ಕುಂದಾಪುರ (ಜೂ, 28): ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕರೋನಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 28 ರಂದು ಕರೋನಾ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು ಮೊದಲ ದಿನದಂದು 200 ಡೋಸ್ ಲಸಿಕೆಯನ್ನು ನೀಡಲಾಗಿದೆ.ಕುಂದಾಪುರ ತಾಲೂಕು ಆರೋಗ್ಯ […]
Tag: bbhc
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ಎನ್. ಎಸ್. ಎಸ್. ಘಟಕದ ವತಿಯಿಂದ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ
ಕುಂದಾಪುರ (ಜೂ, 5): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು (ಉಸಿರನಿತ್ತ ಪ್ರಕೃತಿಯನ್ನು ಹಸಿರಾಗಿಸೋಣ) ಎನ್ನುವ ಗಿಡ ನೆಡುವ ಅಭಿಯಾನಕ್ಕೆ ಜೂನ್ 5ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರ ಮಾರ್ಗದರ್ಶನದೊಂದಿಗೆ ಕಾಲೇಜಿನ ರಾಷ್ಟ್ರೀಯ […]
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ದೀಪಾ ಹಾಗೂ ಜ್ಯೋತಿ ಯವರಿಗೆ ಚಿನ್ನದ ಪದಕ
ಕುಂದಾಪುರ (ಏ, 8): ಮಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 2020ರಲ್ಲಿ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಐದನೇ ಹಾಗೂ ಆರನೇ ಸೆಮಿಸ್ಟರ್ಗಳ ‘ಪೈನಾನ್ಶಿಯಲ್ ಎಕೌಂಟಿಗ್’ ವಿಷಯದಲ್ಲಿ ಕಾಲೇಜಿನ ದೀಪಾ ದೇವಾಡಿಗ ಮತ್ತು ಜ್ಯೋತಿ ಇವರು 300 ರಲ್ಲಿ 300 ಅಂಕ ಗಳಿಸಿ ICAI ನೀಡುವ ಚಿನ್ನದ ಪದಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ.ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಸಂಪನ್ನ
ಕುಂದಾಪುರ (ಮಾ. 30) : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಕುಂದಾಪುರ ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಕ್ಲಬ್ ನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ. ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಉದ್ಘಾಟನೆ
ಕುಂದಾಪುರ (ಮಾ. 30): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಪಂದ್ಯ ಕೂಟವನ್ನು ಉದ್ಘಾಟಿಸಿ ಶುಭಹಾರೈಸಿದರು.ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಡಾ| ಬಿ.ಬಿ. ಹೆಗ್ಡೆ ಕಾಲೇಜು : ಮಾರ್ಚ್ 30 ರಂದು ಮಂಗಳೂರು ವಿ.ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ
ಕುಂದಾಪುರ (ಮಾ. 26) : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಇದೇ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಪಂದ್ಯಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರಿನ ಶಾಸಕರು ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ವಹಿಸಲಿದ್ದು, ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಕುಂದಾಪುರ (ಮಾ, 25) : ರಾಷ್ಟ್ರೀಯ ಶಿಕ್ಷಣ ನೀತಿಯೇ ತಿಳಿಸಿರುವಂತೆ ಪದವಿಯ ಸಂದರ್ಭದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಿಂತ ಮೊದಲು ಉಪನ್ಯಾಸಕರು ಹೆಚ್ಚು ಸಂಶೋಧನೆಯಲ್ಲಿ ತೊಡಗುವಂತಾಗಬೇಕು. ಸಂಶೋಧನಾತ್ಮಕ ಲೇಖನಗಳನ್ನು ಹೇಗೆ ಮತ್ತು ಎಲ್ಲಿ ಪ್ರಕಟಿಸಬೇಕು ಎನ್ನುವುದನ್ನು ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|.ನಾಗೇಂದ್ರ ಎಸ್ ತಿಳಿಸಿಕೊಟ್ಟರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಮಾರ್ಚ್ 24ರಂದು ನಡೆದ “ಪ್ರಾಧ್ಯಾಪಕರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಅಂತರ್ ಕಾಲೇಜು ಸಾಂಪ್ರದಾಯಿಕ ಕ್ರೀಡೆಗಳ ಸಂಪನ್ನ
ಕುಂದಾಪುರ (ಮಾ,22): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಸಮಾರೋಪ ಸಮಾರಂಭ ಮಾರ್ಚ್ 19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಎಸ್.ಎಮ್.ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್, ಕುಂದಾಪುರದ ಭಂಡಾರ್ಕಾರ್ ಆರ್ಟ್ಸ್ ಎಂಡ್ ಸಾಯನ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಂಕರನಾರಾಯಣ, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು : ಸಾಂಪ್ರದಾಯಿಕ ದಿನಾಚರಣೆ
ಸಂಸ್ಕೃತಿ, ಆಚರಣೆಗಳು ಕೇವಲ ಒಂದು ದಿನಕ್ಕಷ್ಟೇ ಸೀಮಿತವಾಗಬಾರದು. ಧಾರ್ಮಿಕ ಕಾರ್ಯಕ್ರಮಗಳಿಗಾದರೂ ಸಾಂಪ್ರದಾಯಿಕ ಉಡುಗೆ ತೊಡುವಂತಾಗಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರಗಳು ಉಳಿಯುವಂತಾದರೆ ಈ ದಿನದ ಆಚರಣೆ ಅರ್ಥಪೂರ್ಣವಾಗುತ್ತದೆ.










