಕ್ತಿ ,ಸೈನ್ಯದ ಕುರಿತಾದ ಅಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ನಿವ್ರತ್ತ ಯೋಧ ಹಾಗೂ ಸಾಹಿತಿಗಳಾದ ಶ್ರೀ ಚಂದ್ರಶೇಖರ ನಾವಡ ಹೇಳಿದರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ […]
ಬದುಕಿನಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಿ- ಪ್ರೊ. ಕೆ.ಉಮೇಶ್ ಶೆಟ್ಟಿ (ಬಿ.ಬಿ ಹೆಗ್ಡೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮ)
ಕುಂದಾಪುರ(ಅ,28): ವಿದ್ಯಾರ್ಥಿಗಳು ಬದುಕಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಿಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕೆನರಾ ಬ್ಯಾಂಕ್ ವಡೇರಹೊಬಳಿ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ಜಗದೀಶ್ ಪೂಜಾರಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯುತ ಮಾತುಗಳನ್ನಾಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ […]
ಉತ್ತರ ಸಿಗದ ಪ್ರಶ್ನೆ…..
ಅದೇನೋ ಗೊತ್ತಿಲ್ಲ .ಸುಮ್ಮನೆ ಕುಳಿತಾಗಲೆಲ್ಲಾ ನನ್ನನ್ನು ಕಾಡೋ ಪ್ರಶ್ನೆ ನಾನ್ಯಾಕೆ ಇಷ್ಟೊಂದು ಬದಲಾದೆ?ಸಮಯ ನನ್ನನ್ನ ಬದಲಿಸಿತಾ? ಇಲ್ಲ ಸಂದರ್ಭಕ್ಕೆ ತಕ್ಕ ಹಾಗೆ ಬದುಕುತ್ತಿರುವೆನಾ? ಇಲ್ಲ ಬದುಕಿನ ಚಂಚಲತೆ ನನ್ನನು ಬದಲಾಯಿಸಿತಾ? ಬಹುಶಃ ಉತ್ತರ ಸಿಗದ ಪ್ರಶ್ನೆ. ಮೊದಲೆಲ್ಲ ನೋಡಿದ್ದನ್ನೆಲ್ಲ ಅಮ್ಮನ ಬಳಿ ಹಠ ಹಿಡಿದು ಕೊಡಿಸುವಂತೆ ಕೇಳುತ್ತಿದ್ದ ನಾನು ಈವಾಗ ಅವಶ್ಯಕತೆ ಇದ್ದರೂ ಅಮ್ಮನ ಬಳಿ ಕೇಳಲು ಹಿಂಜರಿಕೆ! ಕಾರಣವೇ ಇಲ್ಲದ ಜಗಳ ಆಡ್ತಾ ಇದ್ದೆ ಅಣ್ಣ ತಮ್ಮನ ಜೊತೆ. […]










