ಕುಂದಾಪುರ (ಮಾ.13) ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2020 -21ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಜಿತ್ ಶೆಟ್ಟಿ ಹಾಗೂ ಭರತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೆಸಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಆಶಾ ಶೆಟ್ಟಿ ಹಾಗೂ ಸ್ವಸ್ತಿ ಶೆಟ್ಟಿ , ಕೋಶಾಧಿಕಾರಿಯಾಗಿ ಯೋಗೀಶ್ ಶ್ಯಾನುಭಾಗ್ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 13 ರಂದು ನಡೆದ […]
Tag: bbhc
ಕ್ರೀಡೆಗೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ : ಮನೀಷ್ ಪೂಜಾರಿ
ಕುಂದಾಪುರ, ಮಾ.(10) : ಅತ್ಯಂತ ಕಿರು ಅವಧಿಯಲ್ಲಿ ಕ್ರೀಡೆಯಲ್ಲಿ ಉತ್ಕ್ರಷ್ಟ ಸಾಧನೆ ಮಾಡುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದ ಗಮನ ಸೆಳೆದ ಸಂಸ್ಥೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜು. ವಿದ್ಯಾರ್ಥಿದೆಸೆಯಲ್ಲಿ ನನ್ನ ಕ್ರೀಡಾಪ್ರತಿಭೆಯನ್ನು ಗುರುತಿಸಿದ ಈ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ ಎಂದು ಖಾಸಗಿ ಕಂಪೆನಿ ಉದ್ಯೋಗಿ ಕಾಲೇಜಿನ ಪೂರ್ವ ವಿದ್ಯಾರ್ಥಿ ಮನೀಷ್ ಪೂಜಾರಿ ಹೇಳಿದರು.ಅವರು ನಗರದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ, (ಮಾ. 10) : ನಗರದ ಗಾಂಧಿ ಮೈದಾನದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಮಾರ್ಚ್ 10ರಂದು ನಡೆಯಿತು.ಕಾಲೇಜು ಪೂರ್ವ ವಿದ್ಯಾರ್ಥಿ ಉದ್ಯಮಿ ಶ್ರೀಧರ್ ಶೆಟ್ಟಿ ಕೆರಾಡಿ, ಯುವಜನ ಸೇವಾ ವಿಭಾಗದ ಕ್ರೀಡಾಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕೃತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜನ ಪ್ರಾಂಶುಪಾಲರಾದ ಪ್ರೊ| […]
ಡಾ| ಬಿ.ಬಿ ಹೆಗ್ಡೆ ಕಾಲೇಜು : ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ವಾಟರ್ ಕೂಲರ್ ಹಸ್ತಾಂತರ
ಒಂದು ಜಿಲ್ಲೆ ಒಂದು ಯೋಜನೆಯಡಿ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿರುವ ಲಯನ್ ಕೆ. ಚಂದ್ರಶೇಖರ್ ರವರು ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಕೊಡುಗೆಯಾಗಿ ನೀಡಿದ ವಾಟರ್ ಕೂಲರ್ ನ್ನು ಲಯನ್ಸ್ ಕ್ಲಬ್ ಇದರ ಜಿಲ್ಲಾ ಗವರ್ನರ್ Ln. ಎನ್.ಎಮ್ ಹೆಗ್ಡೆ ಹಾಗೂ ಮಾಜಿ ಜಿಲ್ಲಾ ಗವರ್ನರ್ ಪ್ರಕಾಶ್.ಟಿ.ಸೋನ್ಸ್ ಉದ್ಘಾಟಿಸಿದರು.
ಬಜೆಟ್ – 2021 ರ ಕುರಿತು ಡಾ| ಶ್ರೀಪತಿ ಕಲ್ಲೂರಾಯರಿಂದ ವಿಶೇಷ ಉಪನ್ಯಾಸ
ಕುಂದಾಪುರ (ಮಾ. 9) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ “ಬಜೆಟ್ 2021 ಕುರಿತು ಚರ್ಚೆ” ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುನಿಯನ್ ಬಜೆಟ್ 2021ರ ಪ್ರಮುಖ ಮುಖ್ಯಾಂಶಗಳಾದ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ ಮತ್ತು ಮೂಲ ಸೌಕರ್ಯ, ಮಹತ್ವಾಕಾಂಕ್ಷೆಯ ಭಾರತ ಕ್ಕೆ ಅಂತರ್ಗತ ಅಭಿವೃದ್ಧಿ, ಮಾನವ ಬಂಡವಾಳವನ್ನು ಉತ್ತೇಜಿಸುವ ,ನಾವೀನ್ಯತೆ ಮತ್ತು ಸಂಶೋಧನೆ […]
ಡಾ|ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಮಾ. 9) : ವಿಧ್ಯಾರ್ಥಿಗಳು ಸಮಾಜದ ಆಗು-ಹೋಗುಗಳ ಕುರಿತು ಸೂಕ್ಷ್ಮವಾಗಿ ಗಮನಿಸುವುದರ ಜತೆಗೆ ವಿಧ್ಯಾರ್ಥಿ ದೆಸೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನ ವಿವಿಧ ವೇದಿಕೆಗಳ ಕ್ರಿಯಾಚಟುವಟಿಕೆಗಳಲ್ಲಿ ತಮ್ಮನ್ನು ಸೃಜನಶೀಲವಾಗಿ ತೊಡಗಿಸಿಕೊಂಡು, ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸತ್ವಜೆಗಳಾಗಬೇಕೆಂದು ಕೊಲ್ಲೂರು ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಮಾರ್ಚ್ 05 ರಂದು ಉದ್ಘಾಟಿಸಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ – ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ (ಮಾ. 8) ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ಜೇಸಿರೇಟ್ ವಿಂಗ್ ಆಫ್ ಜೆಸಿಐ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ.ಶ್ರಾವ್ಯ (ಸಮಾಜಸೇವೆ), ಮಮತಾ ಆರ್. ಶೆಟ್ಟಿ,ಹದ್ದೂರು(ಕ್ರಷಿ) ಲಿರಾ ಜೂಲಿಯೆಟ್ (ವ್ಯವಹಾರಿಕ), ಡಾ.ಸರೋಜಿನಿ (ಶಿಕ್ಷಣ) ಕಾಲೇಜಿನ ವಿದ್ಯಾರ್ಥಿನಿಯರಾದ ನಿವೇದಿತ (ಕ್ರೀಡೆ) ಶುಭಲಕ್ಷ್ಮಿ (ಶಿಕ್ಷಣ) ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಜಾಗೃತಿ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಡಾ|ಬಿ. ಬಿ. ಹೆಗ್ಡೆ ಕಾಲೇಜು : ಉಚಿತ ನ್ಯಾಪ್ಕಿನ್ ವಿತರಣೆ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ ಯುವ ರೆಡ್ಕ್ರಾಸ್ ಘಟಕ, ಮಹಿಳಾ ಘಟಕ ಹಾಗೂ ಭಾರತೀಯ ರೆಡ್ಕ್ರಾಸ್ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ನ್ಯಾಪ್ಕಿನ್ ವಿತರಣೆ’ ಕಾರ್ಯಕ್ರಮ ಮಾರ್ಚ್ 4 ರಂದು ನಡೆಯಿತು.










