ಕುಂದಾಪುರ(ಅ,24): ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು .ತಮ್ಮನ್ನು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾ, ದೇಶದ ಎಲ್ಲಾ ಕಾನೂನುಗಳಿಗೆ ತಾಯಿಯಂತಿರುವ ಸಂವಿಧಾನದ ಗೌರವಿಸುವುದರ ಜೊತೆಗೆ ಕಾನೂನುಗಳ ಅರಿವು ಹೊಂದಿರಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ.ಎಂ. ಜೋಶಿ ಹೇಳಿದರು. ಅವರು ಡಾ|ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ(ರಿ). ಕುಂದಾಪುರ, […]
Tag: bbhc
ಯಶಸ್ಸು ನಿರಂತರ ಪರಿಶ್ರಮದ ಫಲ – ಗಿಳಿಯಾರ್ ( ಡಾ।ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ)
ಕುಂದಾಪುರ (ಅ, 15) : ಈ ಟೀನೇಜಿನ ಮೋಹಗಳು, ನಮ್ಮ ಗುರಿಯೆಡೆಗಿನ ದಾರಿ ತಪ್ಪಿಸಬಾರದು. ಕನಸು ಕಾಣುವುದಷ್ಟೆ ಅಲ್ಲ, ದಿನನಿತ್ಯ ಅದನ್ನೆ ಯೋಚಿಸಬೇಕು, ಅದನ್ನು ಸಾಧಿಸುವ ಮಾರ್ಗವೇ ನಿತ್ಯದ ತಪನ ಆಗಿರಬೇಕು. ಇಂತಹ ಪರಿಶ್ರಮವಿದ್ದರೆ ಮಹತ್ವದ ಕನಸುಗಳು ನನಸಾಗುತ್ತದೆ ಎಂದು ಪತ್ರಕರ್ತ, ಸಾಂಸ್ಕೃತಿಕ ಚಿಂತಕ ವಸಂತ್ ಗಿಳಿಯಾರ್ ಹೇಳಿದರು. ಅವರು ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಯೋಜಿಸಿದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಶಾರದಾ ಪೂಜೆ
ಕುಂದಾಪುರ (ಅ, 11) : ಇಲ್ಲಿನ ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನವರಾತ್ರಿಯ ಆಚರಣೆಯ ಭಾಗವಾಗಿ ಶಾರದಾ ಪೂಜೆ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ ಶುಭಾಶಯ ಕೋರಿ ಸರ್ವರಿಗೂ ಶಾರದಾದೇವಿಯು ಆಯುರಾರೋಗ್ಯ ನೀಡಿ ಕಾಪಾಡಲಿ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕ ಮಹೇಶ್ ನಾಯ್ಕ ಸ್ವಾಗತಿಸಿದರು. ದೈಹಿಕ ಶಿಕ್ಷಣ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಎನ್. ಸಿ.ಸಿ ಕೆಡೆಟ್ ಗಳಿಂದ ಫೈರಿಂಗ್ ಕ್ಯಾಂಪ್ ನಲ್ಲಿ ಉತ್ತಮ ಪ್ರದರ್ಶನ
ಕಾರ್ಕಳ(ಅ,10): ಉಡುಪಿ ಜಿಲ್ಲೆಯ ಕಾರ್ಕಳದ ನಕ್ರೆಯಲ್ಲಿ ನಡೆದ ಎನ್.ಸಿ.ಸಿ ಫೈರಿಂಗ್ ಕ್ಯಾಂಪ್ನಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್. ಸಿ.ಸಿ ಕೆಡೆಟ್ಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಉತ್ತಮ ಫೈರಿಂಗ್ ನಡೆಸಿದ ಏಳು ವಿದ್ಯಾರ್ಥಿಗಳನ್ನು ಕಾಲೇಜಿನ ಬೆಸ್ಟ್ ಫೈರಿಂಗ್ ಕೆಡೆಟ್ ಗಳೆಂದು ಆಯ್ಕೆ ಮಾಡಲಾಗಿದೆ. ಕಾಲೇಜಿನ ಎನ್ಸಿಸಿ ಅಧಿಕಾರಿ ಶಿವರಾಜ್ ಸಿ. ಅರೆಹೊಳೆ ಈ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದು, ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ,ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹಾಗೂ ಕಾಲೇಜಿನ […]
ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಬಿಸಿಎ ವಿದ್ಯಾರ್ಥಿಗಳಿಂದ ಚೈತನ್ಯ ವೃದ್ಧಾಶ್ರಮಕ್ಕೆ ವಾಟರ್ ಪ್ಯೂರಿಫೈರ್ ಕೊಡುಗೆ
ಕುಂದಾಪುರ (ಅ,7): ಇಂದಿನ ವಿದ್ಯಮಾನದಲ್ಲಿ ಇದ್ದ ಹಣವನ್ನು ಸದುಪಯೋಗ ಮಾಡಿಕೊಳ್ಳುದಕ್ಕಿಂತ ದುರುಪಯೋಗ ಮಾಡುವುದೇ ಹೆಚ್ಚು. ದಿನದಿಂದ ದಿನಕ್ಕೆ ವೃದ್ಧಾಶ್ರಮಗಳೂ ಹೆಚ್ಚುತ್ತಲೇ ಇವೆ.ಇದರಿಂದಾಗಿ ಅಲ್ಲಿನ ಚಿಕ್ಕ ಚಿಕ್ಕ ಸಮಸ್ಯೆಗೆ ಪರಿಹಾರಗಳು ದೊರಕುತ್ತಿಲ್ಲ.ಇದನ್ನರಿತ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಬಿಸಿಎ ವಿದ್ಯಾರ್ಥಿಗಳು ಚೈತನ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಾಯವನ್ನು ಮಾಡಿದರು. ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ದಿನ ಹಾಗೂ ಎತ್ನಿಕ್ ಡೇಯಲ್ಲಿ ವಿಜೇತರಾಗಿ ಪಡೆದ ಹಣದಿಂದ ಚೈತನ್ಯ ವೃದ್ಧಾಶ್ರಮಕ್ಕೆ ಸುಮಾರು ಐದು […]
ಡಾ. ಬಿ.ಬಿ. ಕಾಲೇಜು ಕುಂದಾಪುರ: ಎನ್.ಸಿ.ಸಿ ಕೆಡೇಟ್ಸ್ಗಳಿಗೆ ಶಸ್ತ್ರಾಭ್ಯಾಸ ತರಬೇತಿ
ಕುಂದಾಪುರ (ಅ,07): ಇಲ್ಲಿನ ಡಾ. ಬಿ.ಬಿ. ಕಾಲೇಜಿನ ಎನ್.ಸಿ.ಸಿ ಕೆಡೇಟ್ಸ್ಗಳಿಗೆ ಶಸ್ತ್ರಾಭ್ಯಾಸ ತರಬೇತಿಯನ್ನು ತರಬೇತುದಾರರಾದ ಬಾಲ್ರಾಜ್ ಮತ್ತು ಮಹಿಂದ್ರಾ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಬೋಧಕ ಮತ್ತು ಬೋಧಕೇತರು, ಎನ್ಸಿಸಿ ಕೆಡೇಟ್ಸ್ಗಳು ಉಪಸ್ಥಿತರಿದ್ದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ : ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಭೇಟಿ
ಕುಂದಾಪುರ (ಅ, 06) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ರವರು ಅಕ್ಟೋಬರ್,06 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆಯನ್ನು ಬಿಡುಗಡೆಗೊಳಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರಿನ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರಾದ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಫಿಟ್ ಇಂಡಿಯಾ ರನ್ 2.0 ಜಾಥಾ
ಕುಂದಾಪುರ (ಸೆ, 25) : ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ-Azadi ka Amruth Mahotsav- India @ 75 “ಫಿಟ್ ಇಂಡಿಯಾ ಫ್ರೀಡಂ ರನ್-2.0” ಜಾಥಾವನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್, 25 ರಂದು ಹಮ್ಮಿಕೊಳ್ಳಲಾಯಿತು. ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ ಯವರು ಫಿಟ್ ಇಂಡಿಯಾ ರನ್ 2.0 ಜಾಥಕ್ಕೆ […]
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ಅನಾವರಣ (ನಾಲ್ಕು ವರ್ಷ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಪ್ರಶಸ್ತಿ)
ಕುಂದಾಪುರ (ಅ, 02) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 2019-20ರ ಶೈಕ್ಷಣಿಕ ವರ್ಷದ ‘ಶಿಖರ’ ವಾರ್ಷಿಕ ಸಂಚಿಕೆಯನ್ನು ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ. ಯವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ವಿಶ್ವವಿದ್ಯಾನಿಲಯದಲ್ಲಿ ಸತತ ನಾಲ್ಕು ವರ್ಷ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ವಾರ್ಷಿಕ ಸಂಚಿಕೆ ವರ್ಷದ ಕಾರ್ಯಕ್ರಮಗಳ ಜೊತೆಗೆ ಸಂಸ್ಥೆಯ ಗುಣಮಟ್ಟದ ಪ್ರತೀಕ ಆಗಿರುತ್ತದೆ ಎಂದು […]
ಮರೆಯಲಾಗದ ಕಾಲೇಜು ನೆನಪು….
ನೆನಪುಗಳ ಮಾತು ಮಧುರ ಎಂಬ ಮಾತು ಎಷ್ಟು ಅರ್ಥಪೂರ್ಣವಾಗಿದೆ ಅಲ್ವ?.. ನನ್ನ ಜೀವನದಲ್ಲಿ ನನಗೆ ಅಚ್ಚೆಳೆದು ಉಳಿದ ನೆನಪು ಎಂದರೆ ಅದು ನನ್ನ ಕಾಲೇಜು ದಿನದ ನೆನಪುಗಳು. ಆ ದಿನವನ್ನೆಲ್ಲಾ ಮತ್ತೇ ನೆನಪಿಸಿಕೊಂಡರೆ ಕಣ್ಣಿನಂಚಿನಲ್ಲಿ ಕಂಬನಿ ಮೂಡುತ್ತದೆ. ಪಿಯುಸಿ ಮುಗಿದಿತ್ತು. ಮುಂದೇನು ಎಂಬ ಪ್ರಶ್ನೆ? ಮನೆಯವರ ಆಸೆ ಈಡೇರಿಸಲಾ? ಅಕ್ಕಪಕ್ಕದ ಮನೆಯವರ ಆಸೆ ಈಡೇರಿಸಲಾ ? ನನ್ನ ಆಸೆ ಈಡೇರಿಸಿಕೊಳ್ಳಲಾ? ಎಂಬ ಗೊಂದಲ.. ಅದೇನೇ ಆಗಲಿ ಎಂದು ಒಂದೆರಡು ಕಾಲೇಜಿನ […]










