ಸ್ವಾಮಿ ವಿವೇಕಾನಂದ ಜಯಂತಿ- ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ರಕ್ತ ದಾನದ ಮಹತ್ವ ಹಾಗೂ ಸಾಮಾಜಿಕ ಜಾಗ್ರತಿ ಮೂಡಿಸುವ ಅಂತರ್ ಕಾಲೇಜು ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ರಕ್ತ ದಾನ ಶಿಬಿರವನ್ನು ಫೆಬ್ರವರಿ 4 ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
Tag: bbhc
ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿಗಳಿಂದ ಶಾನಾಡಿ ಆಲೆಮನೆಗೆ ಭೇಟಿ
ತಾಲೂಕಿನ ಪ್ರಸಿದ್ಧ ನೈಸರ್ಗಿಕ ಬೆಲ್ಲ ತಯಾರಿಕಾ ಕೇಂದ್ರವಾಗಿರುವ ಕೆದೂರು- ಶಾನಾಡಿ ಆಲೆಮನೆ ಬೆಲ್ಲ ತಯಾರಿಕಾ ಘಟಕಕ್ಕೆ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ. ಪ್ರೊಫೆಷನಲ್ (ಸಿಎ, ಸಿಎಸ್, ಸಿ.ಎಮ್.ಎ.) ಬ್ಯಾಚಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದರು.
ಡಾ|ಬಿ. ಬಿ. ಹೆಗ್ಗೆ ಕಾಲೇಜು, ಕುಂದಾಪುರ – ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ.ಎಸ್. ಸುರೇಶ್ ಶೆಟ್ಟಿ ಹೇಳಿದರು.
ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆ: ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜೇಶ್ ಪ್ರಥಮ
ಕುಂದಾಪುರ: ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಹಿಂದೆ ಇದೇ ಶೈಕ್ಷಣಿಕ ವರ್ಷ ಯುವ ರೆಡ್ ಕ್ರಾಸ್ ಘಟಕ ಆಯೋಜಿಸಿದ ಅಂತರ್ ಕಾಲೇಜು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಹ ರಾಜೇಶ್ ಪ್ರಥಮ ಸ್ಥಾನವನ್ನು […]
ಮಹಿಳೆಯರು ಬದುಕಿನ ಸೂಕ್ಷ್ಮತೆಯನ್ನು ಅರಿಯುವುದು ಅಗತ್ಯ : ಶ್ರೀಮತಿ ಸೌಜನ್ಯ ಶೆಟ್ಟಿ
ಮಹಿಳೆಯರು ತಮ್ಮ ಬದುಕಿನ ಸೂಕ್ಷ್ಮತೆಗಳನ್ನು ಅರಿತು ಇತರರೊಂದಿಗೆ ವ್ಯವರಿಸಬೇಕು. ಶೋಷಣೆ, ಕಿರುಕುಳಕ್ಕೊಳಗಾದಾಗ ಸೂಕ್ತ ಕಾನೂನಿನ ಸಲಹೆ ಪಡೆದುಕೊಂಡು ಶೋಷಣೆಯಿಂದ ಮುಕ್ತರಾಗಬೇಕು ಎಂದು ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆ ಉಡುಪಿ ಇದರ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಹೇಳಿದರು.
ಮಂಗಳೂರು ವಿ. ವಿ. ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ : ಡಾ. ಬಿ. ಬಿ. ಹೆಗ್ಡೆ ಕಾಲೇಜು ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪನ ಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ರಕ್ಷಕ-ಶಿಕ್ಷಕ ಸಭೆ
ಕುಂದಾಪುರ, ಜನವರಿ 28 : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಡಾ.ಅತುಲ್ ಕುಮಾರ್ ಶೆಟ್ಟಿ ಹೇಳಿದರು.ಅವರು ಡಾ.ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 28ರಂದು ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ […]
ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆ – ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪ್ಪನಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” ಮಂಗಳೂರು […]
ಡಾ. ಬಿ ಬಿ ಹೆಗ್ಡೆ ಕಾಲೇಜು: ನಿವೃತ್ತ ಯೋಧ ಗಣಪತಿ ಖಾರ್ವಿಯವರಿಗೆ ಸನ್ಮಾನ
ಕಾಲೇಜಿನ 72ನೇ ಗಣರಾಜ್ಯೋತ್ಸವ ಸಂಭ್ರಮ ಹಾಗೂ ಎನ್. ಸಿ.ಸಿ. ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಗಿಲ್ ವೀರ, ಗಡಿ ಭಧ್ರತಾ ಪಡೆಯ ನಿವೃತ್ತ ಯೋಧ ಶ್ರೀ ಗಣಪತಿ ಖಾರ್ವಿ ಬಸ್ರೂರು ಇವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ದೇಶಭಕ್ತಿ ಬೆಳೆಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಮಹತ್ವದ್ದಾಗಿದೆ – ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಯುವಜನತೆಯಲ್ಲಿ ಶಿಸ್ತು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಬಹುಮುಖ್ಯವಾದದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎನ್.ಸಿ.ಸಿ. ಗೆ ಸೇರ್ಪಡೆಗೊಂಡು ದೇಶದ ಸೈನ್ಯದಲ್ಲಿ ಗುರುತಿಸಿಕೊಳ್ಳಬೇಕು ಹಾಗೂ ದೇಶಸೇವೆಗೆ ಸದಾ ಸಿದ್ದರಾಗಬೇಕು ಎಂದು ಬೈಂದೂರಿನ ಶಾಸಕರು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಅಧ್ಯಕ್ಷರಾಗಿರುವ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.










