ಕುಂದಾಪುರ (ಆ, 11) : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಬೋಧಕ ಮತ್ತು ಬೋಧಕೇತರ ಸಂಘದ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಉಪನ್ಯಾಸಕ ಯೋಗಿಶ್ ಶ್ಯಾನುಭೋಗ್ರವರಿಗೆ ಮತ್ತು ಇನ್ನೊರ್ವರಾದ ಶ್ರೀಲತಾ ಇವರಿಗೆ ಸಂಘದಿಂದ ಉಡುಗೊರೆ ನೀಡಲಾಯಿತು. […]
Tag: bbhc
ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಆ, 10) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಸಾಂಪ್ರದಾಯಿಕವಾಗಿ ಕಳಸಿಗೆಗೆ ಭತ್ತ ಹೊಯ್ಯುವುದರ ಮೂಲಕ ಕುಂದಗನ್ನಡದ ರಾಯಭಾರಿ, ಸಾಂಸ್ಕೃತಿಕ ಚಿಂತಕ ಹಾಗೂ ಶಿಕ್ಷಕ ಮನು ಹಂದಾಡಿಯವರು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾಷೆಯನ್ನು ಬಳಸುವಿಕೆ, ಬೆಳೆಸುವಿಕೆ ತನ್ಮೂಲಕ ಉಳಿಸುವಿಕೆ ಕುರಿತಂತೆ ಹಾಗೂ ಕುಂದಾಪ್ರ ಭಾಷಾ ಸೊಗಡು ರಂಜನೀಯವಾಗಿ ವಿವರಿಸಿದರು. ಮುಖ್ಯ ಅತಿಥಿಯಾಗಿ […]
ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
ಕುಂದಾಪುರ (ಜು, 27) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕ ಆಶ್ರಯದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಜುಲೈ, 26 ರಂದು ಆಯೋಜಿಸಲಾಗಿತ್ತು. ನಿವ್ರತ್ತ ಸೈನಿಕ ರವಿಚಂದ್ರ ಶೆಟ್ಟಿ ತೆಕ್ಕಟ್ಟೆಯವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸೈನ್ಯದ ಸಿಕ್ಕಿಂ ಮತ್ತು ಸಿಯಾಚಿನ್ ದಿನಗಳನ್ನು ನೆನಪಿಸಿ ರೋಮಾಂಚಗೊಳಿಸಿದರು. ಸೈನ್ಯಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವುದಾಗಿಯೂ ತಿಳಿಸಿದರು. ಕಾರ್ಯಕ್ರಮದ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 19) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಕುಂದಾಪುರ (ಜು, 12) : ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಜ್ಯೇಷ್ಠ ಇನ್ಫೋಟೆಕ್ ಸಂಸ್ಥೆ ಜುಲೈ 10ರಂದು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿತ್ತು . ಸಂದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 05 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ನೇಮಕಾತಿ ಪತ್ರವನ್ನು ನೀಡಿದರು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಕೋರಲಾಗಿದೆ.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಪ್ರಾರಂಭ
ಕುಂದಾಪುರ (ಜು, 4): ಡಾ.ಬಿ.ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕಾಲೇಜು ಕುಂದಾಪುರ ಹಾಗೂ ಕುಂದಾಪುರದ ಪ್ರಸಿದ್ಧ ತರಬೇತಿ ಸಂಸ್ಥೆ ಸೃಷ್ಟಿ ಇನ್ಫೋಟೆಕ್, (ಕಿಯೋನಿಕ್ಸ್ ಕುಂದಾಪುರ, ಚಿನ್ಮಯಿ ಆಸ್ಪತ್ರೆಯ ಹತ್ತಿರ) ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವನ್ನು 2021-22 ರ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲಾಗುತ್ತಿದೆ. ಪದವಿ ಕೋರ್ಸುಗಳ ಜೊತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದ್ದು ಉನ್ನತ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರೋನಾ ಲಸಿಕಾ ಅಭಿಯಾನ
ಕುಂದಾಪುರ(ಜೂ,30): ಕಾಲೇಜು ಆರಂಭಕ್ಕೆ ಪೂರ್ವವಾಗಿ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ 19 ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಜೂನ್, 28 ರಂದು 200 ಡೋಸ್ ಲಸಿಕೆ ನೀಡಲಾಗಿದ್ದು, ಇಂದು 600 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಈ ಅಭಿಯಾನ ನಾಳೆಯು ಮುಂದುವರಿಯಲಿದ್ದು, 500 ವಿದ್ಯಾರ್ಥಿಗಳಿಗೆ ಲಸಿಕೆಗಳನ್ನು ನೀಡಲಾಗುವುದು. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯುವ ಮೂಲಕ ಕೋವಿಡ್ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಕೋವಿಡ್ ಲಸಿಕಾ ಅಭಿಯಾನ
ಕುಂದಾಪುರ (ಜೂ, 28): ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕರೋನಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 28 ರಂದು ಕರೋನಾ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು ಮೊದಲ ದಿನದಂದು 200 ಡೋಸ್ ಲಸಿಕೆಯನ್ನು ನೀಡಲಾಗಿದೆ.ಕುಂದಾಪುರ ತಾಲೂಕು ಆರೋಗ್ಯ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ಎನ್. ಎಸ್. ಎಸ್. ಘಟಕದ ವತಿಯಿಂದ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ
ಕುಂದಾಪುರ (ಜೂ, 5): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು (ಉಸಿರನಿತ್ತ ಪ್ರಕೃತಿಯನ್ನು ಹಸಿರಾಗಿಸೋಣ) ಎನ್ನುವ ಗಿಡ ನೆಡುವ ಅಭಿಯಾನಕ್ಕೆ ಜೂನ್ 5ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರ ಮಾರ್ಗದರ್ಶನದೊಂದಿಗೆ ಕಾಲೇಜಿನ ರಾಷ್ಟ್ರೀಯ […]










